ಭಯೋತ್ಪಾದನೆ ಮಟ್ಟ ಹಾಕಲು ಕೇಂದ್ರ ಮುಂದಾಗಲಿ


Team Udayavani, Feb 17, 2019, 9:45 AM IST

vij-1.jpg

ವಿಜಯಪುರ: ದೇಶದ ಕಣಿವೆ ರಾಜ್ಯಗಳಲ್ಲಿ ಭಯೋತ್ಪಾದನೆ ಚಟುವಟಿಕೆಗೆ ಸಂಪೂರ್ಣ ಮಟ್ಟ ಹಾಕಲು ಕೇಂದ್ರ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಬೇಕು. ಉಗ್ರಗಾಮಿಗಳ ಮಟ್ಟ ಹಾಕಲು ಕೇಂದ್ರ ಸರ್ಕಾರ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲ ಸಂಪೂರ್ಣ ಬೆಂಬಲ ಕೊಡುತ್ತೇವೆ ಎಂದು ಮುಸ್ಲಿಂ ಧರ್ಮಗುರು,
ಮುತ್ತಹೀದಾ ಕೌನ್ಸಿಲ್‌ ಅಧ್ಯಕ್ಷ ಹಜರತ್‌ ಸೈಯ್ಯದ್‌ತನ್ವೀರ್‌ ಪೀರಾ ಹಾಶ್ಮಿ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮದ ಹೆಸರಿನಲ್ಲಿ ಸೈನಿಕರ ಮೇಲೆ ದಾಳಿ ನಡೆಸುವ ಕೃತ್ಯ ಹೇಡಿತನದ್ದು. ಉಗ್ರಗಾಮಿಗಳಿಗೂ ಹಾಗೂ ಇಸ್ಲಾಂಗೂ ಯಾವುದೇ ಸಂಬಂಧವಿಲ್ಲ. ಕಾಶ್ಮೀರದ ಪುಲ್ವಾಮಾದಲ್ಲಿ ವೀರಯೋಧರ ಪ್ರಾಣ ಕಸಿದವರು ಮನುಷ್ಯರೇ ಅಲ್ಲ. ಭಯೋತ್ಪಾದನೆಯೇ ಅವರ ಧರ್ಮ, ಭಯೋತ್ಪಾದಕರ ಹೆಸರು ಮುಸಲ್ಮಾನರಾಗಿರಬಹುದು. ಇಂತಹ ಕೃತ್ಯ ಎಸಗುವವರು ಮುಸಲ್ಮಾನರೇ ಅಲ್ಲ. ಅವರು ಮನುಷ್ಯರೇ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದ ವೀರಯೋಧರ ಪ್ರಾಣ ಕಳೆದುಕೊಂಡಿದ್ದೇವೆ. ಇದಕ್ಕೆ ಕೇಂದ್ರ ಸರ್ಕಾರ ಸೂಕ್ತ ಪ್ರತ್ಯುತ್ತರ ನೀಡಬೇಕು. ಪ್ರವಾದಿ ಹಜರತ್‌ ಮೊಹ್ಮದ್‌ ಪೈಗಂಬರ್‌ ಅವರು, ಒಬ್ಬ ಅಮಾಯಕ ಮನುಷ್ಯನನ್ನು ಕೊಂದರೆ ಅದು ಇಡಿ ಮಾನವ ಕುಲವನ್ನೇ ಕೊಂದಂತೆ ಎಂದು ಹೇಳಿದ್ದಾರೆ. ಉಗ್ರಗಾಮಿಗಳಿಗೆ ಯಾವುದೇ ಧರ್ಮವಿಲ್ಲ. ಭಯ ಹುಟ್ಟಿಸುವುದು ಮಾತ್ರ ಅವರ ಧರ್ಮ ಎಂದರು.

ಭಯೋತ್ಪಾದಕರ ಇಂತಹ ಕೃತ್ಯಗಳಿಂದ ದೇಶದಲ್ಲಿ ಭಯದ ವಾತಾವರಣ ಮೂಡಿಸಿವೆ. ಈ ರೀತಿಯ ಘಟನೆಗಳು ದೇಶದ ಏಕತೆ ಒಡೆಯುವ ಷಡ್ಯಂತ್ರವಾಗಿವೆ. ಆದರೆ ದೇಶದ ಏಕತೆಯನ್ನು ಯಾವ ಭಯೋತ್ಪಾದಕನೂ ಒಡೆಯಲು ಸಾಧ್ಯವಿಲ್ಲ ಎಂದರು.

ಅಹಿಂದ ಮುಖಂಡ ಎಸ್‌.ಎಂ. ಪಾಟೀಲ (ಗಣಿಹಾರ) ಮಾತನಾಡಿ, ದೇಶದಲ್ಲಿ ನಿರಂತರ ನಡೆಯುತ್ತಿರುವ ಭಯೋತ್ಪಾದನಾ ಕೃತ್ಯಗಳನ್ನು ಸಂಪೂರ್ಣ ಮಟ್ಟ ಹಾಕಬೇಕಿದೆ. ಅಂತಹ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿರುವವರ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ
ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಮುಸಲ್ಮಾನರು ದೇಶಭಕ್ತಿ ಪ್ರದರ್ಶಿಸಬೇಕಾದ ಅವಶ್ಯಕತೆ ಇಲ್ಲ. ಇದು ನಮ್ಮ ಮಾತೃಭೂಮಿ. ನಾವು ಇಲ್ಲಿಯೇ ಜನ್ಮತಾಳಿ ಜೀವನ ನಡೆಸುತ್ತಿದ್ದೇವೆ. ಭಾರತದ ಮುಸ್ಲಿಂರೆಲ್ಲರೂ ದೇಶಭಕ್ತರು. ಈ ಮಾತೃಭೂಮಿ ಬಗ್ಗೆ ಗೌರವ ಹೊಂದಿದ್ದಾರೆ.
ಆದರೆ ಹೃದಯ, ಧರ್ಮವಿಲ್ಲದ ಪಾಪಿ ಭಯೋತ್ಪಾದಕರು ಇಸ್ಲಾಂ ಹೆಸರನ್ನು ದುರ್ಬಳಕೆ ಮಾಡಿಕೊಂಡು, ಧರ್ಮಕ್ಕೆ ಕೆಟ್ಟ ಹೆಸರು ತರುತ್ತಿದ್ದಾರೆ ಎಂದರು.

ಹಿರಿಯ ಮುಖಂಡ ಅಬ್ದುಲ್‌ಹಮೀದ್‌ ಮುಶ್ರೀಫ್‌, ವಿವಿಧ ಪ್ರಗತಿ ಸಂಘಟನೆಗಳ ಪ್ರಮುಖರಾದ ಎಂ.ಸಿ. ಮುಲ್ಲಾ, ನ್ಯಾಯವಾದಿ ಬಷೀರುಜ್ಜಮಾ ಲಾಹೋರಿ, ಅಸ್ಲಂ ಮುಜಾವರ, ಮೊಹ್ಮದ್‌ಯೂಸೂಫ್‌ ಖಾಜಿ, ಅಬ್ದುಲ್‌ರಹಿಮಾನ ನಾಸರ ಇದ್ದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.