ಇಂದಿರಾ ಕ್ಯಾಂಟೀನ್ಗೆ ಉತ್ತಮ ಪ್ರತಿಕ್ರಿಯೆ
Team Udayavani, Feb 17, 2019, 10:04 AM IST
ಬಸವನಬಾಗೇವಾಡಿ: ರಾಜ್ಯಸರಕಾರ ಶುರುಮಾಡಿರುವ ಇಂದಿರಾ ಕ್ಯಾಂಟೀನ್ ಸೇವೆಗೆ ಪಟ್ಟಣ ಸೇರಿದಂತೆ ತಾಲೂಕಿನ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯಸರಕಾರದ ಅನೇಕ ಯೋಜನೆಗಳು ಜಾರಿಗೆ ಬರುವ ಮುನ್ನವೆ ಹಳ್ಳ ಹಿಡಿಯುತ್ತವೆ.
ಇನ್ನೂ ಅನೇಕ ಯೋಜನೆಗಳು ಜಾರಿಗೆ ಬಂದು ಅವುಗಳು ಜನರಿಗೆ ಮತ್ತು ಸಾರ್ವಜನಿಕರಿಗೆ ಸಮರ್ಪಕವಾಗಿ ಮುಟ್ಟುವಲ್ಲಿ ವಿಫಲಗೊಂಡ ಉದಾಹರಣೆಗಳೆ ಹೆಚ್ಚಿವೆ. ಆದರೆ ಬಸವನಬಾಗೇವಾಡಿ ಪಟ್ಟಣದಲ್ಲಿರುವ ಇಂದಿರಾ ಕ್ಯಾಂಟೀನ್ಗೆ ಮಾತ್ರ ಪಟ್ಟಣದ ಸೇರಿದಂತೆ ತಾಲೂಕಿನ ಜನತೆ ಉತ್ತಮ ಪ್ರತಿಕ್ರಿಯೆ ವ್ಯಕ್ತ ಪಡಿಸುತ್ತಿರುವುದರಿಂದ ಈ ಯೋಜನೆ ಸಾರ್ವಜನಿಕರಿಗೆ ಸಹಕಾರಿಯಾಗಿದೆ.
ಬೆಳಗ್ಗೆ ಉಪಹಾರ ಕೇವಲ 5 ರೂ. ಹಾಗೂ ಮಧ್ಯಾಹ್ನದ ಊಟ 10 ರೂ.ಗೆ ನೀಡುವ ಮೂಲಕ ಹಸಿದವರ ಹೊಟ್ಟೆಯನ್ನು ತುಂಬಿಸುವ ಕಾರ್ಯ ಉತ್ತಮವಾಗಿದೆ. ವಿಜಯಪುರ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರ ಹಾಗೂ 5 ತಾಲೂಕು ಕೇಂದ್ರ ಹೊಂದಿರುವ ಜಿಲ್ಲೆಯಲ್ಲಿ ವಿಜಯಪುರ ನಗರದಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭಗೊಂಡರೆ ಬೇರೆ ಯಾವ ತಾಲೂಕು ಕೇಂದ್ರಗಳಲ್ಲಿ ಪ್ರಾರಂಭಗೊಂಡಿಲ್ಲ. ಬಸವನಬಾಗೇವಾಡಿ ಪಟ್ಟಣದಲ್ಲಿ ಫೆ. 2ರಂದು ಇಂದಿರಾ ಕ್ಯಾಂಟೀನ್ಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಹೀಗಾಗಿ ತಾಲೂಕಿನ ಹಾಗೂ ಪಟ್ಟಣದ ಕಾರ್ಮಿಕರು ವಿದ್ಯಾರ್ಥಿಗಳು ಈ ಯೋಜನೆ ಲಾಭ ಪಡೆಯುತ್ತಿದ್ದಾರೆ.
ಈಗ ಪ್ರತಿನಿತ್ಯ ಬೆಳಗ್ಗೆ ಉಪ್ಪಿಟ್ಟು ಹಾಗೂ ಕೇಸರಿಬಾತ್ ನೀಡಲಾಗುತ್ತದೆ. ಮಧ್ಯಾಹ್ನದ ಊಟಕ್ಕೆ ಚಿತ್ರಾನ್ನ ಹಾಗೂ ಮೊಸರನ್ನ ನೀಡಲಾಗುತ್ತದೆ. ಇನ್ನೊಂದು ದಿನ ಅನ್ನ ಸಾಂಬರ್ ಹಾಗೂ ಮೊಸರನ್ನ ನೀಡಲಾಗುತ್ತದೆ. ಆದರೆ ರಾಜ್ಯಸರಕಾರದ ಆದೇಶ ಪ್ರತಿನಿತ್ಯ ಬೆಳಗ್ಗೆ ಬೇರೆ ಬೇರೆ ತಿಂಡಿ ತಿನಿಸು ನೀಡಬೇಕು. ಮಧ್ಯಾಹ್ನ ಊಟಕ್ಕೂ ಕೂಡಾ ಬೇರೆ ಬೇರೆ ಅಡುಗೆಯನ್ನು ತಯಾರಿಸಿ ಬಡಿಸಬೇಕೆಂಬ ಆದೇಶ ಇದೆ.
ಪ್ರಕಾಶ ಬೆಣ್ಣೂರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು