ವಚನ ಸಾಹಿತ್ಯದಿಂದ ಸಾಮಾಜಿಕ ಜಾಗೃತಿ


Team Udayavani, Feb 17, 2019, 11:26 AM IST

cta-1.jpg

ಚಳ್ಳಕೆರೆ: 12ನೇ ಶತಮಾನ ಸರ್ವ ಧರ್ಮಗಳಿಗೂ ಸಮಾನತೆಯನ್ನು ಕಲ್ಪಿಸಿದ ಶತಮಾನವಾಗಿದೆ. ಜಗಜ್ಯೋತಿ ಬಸವೇಶ್ವರರ ಮಾರ್ಗದರ್ಶನದಲ್ಲಿ ಅನೇಕ ಮಹಾನ್‌ ಶ್ರೇಷ್ಠ ವ್ಯಕ್ತಿಗಳು ತಮ್ಮದೇಯಾದ ವಚನಗಳ ಮೂಲಕ ಸಮಾಜದ ಪರಿವರ್ತನೆಗೆ ಕಾರಣರಾಗಿದ್ದಾರೆ. ಅಂತಹ ಶ್ರೇಷ್ಠರಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರೂ ಒಬ್ಬರು ಎಂದು ತಹಶೀಲ್ದಾರ್‌ ಎಂ. ಮಲ್ಲಿಕಾರ್ಜುನ್‌ ಹೇಳಿದರು. ಇಲ್ಲಿನ ತಾಲೂಕು ಕಚೇರಿ ಆವರಣದಲ್ಲಿ ಶನಿವಾರ ನಡೆದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
 
ಜಾತೀಯತೆಯಂತಹ ಮೌಡ್ಯವನ್ನು ತೊಡೆದು ಹಾಕಿ ಪ್ರತಿಯೊಬ್ಬರಲ್ಲೂ ಧಾರ್ಮಿಕ ಜಾಗೃತಿ ಮೂಡಿಸಲು ಶರಣರು ವಚನ ಸಾಹಿತ್ಯದ ಮೂಲಕ ಬೆಳಕು ಚೆಲ್ಲಿದರು. ಅದೇ ರೀತಿ ನಿಜಗುಣ ಅಂಬಿಗರ ಚೌಡಯ್ಯನವರ ಸೇವೆ ಸದಾ ಸ್ಮರಣಿಯ ಎಂದರು.

ರಾಜ್ಯ ಗಂಗಾಮತ ಸಂಘದ ಉಪಾಧ್ಯಕ್ಷ ಗೋವಿಂದರಾಜು ಮಾತನಾಡಿ, ರಾಜ್ಯ ಸರ್ಕಾರ ಅಂಬಿಗರ ಚೌಡಯ್ಯ ನಿಗಮವನ್ನು ಸ್ಥಾಪಿಸುವ ಮೂಲಕ ಸಮುದಾಯದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದೆ. 12ನೇ ಶತಮಾನ ಧಾರ್ಮಿಕ ಚಿಂತಕರ ಶತಮಾನವಾಗಿ ಪರಿಣಮಿಸಿದೆ. ಎಲ್ಲರಲ್ಲೂ ಸಮಾನತೆ ಮೂಡಿಸುವ ವಚನ ಸಾಹಿತ್ಯವನ್ನು ಮನ ಮುಟ್ಟುವಂತೆ ರಚಿಸುವಲ್ಲಿ ನಿಜಗುಣ ಅಂಬಿಗರ ಚೌಡಯ್ಯನವರ ಬುದ್ಧಿ ಕೌಶಲ್ಯ ಮೆಚ್ಚುವಂಥದ್ದು.
ಇಂದಿಗೂ ಅವರ ವಚನಗಳ ಪ್ರತಿಯೊಂದು ಸಾಲು ಕೂಡ ಅರ್ಥಗರ್ಭಿತವಾಗಿದೆ ಎಂದು ಅಭಿಪ್ರಾಯಪಟ್ಟರು.

ನಗರಸಭಾ ಸದಸ್ಯೆ ಸಿ. ಕವಿತಾ ಬೋರಯ್ಯ ಮಾತನಾಡಿ, ಅಂಬಿಗರ ಚೌಡಯ್ಯ ಅವರಂಥಹ  ಶ್ರೇಷ್ಠ ದಾರ್ಶನಿಕರ ಕಾರ್ಯಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಲೆಂದು ಸರ್ಕಾರ ಮಹಾನ್‌ ಪುರುಷರ ಜಯಂತಿ ಆಚರಣೆ ಮಾಡುವುದು ಸ್ತುತ್ಯರ್ಹ ಎಂದರು.
 
ಸಮಾಜಸೇವಕ ಎಸ್‌.ಎಚ್‌. ಸೈಯ್ಯದ್‌ ಮಾತನಾಡಿ, ಅನುಭವ ಮಂಟಪ ಸಮಸ್ತ ಮನುಕುಲಕ್ಕೆ ಧಾರ್ಮಿಕ ಶಕ್ತಿಯನ್ನು ನೀಡುವಲ್ಲಿ ಯಶಸ್ವಿಯಾಯಿತು. ಸಮಾಜದಲ್ಲಿ ಬೇರೂರಿದ್ದ ಮೌಡ್ಯ, ಅನಕ್ಷರತೆ ಮತ್ತು ಅಜ್ಞಾನಗಳನ್ನು ಹೋಗಲಾಡಿಸಲು ವಚನ ಸಾಹಿತ್ಯ ಶ್ರಮಿಸಿತು. ಜಗಜ್ಯೋತಿ ಬಸವೇಶ್ವರರ ಮಾರ್ಗದರ್ಶನದಲ್ಲಿ ಅನೇಕ ಶ್ರೇಷ್ಠ ದಾರ್ಶನಿಕರು ಸಮಾಜದ ಎಲ್ಲಾ ಜಾತಿಗಳನ್ನು ವಚನ ಸಾಹಿತ್ಯದ ಮೂಲಕ ಒಗ್ಗೂಡಿಸಿದರು ಎಂದರು.
 
ಗಂಗಾಮತ ಸಂಘದ ತಾಲೂಕು ಅಧ್ಯಕ್ಷ ಎಸ್‌. ನಾಗರಾಜಪ್ಪ, ಕಾರ್ಯದರ್ಶಿ ಡಿ.ತಿಪ್ಪೇರುದ್ರಪ್ಪ ಹಾಗೂ ಬಿಎಸ್‌ಎನ್‌ಎಲ್‌ ಹನುಮಂತಪ್ಪ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯರಾದ ಟಿ. ಮಲ್ಲಿಕಾರ್ಜುನ, ಜೈತುಂಬಿ, ಕಂದಾಯಾ ಧಿಕಾರಿ ಶರಣಬಸಪ್ಪ, ಎಸ್‌.ಎಂ. ರವಿ, ಗ್ರಾಮಲೆಕ್ಕಾಧಿಕಾರಿ ರಾಜೇಶ್‌, ಹನುಮಂತಪ್ಪ ಮತ್ತಿತರರು ಭಾಗವಹಿಸಿದ್ದರು. ಬಿಸಿಎಂ ಅಧಿಕಾರಿ ಡಿ.ಟಿ. ಜಗನ್ನಾಥ ಸ್ವಾಗತಿಸಿದರು.

ಇಂದು ನಾವು ಅಭಿವೃದ್ಧಿ ಪಥದತ್ತ ಮುನ್ನಡೆದಿದ್ದರೆ ಅದಕ್ಕೆ ಮೂಲ ಕಾರಣ ನಮಗೆ ಸಿಕ್ಕಿರುವ ಧಾರ್ಮಿಕ ಸಂಸ್ಕಾರ. ಇಂತಹ ಧಾರ್ಮಿಕ ಸಂಸ್ಕಾರದ ಮೇಲೆ ಬೆಳಕು ಚೆಲ್ಲಿದವರು ನಿಜಗುಣ ಅಂಬಿಗರ ಚೌಡಯ್ಯನಂತಹ ಮಹಾನ್‌ ಶ್ರೇಷ್ಠರು. ಯುವ ಸಮೂಹ ಇಂತಹ ಮಹಾನ್‌ ದಾರ್ಶನಿಕರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. 
 ಸಿ. ಕವಿತಾ ಬೋರಯ್ಯ, ನಗರಸಭಾ ಸದಸ್ಯೆ. 

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.