ಪಾಕಿಸ್ಥಾನಕ್ಕೆ ಇಲ್ಲ ಎನ್ನಲಾಗದು: ಸೌದಿ
Team Udayavani, Feb 19, 2019, 12:30 AM IST
ಇಸ್ಲಾಮಾಬಾದ್: ಭಾರತ ಮತ್ತು ಪಾಕಿಸ್ಥಾನ ನಡುವೆ ಪುಲ್ವಾಮಾ ಘಟನೆ ಸಂಬಂಧವಾಗಿ ಉದ್ವಿಗ್ನತೆ ಉಂಟಾಗಿರುವಾಗಲೇ ಸೌದಿ ಅರೇಬಿಯಾದ ಭಾವೀ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ 1.2 ಲಕ್ಷ ಕೋಟಿ ರೂ. ಮೌಲ್ಯದ ವ್ಯಾಪಾರ ವಹಿವಾಟುಗಳಿಗೆ ಸಹಿ ಹಾಕಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು “ಪಾಕಿಸ್ಥಾನಕ್ಕೆ ಯಾವುದೇ ರೀತಿಯಲ್ಲಿ ಇಲ್ಲ ಎನ್ನಲಾಗದು’ ಎಂದಿದ್ದಾರೆ. ಅದಕ್ಕೆ ಪೂರಕವಾಗಿ ಸಲ್ಮಾನ್ರಿಗೆ ಪಾಕ್ನ ಅತ್ಯಂತ ಉನ್ನತ ನಾಗರಿಕ ಪ್ರಶಸ್ತಿ “ನಿಶಾನ್-ಎ-ಪಾಕಿಸ್ತಾನ್’ ಅನ್ನು ಪ್ರದಾನ ಮಾಡಲಾಗಿದೆ. ಇದೇ ವೇಳೆ, ಸಲ್ಮಾನ್ ಅವರು ಭಾರತ-ಪಾಕ್ ನಡುವಿನ ವೈಮನಸ್ಸನ್ನು ತಿಳಿಗೊಳಿಸುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ.
ಒಪ್ಪಂದಕ್ಕೆ ಪೂರಕವಾಗಿ ಸೋಮವಾರ ಸೌದಿ ಅರೇಬಿಯಾ ಮತ್ತು ಪಾಕಿಸ್ಥಾನ ಜಂಟಿ ಉದ್ಯಮ ಸಮಾವೇಶ ನಡೆಸಿದವು. ಸೌದಿ ದೊರೆಯ ಭೇಟಿ ಆರ್ಥಿಕವಾಗಿ ಜರ್ಝರಿತವಾಗಿರುವ ಪಾಕಿಸ್ಥಾನಕ್ಕೆ ಕೊಂಚ ನೆಮ್ಮದಿ ತರಲಿದೆ ಎಂದು ವಿಶ್ಲೇಷಿಸಲಾಗಿದೆ. ಮಂಗಳವಾರ ಸೌದಿ ದೊರೆ ಹೊಸದಿಲ್ಲಿಗೆ ಆಗಮಿಸಲಿದ್ದು, ಅವರೊಂದಿಗೆ ಭಯೋತ್ಪಾದನೆ ಕುರಿತೂ ಭಾರತ ಚರ್ಚಿಸಲಿದೆ ಎನ್ನಲಾಗಿದೆ. ತದನಂತರ ಅವರು ಚೀನಾಕ್ಕೆ ತೆರಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್