ಡಿಸೆಂಬರ್ ಒಳಗೆ ಸಾಲ ಮನ್ನಾ ಪೂರ್ಣ
Team Udayavani, Feb 19, 2019, 12:30 AM IST
ಹಾಸನ: ಮುಂದಿನ ಡಿಸೆಂಬರ್ ಒಳಗೆ ರೈತರ ಬೆಳೆ ಸಾಲಮನ್ನಾ ಪೂರ್ಣಗೊಳ್ಳಲಿದೆ ಎಂದು ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸಾಲಮನ್ನಾ ಫಲಾನುಭವಿ ರೈತರಿಗೆ ಋಣಮುಕ್ತ ಪ್ರಮಾಣಪತ್ರ ವಿತರಿಸಿ ಮಾತನಾಡಿದ ಅವರು, ರೈತರ ಸಾಲಮನ್ನಾದ ಮೊತ್ತವನ್ನು ಬ್ಯಾಂಕುಗಳಿಗೆ ನಾಲ್ಕು ಕಂತುಗಳಲ್ಲಿ ಪಾವತಿಸಲು ಈ ಹಿಂದೆ ಚಿಂತನೆ ನಡೆಸಲಾಗಿತ್ತು. ಆದರೆ ಈಗ ಎರಡು ಕಂತುಗಳಲ್ಲಿಯೇ ಸಾಲ ಮನ್ನಾದ ಕಂತುಗಳನ್ನು ಬ್ಯಾಂಕುಗಳಿಗೆ ಪಾವತಿಸಿ ಡಿಸೆಂಬರ್ ಒಳಗೆ ಸಾಲ ಮನ್ನಾ ಪೂರ್ಣಗೊಳಿಸಲಾಗುವುದು ಎಂದರು.
ಟೀಕಾಕಾರರಿಗೆ ಉತ್ತರ: ಸಾಲ ಮನ್ನಾಕ್ಕಾಗಿಯೇ ಫೆ.8 ರಂದು ಮಂಡಿಸಿದ ಬಜೆಟ್ನಲ್ಲಿ ಅನುದಾನ ನಿಗದಿ ಪಡಿಸುವ ಮೂಲಕ ಟೀಕಾಕಾರರಿಗೆ ಉತ್ತರ ನೀಡಿದ್ದೇನೆ ಎಂದ ಅವರು, ಇಂದು ಹಾಸನ ಜಿಲ್ಲೆಯ 2.20 ಲಕ್ಷ ರೈತ ಕುಟುಂಬಗಳ ಸುಮಾರು 1300 ಕೋಟಿ ರೂ. ಕೃಷಿ ಸಾಲ ಮನ್ನಾ ಮಾಡಿದ ಪ್ರಮಾಣ ಪತ್ರಗಳನ್ನು ವಿತರಿಸುವ ಮೂಲಕ ರಾಜ್ಯಕ್ಕೆ ಸಂದೇಶ ನೀಡಲಾಗಿದೆ ಎಂದರು.
ರಾಜ್ಯ ಒಡೆಯುವ ಕೆಲಸವನ್ನು ನಾವು ಎಂದೂ ಮಾಡಲ್ಲ. ರಾಜ್ಯದ ಸರ್ವತೋಮುಖ ಅಭಿವೃದ್ದಿಗೆ ಕೆಲಸ ಮಾಡುವವರು ನಾವು ಎಂಬುದನ್ನು ಉ.ಕ.ದಲ್ಲಿ ಕೈಗಾರಿಕಾ ಕ್ಲಸ್ಟರ್ಗಳ ಅಭಿವೃದ್ದಿಗೆ ಚಾಲನೆ ನೀಡುವ ಮೂಲಕ ಉತ್ತರ ನೀಡಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್