ರಾಮಮಂದಿರ ನಿರ್ಮಾಣ ಖಚಿತ
Team Udayavani, Feb 19, 2019, 12:30 AM IST
ಬೆಳಗಾವಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಖಚಿತ. ಆದರೆ ಅದರಲ್ಲಿ ಬಾಬರ್ ಹೆಸರಿನಲ್ಲಿ ಒಂದೇ ಒಂದು ಇಟ್ಟಿಗೆ ಇರುವುದಿಲ್ಲ ಎಂದು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವಪ್ರಸಾದ ಮೌರ್ಯ ಸ್ಪಷ್ಟಪಡಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಯೋಧ್ಯೆ ವಿವಾದ ಈಗ ನ್ಯಾಯಾಲಯದಲ್ಲಿದೆ. ಆದಷ್ಟು ಬೇಗ ಎಲ್ಲವೂ ಸುಲಲಿತವಾಗಿ ಬಗೆಹರಿಯಲಿದೆ. ಹಿಂದೂಗಳ ಭಾವನೆಯಂತೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ 2014ರ ಚುನಾವಣೆಗಿಂತ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ. ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡಲು ದೇಶದ ಜನರು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಎಲ್ಲ ಕಡೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಹೇಳಿದರು.
ರೈತರ ಪ್ರಗತಿಗೆ ಕ್ರಾಂತಿಕಾರಿ ಕ್ರಮ: ಲೋಕಸಭೆ ಚುನಾವಣೆಯಲ್ಲಿ ವಿರೋಧ ಪಕ್ಷದವರಿಗೆ ಯಾವುದೇ ಕಾರ್ಯಸೂಚಿ ಇಲ್ಲವೇ ಇಲ್ಲ. ಮೋದಿ ಹಠಾವೋ ಎಂಬುದೇ ಅವರ ಏಕೈಕ ಘೋಷಣೆ. ಆದರೆ ನಮ್ಮ ಬಳಿ ಹಲವಾರು ಸಾಧನೆಗಳ ವಿಷಯ ಇದೆ. ಜನರನ್ನು ಬಹಳ ಹತ್ತಿರದಿಂದ ನೋಡಿದ್ದೇವೆ. ಸಂಪರ್ಕ ಮಾಡಿ ಅವರ ಕಷ್ಟಗಳಿಗೆ ಸ್ಪಂದಿಸಿದ್ದೇವೆ. ರೈತರ ಆದಾಯ ಹೆಚ್ಚಿಸಲು ಹಲವಾರು ಕ್ರಾಂತಿಕಾರಿ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದರು.
ಭಾರತೀಯ ಸೇನೆಯಲ್ಲಿ ಸಾಮರ್ಥ್ಯ ಇದೆ. ಪಠಾಣಕೋಟ ಘಟನೆಯ ನಂತರ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಲಾಗಿತ್ತು. ಈಗ ಪುಲ್ವಾಮಾ ಘಟನೆಯ ಬೆನ್ನಲ್ಲೇ ನಮ್ಮ ಸೇನಾ ಯೋಧರು ಉಗ್ರವಾದಿಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಈಗಾಗಲೇ ಇಬ್ಬರು ಪ್ರಮುಖ ನಾಯಕರನ್ನು ಹೊಡೆದುರುಳಿಸಿದ್ದಾರೆ. ಪಾಕಿಸ್ತಾನ ಹಾಗೂ ಉಗ್ರ ಸಂಘಟನೆ ಇದಕ್ಕೆ ತಕ್ಕ ಬೆಲೆ ತೆರಲಿದೆ.
– ಕೇಶವಪ್ರಸಾದ ಮೌರ್ಯ, ಉತ್ತರಪ್ರದೇಶ ಉಪ ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
MUST WATCH
ಹೊಸ ಸೇರ್ಪಡೆ
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
Desi Swara: ಮಸ್ಕತ್- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ