ಬಿಳಿಗಿರಿರಂಗ ವೈದಿಕ ಪರಂಪರೆಯ ಸಾಂಸ್ಕೃತಿಕ ವೀರ


Team Udayavani, Feb 19, 2019, 7:40 AM IST

biligiri.jpg

ಚಾಮರಾಜನಗರ: ಮಂಟೇಸ್ವಾಮಿ, ಮಹದೇಶ್ವರ ಶೈವ ಪರಂಪರೆಯ ಸಾಂಸ್ಕೃತಿಕ ನಾಯಕರಾದರೆ, ಬಿಳಿಗಿರಿರಂಗ ವೈದಿಕ ಪರಂಪರೆಯ ಸಾಂಸ್ಕೃತಿಕ ವೀರ ಎಂದು ಮೈಸೂರು ವಿ.ವಿ. ಜಾನಪದ ವಿಭಾಗ ಮುಖ್ಯಸ್ಥ ಡಾ. ನಂಜಯ್ಯ ಹೊಂಗನೂರು ಅಭಿಪ್ರಾಯಪಟ್ಟರು.

ನಗರದ ಜೆ.ಎಚ್‌. ಪಟೇಲ್‌ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಹಮ್ಮಿಕೊಂಡಿರುವ 9ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸೋಮವಾರ ನಡೆದ ಗೋಷ್ಠಿಯಲ್ಲಿ ಬಿಳಿಗಿರಿ ರಂಗನ ಕಾವ್ಯ ಕುರಿತು ಮಾತನಾಡಿದರು.

ಜಿಲ್ಲೆ ಜನಪದ ಮಹಾಕಾವ್ಯಗಳ ಹಾಗೂ ಕೆಲವು ಜನಪ್ರಿಯ ಕಥನ ಕಾವ್ಯಗಳ ತವರೂರಾಗಿದ್ದು, ಇಲ್ಲಿಯ ಮಂಟೇಸ್ವಾಮಿ ಮತ್ತು ಮಹದೇಶ್ವರ ಕರ್ನಾಟಕದ ಪ್ರಸಿದ್ದ ಜನಪದ ಮಹಾಕಾವ್ಯಗಳಾಗಿದ್ದರೆ ಬಿಳಿಗಿರಿ ರಂಗ ಅಷ್ಟೇ ಪ್ರಸಿದ್ದ ಕಥನ ಕಾವ್ಯವಾಗಿದೆ. ಜನಪದ ಪ್ರೇಮ ಕಾವ್ಯವಾಗಿದೆ ಎಂದರು.

ಸೋಲಿಗರ ಅಸ್ಮಿತೆ: ಬಿಳಿಗಿರಿ ರಂಗನ ಕಾವ್ಯ ಸೋಲಿಗರ ಸಾಂಸ್ಕೃತಿಕ ಚರಿತ್ರೆಯನ್ನು ಕಟ್ಟಿಕೊಡುತ್ತದೆ. ಈ ಕಾವ್ಯದಲ್ಲಿ ಸೋಲಿಗ ಸಮುದಾಯದ ಧಾರ್ಮಿಕ, ಸಾಮಾಜಿಕ, ಜೀವನಾವರ್ತನದ ಹಲವಾರು ಆಚರಣೆಗಳು ಅನಾವರಣಗೊಂಡಿದೆ. ಇದರಿಂದಾಗಿ ಸೋಲಿಗರ ಅಸ್ಮಿತೆ ಗುರುತಿಸಬಹುದಾಗಿದೆ ಎಂದು ಅಭಿಪ್ರಾಯಿಸಿದರು.

ಉತ್ತಮ ಸಂಬಂಧ: ಬಿಳಿಗಿರಿರಂಗನ ಕಾವ್ಯವನ್ನು ಹಾಗೂ ಸೋಲಿಗರ ಸಂಸ್ಕೃತಿಯನ್ನು ಕುರಿತು ನಡೆಸಿರುವ ಅಧ್ಯಯನಗಳು ಅಥವಾ ಸಂಶೋಧನೆಗಳಿಂದ ತಿಳಿದಿರುವುದು ಆಯಾ ಕ್ಷೇತ್ರಗಳಲ್ಲಿ ದೈವ, ಸ್ಥಳೀಯ ಜನರರ ನಡುವೆ ಉತ್ತಮ ಸಂಬಂಧವನ್ನಿಟ್ಟುಕೊಳ್ಳುವುದಕ್ಕಾಗಿ ಹೆಣ್ಣೊಂದನ್ನು ಕೊಡುವ ಪದ್ಧತಿ ಅನಾದಿಕಾಲದಿಂದಲೂ ಬಂದಿದೆ ಈ ಕಥೆ ಸ್ವಾರಸ್ಯಕರವಾಗಿ ಮೂಡಿಬಂದು ಒಂದು ಕಾವ್ಯದೆತ್ತರಕ್ಕೆ ಬೆಳೆದುನಿಂತಿದೆ ಎಂದು ತಿಳಿಸಿದರು.

ಬಿಳಿಗಿರಿರಂಗ ವೈಷ್ಣವ: ಈ ಕಾವ್ಯ ಶೈವ ಧರ್ಮವನ್ನು ಕೊನೆಗಾಣಿಸಿ ವೈಷ್ಣವ ಧರ್ಮವನ್ನು ಪ್ರತಿಷ್ಠಾಪಿಸುವ ಘಟನೆಯನ್ನು ಸಾಂಕೇತಿಕವಾಗಿ ಕಟ್ಟಿಕೊಡುತ್ತದೆ. ಬಿಳಿಗಿರಿರಂಗ ವೈಷ್ಣವನಾಗಿರುವುದರಿಂದ ಆತ ಸಸ್ಯಾಹಾರಿ.ಇಲ್ಲಿನ ಕಾಡು ಮತ್ತು ನಾಡಿನ ಜನಸಮುದಾಯ ಮಾಂಸಾಹಾರಿಗಳಾಗಿರುವುದರಿಂದ ಪ್ರತಿವರ್ಷ ದೊಡ್ಡಜಾತ್ರೆ ಸಂದರ್ಭದಲ್ಲಿ ಕುರಿ ಕೋಳಿಗಳ ಬಲಿಕೊಟ್ಟು ಹರಿಸೇವೆ ಮಾಡುತ್ತಾರೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಕಬ್ಬಹಳ್ಳಿ ಮದ್ದಾನೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಎನ್‌.ಎಸ್‌. ಮಹದೇವಪ್ರಸಾದ್‌ ಆಶಯ ನುಡಿಗಳನ್ನಾಡಿದರು. ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ದೊಡ್ಡಗವಿಬಸಪ್ಪ  ಮಲೆ ಮಹದೇಶ್ವರ ಕಾವ್ಯ ಗಾಯನ ಮಾಡಿದರೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮಸಮುದ್ರ ನಿಂಗಶೆಟ್ಟಿ ಮಂಟೇಸ್ವಾಮಿ ಕಾವ್ಯ ಹಾಡಿದರು.

ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ದೊಡ್ಡಮೋಳೆ ಎಚ್‌.ಸಣ್ಣಶೆಟ್ಟಿ ಬಿಳಿಗಿರಿರಂಗನ ಕಾವ್ಯವನ್ನು ಹಾಡಿದರು.  ಸಮ್ಮೇಳನಾಧ್ಯಕ್ಷ ಡಾ. ಶಿವರಾಜಪ್ಪ, ಜಿಲ್ಲಾ ಕಸಾಪ ಅಧ್ಯಕ್ಷ ವಿನಯ್‌, ಚಂದ್ರಶೇಖರ್‌, ಕೊಮಾರನಪುರ ರವಿಕುಮಾರ್‌, ಬಳೇಪೇಟೆ ಪ್ರಸಾದ್‌, ಅರ್ಕಪ್ಪ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Chamarajanagar: DRFO arrested by Lokayukta while taking bribe

Chamarajanagara: ಲಂಚ ಪಡೆಯುತ್ತಿದ್ದ ಡಿಆರ್‌ಎಫ್‌ಒ ಲೋಕಾಯುಕ್ತ ಬಲೆಗೆ

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.