ಇಷ್ಟಲಿಂಗಕ್ಕಿದೆ ಮನಸ್ಸು ನಿಗ್ರಹ-ಇಷ್ಟಾರ್ಥ ಸಿದ್ಧಿಸುವ ಶಕ್ತಿ


Team Udayavani, Feb 19, 2019, 8:21 AM IST

gul-2.jpg

ಜಾಲಹಳ್ಳಿ: ಮನುಷ್ಯನ ಮನಸ್ಸನ್ನು ನಿಗ್ರಹ ಮಾಡುವಂತಹ ಶಕ್ತಿ ಮತ್ತು ಇಷ್ಟಾರ್ಥಗಳನ್ನು ಈಡೇರಿಸುವಂತ ಶಕ್ತಿ ಇಷ್ಟಲಿಂಗಕ್ಕೆ ಇದೆ. ಆದ್ದರಿಂದ ನಾವು ಪ್ರತಿನಿತ್ಯ ಇಷ್ಟಲಿಂಗ ಪೂಜೆ ಮಾಡಿಕೊಳ್ಳಬೇಕು ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಹೇಳಿದರು. ಸುಕ್ಷೇತ್ರ ವೀರಘೋಟ ಗ್ರಾಮದ ಆದಿ
ಮೌನೇಶ್ವರ ಆಸನಕಟ್ಟೆಯಲ್ಲಿ ಸೋಮವಾರ ನಡೆದ 1.96 ಲಕ್ಷ ಗಣಗಳ ಇಷ್ಟಲಿಂಗ ಪೂಜಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಆಧುನಿಕ ಭರಾಟೆಯಲ್ಲಿ ನಾವು ಧರ್ಮದಿಂದ ಹೊರ ಬರುತ್ತಿದ್ದೇವೆ. ಆಧ್ಯಾತ್ಮದಿಂದ ವಿಮುಖರಾಗುತ್ತಿದ್ದೇವೆ. ಇಷ್ಟಲಿಂಗ ಪೂಜೆ ಮಾಡುವುದರಿಂದ ಮನಸ್ಸು ಶಾಂತವಾಗುತ್ತದೆ. ಸಮಾಜದಲ್ಲಿ ಶಾಂತಿ ನೆಲೆಸಬೇಕು, ಸದೃಢ ಸಮಾಜ ನಿರ್ಮಾಣ ಆಗಬೇಕಾದರೆ ಮನುಷ್ಯ ಮನಸ್ಸನ್ನು
ನಿಗ್ರಹಿಸಬೇಕು. ಆ ಮನಸ್ಸನ್ನು ನಿಗ್ರಹಿಸುವಂತ ಮತ್ತು ಇಷ್ಟಾರ್ಥಗಳನ್ನು ಈಡೇರಿಸುವಂತ ಶಕ್ತಿ ಇಷ್ಟಲಿಂಗಕ್ಕೆ ಇದೆ ಎಂದು ಹೇಳಿದರು. ನಿವೃತ್ತ ಪೊಲೀಸ್‌ ಆಯುಕ್ತ ಶಂಕರ ಬಿದ್ರಿ ಮಾತನಾಡಿ, ಬಹಳ ವಿಶಾಲತೆಯನ್ನು ಹೊಂದಿರುವ ಎಲ್ಲರನ್ನು ಒಟ್ಟಿಗೆ ಕೊಂಡೊಯ್ಯುವ ಧರ್ಮ ವೀರಶೈವ ಧರ್ಮವಾಗಿದೆ.

ಹೊರ ದೇಶಗಳು ಸಮಾಜದಲ್ಲಿನ ಶಾಂತಿ ಕದಡುವಂತಹ ಕೆಲಸ ಮಾಡುತ್ತಿವೆ. ರಾಷ್ಟ್ರ ವಿರೋಧಿಗಳನ್ನು, ಭಯೋತ್ಪಾದಕರನ್ನು ನಿರ್ಮೂಲನೆ ಮಾಡಬೇಕು. ಇದು ಕೇವಲ ಪೊಲೀಸ್‌, ಸೇನೆಯಿಂದ ಆಗುವ ಕಾರ್ಯವಲ್ಲ. ಇದು ಧರ್ಮದಿಂದ ಮಾತ್ರ ಸಾಧ್ಯ. ಧರ್ಮ ಮತ್ತು ಸಂಸ್ಕೃತಿಯನ್ನು ಉಳಿಸಿದರೆ ದೇಶ ಉಳಿಯುತ್ತದೆ. ಕೇವಲ ತೋರಿಕೆಗೆ ಪೂಜೆ ಮಾಡಿದರೆ ಸಾಲದು ಒಳ್ಳೆಯ ಮನಸ್ಸಿಟ್ಟು ಪೂಜೆ ಮಾಡಬೇಕು. ಆಗ ಸಕಲ
ಇಷ್ಟಾರ್ಥ ಗಳು ಈಡೇರಲು ಸಾಧ್ಯ ಎಂದು ಹೇಳಿದರು.

ಶಾಸಕ ಹಾಗೂ ಮಹೋತ್ಸವ ಸಮಿತಿ ಅಧ್ಯಕ್ಷ ಕೆ.ಶಿವನಗೌಡ ನಾಯಕ ಪ್ರಾಸ್ತಾವಿಕ ಮಾತನಾಡಿದರು. ಶ್ರೀಶೈಲ ಪೀಠದ ಜಗದ್ಗುರು ಡಾ| ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯರು ದಿವ್ಯ ಸಾನ್ನಿಧ್ಯ ವಹಿಸಿದ್ದರು. ಬಂಥನಾಳ ವೃಷಭಲಿಂಗ ಸ್ವಾಮೀಜಿ. ಜಂಭಗಿ ಪ್ರಭುದೇವರ ಬೆಟ್ಟದ
ಶಿವಯೋಗೇಶ್ವರ ಸ್ವಾಮೀಜಿ, ದೇವಪುರು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಅಡವಿಲಿಂಗ ಮಹಾರಾಜ ಸ್ವಾಮೀಜಿ, ದೇವರಭೂಪುರ ಗಜದಂಡ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಿದ್ದರು. ಸುಮಾರು 500ಕ್ಕೂ ಹೆಚ್ಚು ಸ್ವಾಮೀಜಿಗಳು, ಸುರಪುರ ಶಾಸಕ ರಾಜುಗೌಡ ನಾಯಕ,
ಮಾನ್ವಿ ಶಾಸಕ ವೆಂಕಟಪ್ಪ ನಾಯಕ, ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ ಅಮರಯ್ಯಸ್ವಾಮಿ ಜಾಲಿಬೆಂಚಿ ನಿರೂಪಿಸಿದರು.

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.