ಪುಲ್ವಾಮಾದಲ್ಲಿ ಪಾಕ್‌ ಕೈವಾಡ ಇಲ್ಲ; ಪ್ರತಿ ದಾಳಿಗೆ ಸಿದ್ಧ : ಇಮ್ರಾನ್


Team Udayavani, Feb 19, 2019, 9:55 AM IST

imran-khan1-700.jpg

ಇಸ್ಲಾಮಾಬಾದ್‌ : ‘ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರ ದಾಳಿಯಲ್ಲಿ ಪಾಕಿಸ್ಥಾನ ಶಾಮೀಲಾಗಿಲ್ಲ’ ಎಂದು ಇಂದು ಮಂಗಳವಾರ ಹೇಳುವ ಮೂಲಕ ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಕೊನೆಗೂ ತಮ್ಮ ಮೌನ ಮುರಿದಿದ್ದಾರೆ. 

‘ಭಾರತ ಒಂದೊಮ್ಮೆ ನಮ್ಮ ದೇಶದ ಮೇಲೆ ದಾಳಿ ಮಾಡಿದರೆ ನಾವೂ ಪ್ರತಿ ದಾಳಿ ನಡೆಸುತ್ತೇವೆ’ ಎಂದು ಹೇಳುವ ಮೂಲಕ  ಪುಲ್ವಾಮಾದಲ್ಲಿ ನಡೆದಿದ್ದ ಉಗ್ರ ದಾಳಿಗೆ 40 ಭಾರತೀಯ ಯೋಧರು ಬಲಿಯಾದುದಕ್ಕೆ ಇಮ್ರಾನ್‌ ಖಾನ್‌ ಯಾವುದೇ ಪಶ್ಚಾತ್ತಾಪ ಪ್ರಕಟಿಸಿಲ್ಲ.

‘ಪುಲ್ವಾಮಾ ದಾಳಿಯ ಬಗ್ಗೆ ನಾನು ಈ ತನಕ ಏನೂ ಮಾತಾಡಿರಲಿಲ್ಲ; ಏಕೆಂದರೆ ಸೌದಿ ಅರೇಬಿಯದ ರಾಜಕುಮಾರ ನಮ್ಮ ದೇಶಕ್ಕೆ ಬಂದಿದ್ದರು. ಆ ವಿಷಯದಲ್ಲಿ ಸೂಕ್ತ ವ್ಯವಸ್ಥೆಗಳನ್ನು ಮಾಡುವಲ್ಲಿ ನಾವು ವ್ಯಸ್ತರಾಗಿದ್ದೆವು.  ಈಗ ಅವರ ನಿರ್ಗಮನದ ಬಳಿಕ ನಾನು ಮಾತನಾಡುತ್ತಿದ್ದೇನೆ. ಪುಲ್ವಾಮಾದಂತಹ ದಾಳಿಗೆ ನೆರವಾಗುವ ಮೂಲಕ ಸೌದಿ ಪ್ರಿನ್ಸ್‌ ಭೇಟಿಯನ್ನು ಹಾಳುಗೆಡಹಲು ನಾವು ಬಯಸಿರಲಿಲ್ಲ; ಮಾತ್ರವಲ್ಲ ಇಂತಹ ದಾಳಿಯಿಂದ ನಮಗೆ ಆಗಬೇಕಾದದ್ದು ಏನೂ ಇಲ್ಲ’ ಎಂದು ಇಮ್ರಾನ್‌ ಹೇಳಿದರು.

“ನಾನು ಭಾರತ ಸರಕಾರವನ್ನು ಕೇಳುವುದಿಷ್ಟೇ : ಕಾಶ್ಮೀರದಲ್ಲಿ ಏನೇ ನಡೆದರೂ ನೀವು ಪಾಕಿಸ್ಥಾನವನ್ನು ದೂರುವುದಾದರೆ, ನೀವು ಪಾಕಿಸ್ಥಾನವನ್ನು ಕೊರಡೆ ಏಟು ತಿನ್ನುವ ಹುಡುಗನನ್ನಾಗಿ ಮಾಡುವಿರಿ. ನೀವು ನಮ್ಮ ಮೇಲೆ ದಾಳಿ ಮಾಡುವಾಗ ನಾವು ಪ್ರತಿ ದಾಳಿ ಮಾಡುವುದಿಲ್ಲ ಎಂದು ನೀವು ಭಾವಿಸಿದರೆ ಅದು ತಪ್ಪು; ನಾವು ಪ್ರತಿ ದಾಳಿ ಮಾಡಿಯೇ ತೀರುತ್ತೇವೆ’ ಎಂದು ಇಮ್ರಾನ್‌ ಹೇಳಿದರು. 

‘ಪುಲ್ವಾಮಾ ದಾಳಿಯ ಬಗ್ಗೆ ನೀವು ನಮಗೆ ಸೂಕ್ತ ಪುರಾವೆ ಕೊಟ್ಟಲ್ಲಿ ನಾವು ತನಿಖೆಗೆ ಖಂಡಿತಾ ನೆರವಾಗುತ್ತೇವೆ ಎಂಬ ಭರವಸೆಯನ್ನು ನಾನು ನಿಮಗೆ ಕೊಡುತ್ತೇನೆ; ನಮ್ಮ ನೆಲವನ್ನು ಯಾರಾದೂರ ಉಗ್ರ ಚಟುವಟಿಕೆಗಳಿಗೆ ಬಳಸುತ್ತಾರೆ ಎಂದಾದರೆ ಅದು ನಮ್ಮ ಹಿತಾಸಕ್ತಿಗೆ ವಿರುದ್ಧವಾಗಿರುವುದರಿಂದ ನಾವು ಕ್ರಮ ತೆಗೆದುಕೊಳ್ಳಲು ಸಿದ್ಧರಿದ್ದೇವೆ; ಉಗ್ರ ನಿಗ್ರಹ ಬಗೆಗಿನ ಮಾತುಕತೆಗೂ ನಾವು ಸಿದ್ಧರಿದ್ದೇವೆ’ ಎಂದು ಇಮ್ರಾನ್‌ ಹೇಳಿದರು. 

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.