ಮೂಢನಂಬಿಕೆ ಕಿತ್ತೂಗೆಯಲು ಬದುಕು ಸವೆಸಿದ ವೀರೇಶ್ವರರು


Team Udayavani, Feb 19, 2019, 9:56 AM IST

vij-2.jpg

ನಾಲತವಾಡ: ಸಮಾಜದಲ್ಲಿ ಮೂಢನಂಬಿಕೆಯನ್ನು ಬುಡ ಸಮೇತ ಕಿತ್ತೂಗೆಯಬೇಕು. ಸರ್ವ ಸಮಾಜದಲ್ಲಿ ಸಮನ್ವತೆ, ಸಹಕಾರ, ಜಾತಿ ಭೇದ ಭಾವಗಳನ್ನು ತೊಲಗಿಸಿ ಪ್ರಾಣಿ ಬಲಿಗೆ ಕಡಿವಾಣ ಹಾಕುವಲ್ಲಿ ತಮ್ಮ ದಿನ ನಿತ್ಯದ ಕಾಯಕದೊಂದಿಗೆ ಅವಿರತವಾಗಿ ಶ್ರಮಿಸಿದ ನಾಲತವಾಡದ ಶರಣ ವೀರೇಶ್ವರರು ದೇಹ ತೊರೆಯುವವರೆಗೂ ಸಂಕಷ್ಟದ ಬದುಕನ್ನೇ ನಡೆಸಿದವರು. ಬರದ ನಾಡು, ಸಂತ ಶರಣ ಬೀಡು ಎಂಬ ಖ್ಯಾತಿ ಪಡೆದ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಂದಿನ ಲಿಲಾವತಿ ಪಟ್ಟಣ ಎಂದು ಕರೆಸಿಕೊಂಡ ಗ್ರಾಮವು ವೀರೇಶ್ವರರ ಸುಮಾರು 40 ಪವಾಡಗಳಿಂದ ನಲವತ್ತವಾಡ ಎಂದು ಕರೆಸಿಕೊಂಡಿತು.

ಕಂಠಿಮಠದ ದೊಡ್ಡಾರ್ಯ ಹಾಗೂ ರುದ್ರಾಂಬೆ ತಾಯಿಯವರ ಉದರಲ್ಲಿ 1848ರಲ್ಲಿ ಮುದ್ದೇಬಿಹಾಳ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಜನಿಸಿದರು. ಪಟ್ಟಣದ ಹಿರೇಮಠದ ರಾಮಗಿರಿ ನಾಥರನ್ನು ವೀರೇಶ್ವರರು ಗುರುವಾಗಿ ಸ್ವೀಕರಿಸಿ, ಚಿಕ್ಕಂದಿನಿಂದಲೇ ಮನೆ ಸಂಸ್ಕಾರದಂತೆ ಗುರುಸೇವೆ
ಲಿಂಗಪೂಜೆ ಜಂಗಮ ಪೂಜೆಯೊಂದಿಗೆ ಅಂದಿನ ಮುಲ್ಕಿ ಪರೀಕ್ಷೆ ಪಾಸಾದರು. ನಂತರ ಪಕ್ಕದ ಸಿದ್ದಾಪುರ ಗ್ರಾಮದ ಗಾಂವಠಿ ಶಾಲೆಯಲ್ಲಿ ದುಡಿಯುತ್ತ ಬಿದರಕುಂದಿಯ ಗುರುದೇವಿ ತಾಯಿಯವರನ್ನು ಮದುವೆಯಾದರು. ನಂತರ ವೃತ್ತಿ ಬಿಟ್ಟ ಶರಣರು, ಭಿಕ್ಷಾಟನೆ ಮೂಲಕ ದಿನಕ್ಕೆ 5 ಮನೆಗಳಿಗೆ
ಹೋಗಿ ಭಿಕ್ಷೆ ಮಾಡುವ ಕಾಯಕ ಶುರು ಮಾಡಿ, ಬೇಕು ಬೇಡ ಎಂಬಂತೆ ಜಂಗಮಗೆ ಬದುಕು ನಡೆಸಿದರು. ಬದುಕಿನಲ್ಲಿ ಹೆಚ್ಚಿದ ಸಂಕಷ್ಟಗಳಿಗೆ ನೊಂದ ಶರಣರು, ಸಂಸಾರದ ಸುಗಮಕ್ಕೆ ನೇಗಿಲು ಹಿಡಿದರು.

ಸಂಸಾರದ ನಡೆಸುತ್ತಲೇ ಗ್ರಾಮದಲ್ಲಿ ಪ್ಲೇಗ್‌ ರೋಗ ಹರಡಿದ್ದ ವೇಳೆ ನಿವಾರಣೆಗೆ ಗ್ರಾಮಸ್ಥರು ಗ್ರಾಮ ದೇವತೆಗೆ ಕೋಣ ಬಲಿಗೆ ಮುಂದಾಗಿದ್ದರು. ಇದನ್ನರಿತ ಶರಣ ವೀರೇಶ್ವರರು, ಕೋಣ ಬಲಿ ತಡೆಗೆ ಯತ್ನಿಸಿದರು. ಆದರೆ ಅದು ಫಲ ನೀಡದ ಕಾರಣ ಮನನೊಂದು ಪತ್ನಿಯೊಂದಿಗೆ ಗ್ರಾಮವನ್ನು ತೊರೆದು ಸೊಲ್ಲಾಪುರಕ್ಕೆ ಹೋದರು. ಅಲ್ಲಿಯೂ ಸಹ ಜನರಿಂದ ಅನೇಕ ಬಾರಿ ಹೊಡೆತಗಳಿಂದ ಸಂಕಷ್ಟಕ್ಕಿಡಾದರು. ಅಪಮಾನ ನಿಂದನೆಗೆ
ಒಳಗಾದ ಇವರು ಅಲ್ಲಿಯ ವಾರದ ಮಲ್ಲಪ್ಪ ಎಂಬುವರಿಗೆ ಸಂತಾನ ಭಾಗ್ಯ ನೀಡುವುದರ ಮೂಲಕ ಪವಾಡ ಮಾಡಿದರು.

ನಂತರ ಕೊಡೆಕಲ್‌ ಗ್ರಾಮದ ಶಿವಯೋಗಿಗಳ ಅಪ್ಪಣೆಯಂತೆ ಪತ್ನಿ ಸಂಗ ತೊರೆದು ಪರಮಾರ್ಥ ಜೀವನ ಪ್ರಾರಂಭಿಸಿದರು. ಇಡೀ ಜೀವನವನ್ನೇ ಸಮಾಜದ ತಿದ್ದುಪಡಿಗಾಗಿ, ಮೂಢನಂಬಿಕೆ ತಡೆಯುವಲ್ಲಿ ನಿರತರಾದ ಶರಣರು 1920ರಲ್ಲಿ ದೇಹ ತೊರೆಯುವ ಮುನ್ನ ಹಾನಗಲ್ಲ ಕುಮಾರ ಸ್ವಾಮಿಗಳ ದರ್ಶನಕ್ಕೆ ಆಸೆ ಹೊಂದಿದರು. ವಿಷಯ ತಿಳಿದ ಹಾನಗಲ್‌ ಶ್ರೀಗಳು ಎಂದೂ ವಾಹನಗಳಲ್ಲಿ ಪ್ರಯಾಣ ಮಾಡದ ಅವರು ವೀರೇಶ್ವರರನ್ನು
ಕಾಣಲು ರೈಲ್ವೆ ಮೂಲಕ ಬಂದು ವೀರೇಶ್ವರರನ್ನು ಕಂಡರು. ನಂತರ 72 ವರ್ಷಗಳ ಸಾರ್ಥಕ ಬದುಕನ್ನು ಮುಗಿಸಿದ ವೀರೇಶ್ವರ ಶರಣರು ಇಂದಿಗೂ ಸಹ ಹೊರ ರಾಜ್ಯ ಮಹಾರಷ್ಟ್ರದಲ್ಲೂ ಸಹ ಅಲ್ಲಿನ ಜನರು ಇವರನ್ನು ಆರಾಧಿಸುತ್ತಿದ್ದಾರೆ.

ಪಟ್ಟಣದಲ್ಲಿರುವ ಶರಣ ದಂಪತಿಗಳ ದೇವಸ್ಥಾನವನ್ನು ಹಿರಿಯರ ಸಹಾಯದಿಂದ ಹಾಗೂ ವೀರೇಶ್ವರರ ಮಹಾಮನೆಯನ್ನು ಅದ್ಭುತ ರೀತಿಯಲ್ಲಿ ನಿರ್ಮಿಸಲಾಗಿದೆ. ಶರಣರ ದೇವಸ್ಥಾನದ ಗೋಪುರವು ಅನುಭವ ಮಂಟಪದಲ್ಲಿ 120ಕ್ಕೂ ಹೆಚ್ಚು ಶರಣರ ಮೂರ್ತಿಗಳನ್ನು ಕೆತ್ತಲಾಗಿದೆ. ವಿವಿಧ
ದಾರ್ಶನಿಕ ಶರಣ ಮೂರ್ತಿಗಳಿಂದ ನಿರ್ಮಾಣಗೊಂಡ ಮಹಾಮನೆ ನೋಡಲು ಜಿಲ್ಲೆ ಸೇರಿದಂತೆ ಹೊರ ರಾಜ್ಯದಿಂದ ಭಕ್ತರು ಆಗಮಿಸುತ್ತಿರವುದಕ್ಕೆ ನಿಜಕ್ಕೂ ಶರಣರ 40 ಪವಾಡಗಳೇ ಕಾರಣ.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.