ಚುನಾವಣಾ ಕರ್ತವ್ಯದಲ್ಲಿ ನಿರ್ಲಕ್ಷ್ಯ ಸಲ್ಲ


Team Udayavani, Feb 19, 2019, 10:32 AM IST

yad-1.jpg

ಯಾದಗಿರಿ: ಚುನಾವಣೆ ಪ್ರಕ್ರಿಯೆಯಲ್ಲಿ ನೇಮಕವಾಗುವ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಗಳ ಪಾತ್ರ ಅತ್ಯಂತ ಜವಾಬ್ದಾರಿಯುತ ಆಗಿರುತ್ತದೆ. ಒಂದು ಸಣ್ಣ ತಪ್ಪು ದೊಡ್ಡ ಸಮಸ್ಯೆಗಳಿಗೆ ಕಾರಣ ಆಗುತ್ತದೆ. ಆದ್ದರಿಂದ ಚುನಾವಣಾ ಕಾರ್ಯದಲ್ಲಿ ಯಾರು ನಿರ್ಲಕ್ಷ್ಯ ವಹಿಸಬಾರದು ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ವಿಧಾನಸಭಾ ಕ್ಷೇತ್ರವಾರು ನೇಮಿಸಿದ ಮಾಸ್ಟರ್‌ ಟ್ರೇನರ್‌ಗಳಿಗೆ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚುನಾವಣೆ ಅವಧಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಸಂಪೂರ್ಣ ಕಾನೂನು ಅಧಿಕಾರವನ್ನು ಭಾರತ ಚುನಾವಣಾ ಆಯೋಗ ನೀಡಿರುತ್ತದೆ. ಶಾಂತಿ ಮತ್ತು ನಿಷ್ಪಕ್ಷಪಾತವಾಗಿ ಚುನಾವಣೆ ನಡೆಯಲು ಎಲ್ಲರೂ ಶ್ರಮಿಸಬೇಕು ಮತ್ತು ಚುನಾವಣೆಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳೊಂದಿಗೆ ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಬೇಕು. ಚುನಾವಣಾ ಕರ್ತವ್ಯದಲ್ಲಿ ಶಿಸ್ತು, ಸಮಯ ಪಾಲನೆ ಮುಖ್ಯ. ಸಮಯ ಪಾಲನೆ ಮಾಡದ, ನಿರ್ಲಕ್ಷ್ಯ ತೋರುವ ಮತ್ತು ಬೇಜವಾಬ್ದಾರಿಯಿಂದ ವರ್ತಿಸುವ ಅಧಿಕಾರಿಗಳಿಗೆ ಶಿಕ್ಷೆ ತಪ್ಪಿದ್ದಲ್ಲ ಎಂದು ಎಚ್ಚರಿಕೆ ನೀಡಿದರು.

ಮಾಸ್ಟರ್‌ ಟ್ರೇನರ್‌ಗಳು ಈ ಹಿಂದಿನ ಚುನಾವಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ ಅನುಭವ ಇರುತ್ತದೆ. ಆದರೆ, ಭಾರತ ಚುನಾವಣಾ ಆಯೋಗವು ಪ್ರತಿ ಚುನಾವಣೆಯಲ್ಲಿ ಕೆಲವು ಸುಧಾರಣೆ ಅಥವಾ ಬದಲಾವಣೆ ಮಾಡುವುದರಿಂದ ಪ್ರತಿಯೊಬ್ಬರಿಗೂ ತರಬೇತಿ ಅವಶ್ಯ ಇರುತ್ತದೆ. ಈ ತರಬೇತಿಯಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಸಮಯೋಚಿತವಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತದೆ. ತರಬೇತಿಯನ್ನು ಸರಿಯಾಗಿ ಅರ್ಥೈಸಿಕೊಂಡರೆ ಮತಗಟ್ಟೆ ಅಧ್ಯಕ್ಷಧಿಕಾರಿ (ಪಿಆರ್‌ಒ) ಮತ್ತು ಸಹಾಯಕ ಮತಗಟ್ಟೆ ಅಧಿಕಾರಿ(ಎಪಿಆರ್‌ಒ)ಗಳಿಗೆ ಚೆನ್ನಾಗಿ ತರಬೇತಿ ನೀಡಲು ಸಾಧ್ಯ ಆಗುತ್ತದೆ ಎಂದು ಸಲಹೆ ನೀಡಿದರು.

ವಿದ್ಯುನ್ಮಾನ ಮತದಾನ ಯಂತ್ರಗಳಾದ ವಿವಿ ಪ್ಯಾಟ್‌, ಬ್ಯಾಲೆಟ್‌ ಯುನಿಟ್‌, ಕಂಟ್ರೋಲ್‌ ಯುನಿಟ್‌, ವಿಎಸ್‌ಡಿಯುಗಳ ಕಾರ್ಯ ನಿರ್ವಹಣೆ ಬಗ್ಗೆ ಮಾಸ್ಟರ್‌ ಟ್ರೇನರ್‌ಗಳು ಸ್ವತಃ ಪ್ರಾಯೋಗಿಕವಾಗಿ ತಿಳಿದುಕೊಳ್ಳಬೇಕು. ಮುಂದೆ ಪಿಆರ್‌ಒ ಮತ್ತು ಎಪಿಆರ್‌ಒಗಳಿಗೆ ತರಬೇತಿ ನೀಡುವಾಗ ಮತಯಂತ್ರಗಳ ಬಳಕೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಲು ಸಾಧ್ಯವಾಗುತ್ತದೆ. ಮಸ್ಟರಿಂಗ್‌, ಡಿಮಸ್ಟರಿಂಗ್‌ ಹಾಗೂ ಮತದಾನ ಕೇಂದ್ರಗಳಲ್ಲಿ ನಿಗದಿತ ಸಮಯದೊಳಗೆ ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಬೇಕು. ಚುನಾವಣೆಗೆ ಸಂಬಂಧಿಸಿದ ಅವರ ಪ್ರತಿಯೊಂದು ಸಮಸ್ಯೆಗಳಿಗೆ ಪರಿಹಾರ ನೀಡುವ ಜವಾಬ್ದಾರಿ ಮಾಸ್ಟರ್‌ ಟ್ರೇನರ್‌ಗಳ ಮೇಲೆ ಇರುತ್ತದೆ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ಜಿ. ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಚುನಾವಣಾ ತಹಶೀಲ್ದಾರ್‌ ಅರುಣಕುಮಾರ ಕುಲಕರ್ಣಿ, ಜಿಲ್ಲಾ ತರಬೇತಿ ನೋಡಲ್‌ ಅಧಿಕಾರಿ ಅಜೀತ್‌ ನಾಯಕ್‌, ಚುನಾವಣಾ ಶಾಖೆಯ ಶಿರಸ್ತೇದಾರ್‌ ಪರಶುರಾಮ, ಖಲೀಲ್‌ ಸಾಬ್‌
ಇದ್ದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.