ಬತ್ತಿದ ಜೀವಸೆಲೆ; ಕುಡಿಯುವ ನೀರಿಗೆ ನಿಲ್ಲದ ಪರದಾಟ 


Team Udayavani, Feb 20, 2019, 1:00 AM IST

battida-jeeva-sele1.jpg

ಕಾಪು: ಕಾಪು ತಾಲೂಕಿನ ಇನ್ನಂಜೆ ಮತ್ತು ಮಜೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಬೇಸಗೆ ಬಂತೆಂದರೆ ಸಾಕು, ನೀರಿನ ಸಮಸ್ಯೆ ಶುರುವಾಗುತ್ತದೆ.  

ಎಲ್ಲೆಲ್ಲಿ ಸಮಸ್ಯೆಗಳು ? 
ಮಜೂರು ಗ್ರಾ.ಪಂ. ವ್ಯಾಪ್ತಿಯ ಪಾದೂರು ಮತ್ತು ಮಜೂರು ಗ್ರಾಮಗಳ ಮೂರು ಕಡೆಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ. ಪಾದೂರು ಗ್ರಾಮದ ಕೂರಾಲು, ಕರಂದಾಡಿ ಶಾಲೆಯ ಬಳಿ, ಕರಂದಾಡಿ ಕಡ್ಸಲೆಬೆಟ್ಟು, ಮಜೂರು ರೈಲ್ವೇ ಬ್ರಿಡ್ಜ್ ಬಳಿಯ ಗರಡಿ ರಸ್ತೆ, ಮಜೂರು ಎಸ್‌ಸಿ ಕಾಲನಿಯ 100ಕ್ಕೂ ಅಧಿಕ ಕುಟುಂಬಗಳಿಗೆ ನೀರಿನ ಸಮಸ್ಯೆ ತೀವ್ರವಾಗಿದೆ.  

ವರ್ಷಕ್ಕೆ 7-8 ಲಕ್ಷ ರೂ. ವ್ಯಯ 
ಮಜೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂರಾಲು, ಕರಂದಾಡಿ ಪ್ರದೇಶಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇಲ್ಲಿ ನೀರಿನಾಶ್ರಯಕ್ಕಾಗಿ ಬೋರ್‌ವೆಲ್‌ ನಿರ್ಮಾಣ, ಬಾವಿ ಶುಚಿತ್ವ, ಪೈಪ್‌ಲೈನ್‌ ಅಳವಡಿಕೆ ಮತ್ತು ಟ್ಯಾಂಕರ್‌ ಮೂಲಕ ನೀರು ಸರಬರಾಜಿಗಾಗಿ ಪ್ರತೀ ವರ್ಷ 7ರಿಂದ 8 ಲಕ್ಷ ರೂ.  ವ್ಯಯಿಸಲಾಗುತ್ತದೆ. 

ಅಂತರ್ಜಲ ಕುಸಿತ 
ಮಜೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ವರ್ಷದಿಂದ ವರ್ಷಕ್ಕೆ ಅತಂರ್ಜಲ ಕುಸಿತವಾಗುತ್ತಿದೆ. ಪಂಜಿತ್ತೂರು, ಕರಂದಾಡಿ ಮತ್ತು ವಳದೂರಿನಲ್ಲಿ ಹರಿಯುವ ಹೊಳೆಗೆ ಅಡ್ಡಲಾಗಿ ಅಣೆಕಟ್ಟು ಹಾಕಿ ಅಂತರ್ಜಲ ವೃದ್ಧಿಗೆ ಗ್ರಾಮಸ್ಥರೇ ಪ್ರಯತ್ನ ನಡೆಸಿದ್ದಾರೆ. ಅದರೊಂದಿಗೆ ಉಳಿಯಾರು ಬಳಿ ಅಣೆಕಟ್ಟು ರಿಪೇರಿಗೆ ವಿಶೇಷ ಆದ್ಯತೆ ನೀಡಬೇಕಿದೆ.

ಇನ್ನಂಜೆ ಗ್ರಾಮ ಪಂಚಾಯತ್‌
ಇನ್ನಂಜೆ ಗ್ರಾ.ಪಂ. ವ್ಯಾಪ್ತಿಯ ಪಾಂಗಾಳ ಸದಾಡಿ, ಗಾಂಧಿ ನಗರ ಮತ್ತು ಸರಸ್ವತಿ ನಗರ, ಮಂಡೇಡಿ ಪರಿಸರದಲ್ಲಿ  ನೀರಿನ ಸಮಸ್ಯೆ ಇದೆ. ಮಳೆ ವಿಳಂಬವಾದರೆ ಇನ್ನಂಜೆ – ಗೋಳಿಕಟ್ಟೆಯಲ್ಲೂ ಸಮಸ್ಯೆ ಉದ್ಭವವಾಗುತ್ತದೆ.  
ನೀರಿನ ಯೋಜನೆಗೆ 6 ಲಕ್ಷ ರೂ.

ಇಲ್ಲಿನ ಗ್ರಾ.ಪಂ. ವ್ಯಾಪ್ತಿಯಲ್ಲಿ  ಬಾವಿ ಕೊರೆಯುವಿಕೆ, ಶುಚಿತ್ವ, ಪಂಪ್‌ ಫಿಟ್ಟಿಂಗ್‌, ಮೋಟಾರ್‌ ಫಿಟ್ಟಿಂಗ್‌, ಪೈಪ್‌ಲೈನ್‌ ಅಳವಡಿಕೆ, ಪೈಪ್‌ಲೈನ್‌ ನಿರ್ವಹಣೆ, ಬೋರ್‌ವೆಲ್‌ ರಚನೆ ಇತ್ಯಾದಿ ಯೋಜನೆಗಳಿಗೆ ಪ್ರತೀ ವರ್ಷ 5ರಿಂದ 6 ಲಕ್ಷ ರೂ. ಖರ್ಚಾಗುತ್ತದೆ. ಪಾಂಗಾಳ ಸದಾಡಿ, ಗಾಂಧಿ ನಗರ, ಸರಸ್ವತಿ ನಗರ, ಮಂಡೇಡಿಗೆ ಕಳೆದ ವರ್ಷ ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗಿದೆ. ಕಳೆದ ವರ್ಷ ಇದಕ್ಕಾಗಿ  87 ಸಾವಿರ ರೂ. ಖರ್ಚಾಗಿದೆ. ನೀರಿನ ಸಮಸ್ಯೆ ಇರುವ ಪ್ರದೇಶಗಳಲ್ಲಿನ ಸರಕಾರಿ ಬಾವಿಗಳನ್ನು ಆಳಗೊಳಿಸಿ ಸಮಸ್ಯೆ ಪರಿಹಾರಕ್ಕೆ ಗ್ರಾ.ಪಂ. ಯೋಜನೆ ರೂಪಿಸಿದೆ. 

ಟ್ಯಾಂಕರ್‌ ಮೂಲಕ ನೀರು ಪೂರೈಕೆ
ಮಜೂರು ಗ್ರಾ.ಪಂ. ವ್ಯಾಪ್ತಿಯಲ್ಲಿ  ಕುಡಿಯುವ ನೀರಿನ ಸಮಸ್ಯೆ ಇರುವ ಪ್ರದೇಶಗಳಿಗೆ ಪ್ರತೀ ವರ್ಷ ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗುತ್ತಿದೆ. ಈ ವರ್ಷವೂ ಟಾಸ್ಕ್ಫೋರ್ಸ್‌ನಡಿ ಅಗತ್ಯ ಪ್ರದೇಶಗಳಿಗೆ ನೀರು ಪೂರೈಸಲಾಗುವುದು. ಪ್ರತ್ಯೇಕ 2 ಬೋರ್‌ವೆಲ್‌ ರಚನೆ ಮಾಡಲಾಗುತ್ತಿದೆ. ನಳ್ಳಿ ನೀರಿನ ಬಿಲ್‌ ಪಾವತಿಸದೆ ಇರುವವರಿಗೆ ನೋಟಿಸ್‌ ನೀಡಿ ನೀರಿನ ಸಂಪರ್ಕ ಕಟ್‌ ಮಾಡುವ ಎಚ್ಚರಿಕೆ ನೀಡಲಾಗುತ್ತಿದೆ. ನೀರು ಪೋಲಾಗದಂತೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ.
– ಪ್ರತಾಪ್‌ಚಂದ್ರ ಶೆಟ್ಟಿ, ಪಿಡಿಒ, ಮಜೂರು ಗ್ರಾಮ ಪಂಚಾಯತ್‌

ಬೇಸಗೆಗೆ ಮೊದಲೇ ಬಾವಿ ನಿರ್ಮಾಣ
ಇನ್ನಂಜೆ ಗ್ರಾ.ಪಂ. ವ್ಯಾಪ್ತಿಯ ಪಾಂಗಾಳ ಪೆರಿಯ ಕೆರೆ ಬಳಿ ಸುಮಾರು 5 ಲಕ್ಷ ರೂ. ವೆಚ್ಚದಲ್ಲಿ ಜಿ.ಪಂ. ಅನುದಾನದಡಿ ಬಾವಿ ರಚನೆಗೆ ಹಣ ಬಿಡುಗಡೆಯಾಗಿದೆ. ಇನ್ನಂಜೆ ಶಾಲೆಯ ಬಳಿ ಶಿಥಿಲಗೊಂಡ ಓವರ್‌ಹೆಡ್‌ ಟ್ಯಾಂಕ್‌ಗೆ ಬದಲಾಗಿ ಹೊಸ ಓವರ್‌ ಹೆಡ್‌ ಟ್ಯಾಂಕ್‌ ರಚನೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಅಗತ್ಯಬಿದ್ದರೆ ಟ್ಯಾಂಕರ್‌ ಮೂಲಕ ನೀರು ಪೂರೈಕೆಗೆ ಅನುದಾನ ಸಿಗಲಿದೆ. ಬೇಸಗೆಗೆ ಮೊದಲೇ ಬಾವಿ ನಿರ್ಮಾಣ ಮಾಡಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು.
– ರಾಜೇಶ್‌ ಶೆಣೈ, ಪಿಡಿಒ, ಇನ್ನಂಜೆ ಗ್ರಾಮ ಪಂಚಾಯತ್‌

– ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.