ಏರೋ ಇಂಡಿಯಾಕ್ಕೆ ಸೂರ್ಯ ಗ್ರಹಣ 


Team Udayavani, Feb 20, 2019, 12:30 AM IST

20.jpg

ಬೆಂಗಳೂರು: ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ “ಏರೋ ಇಂಡಿಯಾ ಶೋ-2019’ಕ್ಕೆ ಒಂದು ದಿನ ಬಾಕಿ ಇರುವಾಗಲೇ ಪ್ರದರ್ಶನದ ಪ್ರಮುಖ ಆಕರ್ಷಣೆಗಳಲ್ಲೊಂದಾದ “ಸೂರ್ಯಕಿರಣ’ ಏರೋಬಾಟಿಕ್‌ ತಂಡದ ಎರಡು ಯುದ್ಧವಿಮಾನಗಳು ತಾಲೀಮು ನಡೆಸುವ ವೇಳೆ ಪರಸ್ಪರ ಢಿಕ್ಕಿ ಹೊಡೆದು ಧರೆಗುರುಳಿದ ಘಟನೆ ಮಂಗಳವಾರ ಯಲಹಂಕ ವಾಯುನೆಲೆ ಸಮೀಪ ನಡೆದಿದೆ. ಪರಿಣಾಮ ಓರ್ವ ಪೈಲಟ್‌ ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ. ವಿಂಗ್‌ ಕಮಾಂಡರ್‌ ಸಾಹಿಲ್‌ ಗಾಂಧಿ ಘಟನೆಯಲ್ಲಿ ಮೃತಪಟ್ಟಿದ್ದು, ವಿಂಗ್‌ ಕಮಾಂಡರ್‌ ವಿ.ಟಿ. ಶೆಳ್ಕೆ ಮತ್ತು ಸ್ಕ್ವಾಡ್ರನ್‌ ಲೀಡರ್‌ ಟಿ.ಜೆ. ಸಿಂಗ್‌ ಗಾಯಗೊಂಡಿದ್ದಾರೆ. 

ಮಿರರ್‌ ಇಮೇಜ್‌ ಕಸರತ್ತು

ಬೆಳಗ್ಗೆ  ವಾಯುನೆಲೆಯಿಂದ ಎಂದಿನಂತೆ ಆಗಸಕ್ಕೆ ಚಿಮ್ಮಿದ ಒಂಬತ್ತು ವಿಮಾನಗಳು ಬಾನಂಗಳದಲ್ಲಿ ಚಿತ್ತಾರ ಮೂಡಿಸುತ್ತಿದ್ದವು. 11.15ರ ಸುಮಾರಿಗೆ ಮಿರರ್‌ ಇಮೇಜ್‌ ರೀತಿ ಕಸರತ್ತು ನಡೆಸುವಾಗ ಎರಡು ವಿಮಾನಗಳ ರೆಕ್ಕೆಗಳು ಆಕಸ್ಮಿಕವಾಗಿ ತಗುಲಿವೆ. ಇದರ ರಭಸಕ್ಕೆ ರೆಕ್ಕೆಗಳು ತುಂಡಾಗಿ ಕೆಳಗೆ ಬಿದ್ದಿದ್ದು, ಎರಡೂ ವಿಮಾನಗಳು ಹತ್ತಿರದ ಇಸ್ರೋ ಲೇಔಟ್‌ನ ಖಾಲಿ ಜಾಗಕ್ಕೆ ಅಪ್ಪಳಿಸಿವೆ. ಇದರ ರಭಸಕ್ಕೆ ವಿಮಾನದ ಅವಶೇಷಗಳು ಅರ್ಧ ಕಿ.ಮೀ. ವ್ಯಾಪ್ತಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ವಾಯುನೆಲೆಯಿಂದ ಐದು ಕಿ.ಮೀ. ದೂರದಲ್ಲಿ ಹಾರಾಟ ನಡೆಸುವಾಗ ಈ ಘಟನೆ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. 

ಏರ್‌ ಶೋದಲ್ಲಿ  ಮೊದಲ ಅವಘಡ
ವೈಮಾನಿಕ ಪ್ರದರ್ಶನದ ವೇಳೆ ದೇಶೀಯ ತಂಡದ ವಿಮಾನ ಪತನ ಹಾಗೂ ಅದರಲ್ಲಿ ಸಾವು ಸಂಭವಿಸಿದ ಮೊದಲ ಘಟನೆ ಇದಾಗಿದೆ. 2015ರಲ್ಲಿ “ರೆಡ್‌ಬುಲ್‌’ ಏರೋಬಾಟಿಕ್‌ ತಂಡದ ವಿಮಾನಗಳ ರೆಕ್ಕೆಗಳು ಪರಸ್ಪರ ತಗಲಿದ್ದವು. ಆದರೆ ಯಾವುದೇ ಅನಾಹುತ ಸಂಭವಿಸಿರಲಿಲ್ಲ. 

ಸೂರ್ಯ ಕಿರಣ ಪ್ರದರ್ಶನ ಇಲ್ಲ
ಅವಘಡದ ಹಿನ್ನೆಲೆಯಲ್ಲಿ ಮೊದಲ ದಿನದ ಸೂರ್ಯಕಿರಣ ಪ್ರದರ್ಶನ ರದ್ದು ಮಾಡಲಾಗಿದೆ. ಉಳಿದ ನಾಲ್ಕು ದಿನವೂ ಅನುಮಾನ ಎಂದು ಏರ್‌ ಮಾರ್ಷಲ್‌ ರಾಕೇಶ್‌ ಕುಮಾರ್‌ ಸಿಂಗ್‌ ಬಡೋರಿಯಾ ಹೇಳಿದ್ದಾರೆ.

ಪ್ಯಾರಾಚೂಟ್‌ನಿಂದ ಹಾರಿದರು
“ಸೂರ್ಯ ಕಿರಣ’ದ ಎರಡು ವಿಮಾನಗಳು ದುರಂತಕ್ಕೀಡಾಗುತ್ತಿದ್ದಂತೆ ಅದರಲ್ಲಿದ್ದ ವಿಂಗ್‌ ಕಮಾಂಡರ್‌ ಹಾಗೂ ಸ್ಕ್ವಾಡ್ರನ್‌ ಲೀಡರ್‌ ಸೇರಿ ಮೂವರೂ ಪ್ಯಾರಾಚೂಟ್‌ ಮೂಲಕ ಹೊರಕ್ಕೆ ಹಾರಿದ್ದಾರೆ. ಆದರೆ, ಆ ಪೈಕಿ ಒಂದು ಪ್ಯಾರಾಚೂಟ್‌ ತೆರೆದುಕೊಳ್ಳಲೇ ಇಲ್ಲ. ಸಾಹಿಲ್‌ ಗಾಂಧಿ ಅವರ ಪ್ಯಾರಚೂಟ್‌ ತೆರೆದುಕೊಳ್ಳದಿರುವುದರಿಂದ ನೆಲಕ್ಕೆ ಬಿದ್ದು ತೀವ್ರ ಗಾಯಗೊಂಡು, ಸಾವನ್ನಪ್ಪಿದರು. ಉಳಿದಿಬ್ಬರ ಪ್ಯಾರಚೂಟ್‌ಗಳು ತೆರೆದುಕೊಂಡಿದ್ದರಿಂದ ಅದೃಷ್ಟವಶಾತ್‌ ಬದುಕುಳಿದರು. ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ  ಹರಿದಾಡುತ್ತಿದೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.