ನಿಂತಿದ್ದ ವಾಹನಗಳಿಗೆ ಸಿ.ಟಿ.ರವಿ ಕಾರು ಡಿಕ್ಕಿ:ಇಬ್ಬರು ಬಲಿ


Team Udayavani, Feb 20, 2019, 12:00 AM IST

ct-ravi.jpg

ಕುಣಿಗಲ್‌: ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ ಪ್ರಯಾ ಣಿಸುತ್ತಿದ್ದ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಎರಡು ಕಾರುಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಉರ್ಕೆಹಳ್ಳಿ ಬೈಪಾಸ್‌ ಬಳಿ ಮಂಗಳವಾರ ಬೆಳಗ್ಗಿನ ಜಾವ ಸಂಭವಿಸಿದೆ.
ಕನಕಪುರ ತಾಲೂಕು ಸೂರನಹಳ್ಳಿ ಗ್ರಾಮದ ಎಸ್‌.ಪಿ. ಸುನಿಲ್‌ ಗೌಡ  (28), ಎಸ್‌.ಜಿ. ಶಶಿಕುಮಾರ್‌ (30) ಮೃತರು. ಮುನಿರಾಜು, ಎಸ್‌.ಎನ್‌. ಜಯಚಂದ್ರ, ಎಸ್‌.ಆರ್‌. ಮಂಜುನಾಥ್‌ ತೀವ್ರ ಗಾಯಗೊಂಡಿ ದ್ದಾರೆ. ಶಾಸಕ ಸಿ.ಟಿ. ರವಿ ಅಪಾಯ ದಿಂದ ಪಾರಾಗಿದ್ದಾರೆ. ಈ ಸಂಬಂಧ ಕುಣಿಗಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಸಿ.ಟಿ. ರವಿ ಸ್ಪಷ್ಟನೆ
ಅಪಘಾತದ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಸಿ.ಟಿ. ರವಿ, ಉರ್ಕೆಹಳ್ಳಿ ರಾ.ಹೆ. 75ರ ಬಳಿ ನಡೆದದ್ದು ದುರದೃಷ್ಟಕರ ಘಟನೆ. ಈ ಬಗ್ಗೆ ನನಗೂ ನೋವಿದೆ. ಪಕ್ಷದ ಕಾರ್ಯಕ್ರಮ ಇದ್ದ ಕಾರಣ ನಾನು ಚೆನ್ನೈಗೆ ಹೋಗಲು ಮಂಗಳವಾರ 11.30ಕ್ಕೆ ಚಿಕ್ಕಮಗಳೂರಿನಿಂದ ಹೊರಟಿದ್ದೆ. ನಾನು ನಿದ್ರಿಸು ತ್ತಿದ್ದೆ. ಚಾಲಕ ಆಕಾಶ್‌ ಕಾರು ಚಲಾಯಿಸುತ್ತಿದ್ದ. ಕಾರು ಉರುಳಿ ಬಿದ್ದು ಏರ್‌ಬ್ಯಾಗ್‌ ಓಪನ್‌ ಆಗಿ ಎದೆ ಹಾಗೂ ಮೈ ಕೈ ತರಚಿ ನೋವು ಆದಾಗ ಎಚ್ಚರಗೊಂಡು ನೋಡಿದಾಗ ಇಬ್ಬರ ಶವ ಬಿದ್ದಿತ್ತು. ಕೂಡಲೇ ಪೊಲೀಸರಿಗೆ, ಆ್ಯಂಬುಲೆನ್ಸ್‌ಗೆ ಫೋನ್‌ ಮಾಡಿ ಶವ ಹಾಗೂ ಗಾಯಾಳು ಗಳನ್ನು ಆಸ್ಪತ್ರೆಗೆ ಕಳಿಸಿಕೊಟ್ಟು ಪೊಲೀಸರ ಅನುಮತಿ ಪಡೆದು ಬೆಂಗಳೂರಿಗೆ ತೆರಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಿಶ್ರಾಂತಿಯಲ್ಲಿದ್ದೇನೆ. ಚೆನ್ನೈ ಕಾರ್ಯಕ್ರಮ ರದ್ದುಪಡಿಸಿದ್ದೇನೆ. ಮೃತರು, ಗಾಯಾಳುಗಳ ಮನೆಗಳಿಗೆ ಹೋಗಿ ಅವರ ಸಂಬಂಧಿಕರಿಗೆ ಸಾಂತ್ವನ ಹೇಳುತ್ತೇನೆ ಎಂದು ಹೇಳಿದರು.

ಸಿ.ಟಿ. ರವಿ ಕಾಫೀನೇ ಕುಡಿಯಲ್ಲ, ಮದ್ಯ ಸೇವಿಸ್ತಾರಾ? 
ಶಾಸಕ ಸಿ.ಟಿ. ರವಿ ಕಳೆದ 18 ವರ್ಷಗಳಿಂದ ಕಾಫಿ, ಟೀ, ಹಾಲನ್ನೇ ಕುಡಿಯುವುದಿಲ್ಲ. ಇನ್ನು ಮದ್ಯ ಸೇವನೆ ಮಾಡುತ್ತಾರೆಯೇ? ಎಂದು ಶಾಸಕ ಸಿ.ಟಿ.ರವಿ ಅವರ ಪತ್ನಿ ಪಲ್ಲವಿ  ಪ್ರಶ್ನಿಸಿದ್ದಾರೆ. ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವುದು ತೀವ್ರ ನೋವುಂಟು ಮಾಡಿದೆ. ಈ ಅಪಘಾತ ಆಕಸ್ಮಿಕ. ಶೀಘ್ರದಲ್ಲಿಯೇ ಮೃತಪಟ್ಟ ಕುಟುಂಬಗಳ ಮನೆಗೆ ತೆರಳಿ ಸಾಂತ್ವನ ಹೇಳುತ್ತೇವೆ. ಅವರಿಗೆ ನೋವು ಸಹಿಸಿಕೊಳ್ಳುವ ಶಕ್ತಿಯನ್ನು ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು.

ಘೇರಾವ್‌
ಘಟನೆಯಿಂದ ಸಿಟ್ಟಿಗೆದ್ದ ಯುವಕರು ಸ್ಥಳದಲ್ಲೇ ಇದ್ದ ಶಾಸಕ ಸಿ.ಟಿ. ರವಿ ಅವ ರಿಗೆ ಘೇರಾವ್‌ ಹಾಕಿ ಧಿಕ್ಕಾರ ಕೂಗಿ ದರು. ಆಸ್ಪತ್ರೆ ಮುಂದೆಯೂ ಮೃತರ ಸಂಬಂಧಿಕರು ಪ್ರತಿ ಭಟನೆ ನಡೆ ಸಿ ದರು. ಮೃತ ಸಂಬಂಧಿ ಪ್ರಸಾದ್‌ ಗೌಡ ಮಾತ ನಾಡಿ, ಶಾಸಕರು ಸೌಜನ್ಯ ಕ್ಕಾದರೂ ಗಾಯಾಳು ಗಳ ಯೋಗಕ್ಷೇಮ ವಿಚಾರಿಸಬಹುದಿತ್ತು. ಆದರೆ ಘಟನೆ ಮುಚ್ಚಿ ಹಾಕಲು ಯತ್ನಿಸಿ ತೆರಳಿದರು ಎಂದು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.