ಗಣೇಶ್ಗೆ ಶೀಘ್ರದಲ್ಲೇ ಸಚಿವ ಸ್ಥಾನ:ರಮೇಶ್ ಜಾರಕಿಹೊಳಿ
Team Udayavani, Feb 20, 2019, 12:30 AM IST
ಹೊಸಪೇಟೆ: ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರಕಾರದ ವಿರುದ್ಧ ಅಸಮಾಧಾನ ಹೊರಹಾಕುತ್ತಲೇ ಬಂದಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಈಗ ಹೊಸ ಬಾಂಬ್ ಸಿಡಿಸಿದ್ದಾರೆ. ರೆಸಾರ್ಟ್ಲ್ಲಿ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿ ಸದ್ಯ ತಲೆಮರೆಸಿಕೊಂಡಿರುವ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಶೀಘ್ರದಲ್ಲೇ ಸಚಿವರಾಗಲಿದ್ದಾರೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಮಂಗಳವಾರ ಶಾಸಕ ಗಣೇಶ್ ಅವರ ಮನೆಗೆ ಭೇಟಿ ನೀಡಿದ್ದ ಅವರು ಪತ್ರಕರ್ತರೊಂದಿಗೆ ಮಾತನಾಡಿ ಮೈತ್ರಿ ಸರಕಾರದ ಬಗ್ಗೆ ನನಗೆ ಅತೃಪ್ತಿ ಇದೆ. ಆದರೆ ಕಾಂಗ್ರೆಸ್ ತೊರೆಯುವುದಿಲ್ಲ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಬಲಿಷ್ಠ ಸಂಘಟನೆಗಾಗಿ ಜಿÇÉೆಯ ಶಾಸಕ ಗಣೇಶನನ್ನು ಸಚಿವರಾಗಿಸಬೇಕು. ಇದಕ್ಕಾಗಿ ನಾನು ಯಾವ ತ್ಯಾಗಕ್ಕೂ ಸಿದ್ಧ ಎಂದರು.
ಗಣೇಶ್ ಯಾವುದೇ ತಪ್ಪು ಮಾಡಿಲ್ಲ
ರೆಸಾರ್ಟ್ ಗಲಾಟೆ ಪ್ರಕರಣದಲ್ಲಿ ಗಣೇಶನನ್ನು ಬಲಿಪಶು ಮಾಡಲಾಗಿದೆ. ಗಣೇಶ್ ಯಾವುದೇ ತಪ್ಪು ಮಾಡಿಲ್ಲ. ಗಲಾಟೆ ನಡೆದಾಗ ಶಾಸಕ ಭೀಮಾನಾಯ್ಕ, ಆನಂದ್ ಸಿಂಗ್ ಮತ್ತು ಗಣೇಶ್ ಮಾತ್ರ ಇದ್ದರು. ಈ ಘಟನೆ ಕುರಿತು ಶಾಸಕ ಭೀಮಾ ನಾಯ್ಕ ಅವರೇ ಸತ್ಯ ಹೊರ ಹಾಕಬೇಕಿದೆ. ಶಾಸಕ ಆನಂದ್ ಸಿಂಗ್, ಗಣೇಶ್ ವಿರುದ್ಧ ನೀಡಿದ ದೂರು ಹಿಂಪಡೆಯಬೇಕೆಂದರು. ಗಣೇಶ್ ತಪ್ಪು ಮಾಡಿಲ್ಲ. ನ್ಯಾಯಾಲಯಕ್ಕೆ ಶರಣಾಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಶಾಸಕ ಭೀಮಾ ನಾಯ್ಕ ಸತ್ಯ ಬಾಯ್ಬಿಡಬೇಕು. ಗಣೇಶ್ ತಪ್ಪಿತಸ್ಥನಾಗಿದ್ದರೆ ಆತನಿಗೂ ಶಿಕ್ಷೆಯಾಗಲಿ. ಆದರೆ ಗಣೇಶ್ನಿಗೆ ಅನ್ಯಾಯವಾದರೆ ಸಮಾಜ ಸುಮ್ಮನೆ ಇರುವುದಿಲ್ಲ ಎಂದರು.
ಕುತೂಹಲ ಮೂಡಿಸಿದ ಭೇಟಿ
ಕಂಪ್ಲಿ ಶಾಸಕ ಗಣೇಶ್ ಅವರ ಹೊಸಪೇಟೆ ನಿವಾಸಕ್ಕೆ ರಮೇಶ್ ಜಾರಕಿಹೊಳಿ ಮಂಗಳವಾರ ಭೇಟಿ ನೀಡಿ ಕುಟುಂಬದವರೊಂದಿಗೆ ಮಾತುಕತೆ ನಡೆಸಿದ್ದು ಕುತೂಹಲಕ್ಕೆ ಕಾರಣವಾಗಿದೆ. ಅತೃಪ್ತ ಶಾಸಕರ ಈ ಭೇಟಿ ಇನ್ನೂ “ಆಟ’ ಬಾಕಿ ಇದೆ ಎಂಬ ಸಂದೇಶವನ್ನು ಪಕ್ಷದ ಮುಖಂಡರಿಗೆ ರವಾನಿಸಿದೆೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ