ನಿರ್ಧಾರ ಬಿಸಿಸಿಐಗೆ ಬಿಟ್ಟದ್ದು: ಕೇಂದ್ರ ಸಚಿವ ರವಿಶಂಕರ್ ಪ್ರಸಾದ್
Team Udayavani, Feb 21, 2019, 12:30 AM IST
ಹೊಸದಿಲ್ಲಿ: ವಿಶ್ವಕಪ್ನಲ್ಲಿ ಭಾರತ ತಂಡ ಪಾಕಿಸ್ಥಾನದ ವಿರುದ್ಧ ಆಡಬಾರದು ಎಂಬ ಆಗ್ರಹಕ್ಕೆ ಸಂಬಂಧಪಟ್ಟಂತೆ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಜಾಣ್ಮೆಯಿಂದ ಪ್ರತಿಕ್ರಿಯಿಸಿದ್ದಾರೆ.
ಪರಿಸ್ಥಿತಿ ಹದಗೆಟ್ಟಿರುವುದರಿಂದ ಜನರ ಬೇಡಿಕೆಯಲ್ಲೂ ಒಂದು ನ್ಯಾಯವಿದೆ. ಆದರೆ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಬಿಸಿಸಿಐ ಮತ್ತು ಐಸಿಸಿಗೆ ಸಂಬಂಧಿಸಿದ್ದು ಎಂದಿದ್ದಾರೆ. ಇನ್ನೊಂದು ಕಡೆ ಬಿಸಿಸಿಐ, ಕೇಂದ್ರ ಸರಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾನು ಬದ್ಧ ಎಂದು ಹೇಳಿಕೊಂಡಿದೆ.
“ಭಾರತ-ಪಾಕಿಸ್ಥಾನ ಸಿನಿಮಾ, ಔದ್ಯಮಿಕ ಸಂಬಂಧ ಕಡಿದುಕೊಳ್ಳುವಾಗ ಕ್ರೀಡೆಯನ್ನೂ ಪರಿಗಣಿಸಬೇಕಾಗುತ್ತದೆ. ಇದರ ಹೊರತು ಬೇರೇನನ್ನೂ ನಾನು ಹೇಳಲು ಬಯಸುವುದಿಲ್ಲ. ವಿಶ್ವಕಪ್ ಒಂದು ಅಂತಾರಾಷ್ಟ್ರೀಯ ಕೂಟವಾಗಿರುವುದರಿಂದ, ಬಿಸಿಸಿಐ-ಐಸಿಸಿ ಸೇರಿ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ’ ಎಂದು ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ