ಇರುವೈಲು: ಶ್ರೀ ದುರ್ಗಾಪರಮೇಶ್ವರೀ ಸಭಾಭವನ ಉದ್ಘಾಟನೆ


Team Udayavani, Feb 21, 2019, 12:30 AM IST

2002md1iruvailu.jpg

ಮೂಡುಬಿದಿರೆ: “ಅಷ್ಟಾವ ಧಾನ ಮತ್ತು ಅನ್ನದಾನದಿಂದ ಶ್ರೀ ದೇವಿಗೆ ಸಂತೃಪ್ತಿ; ನಡೆಸಿಕೊಡುವವ ರಿಗೆ ಪುಣ್ಯಫಲಪ್ರಾಪ್ತಿ. ಶ್ರೀ ದೇವಿಯ ಸನ್ನಿಧಿಯಲ್ಲಿ ಅಷ್ಟಾವಧಾನಕ್ಕಾಗಿ ಸಭಾಂಗಣ, ಅನ್ನದಾನಕ್ಕಾಗಿ ಅನ್ನಛತ್ರ ನಿರ್ಮಾಣ ನಿಜಕ್ಕೂ  ಔಚಿತ್ಯಪೂರ್ಣ, ಪುಣ್ಯಪ್ರದ’ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

ಶ್ರೀ ಕ್ಷೇತ್ರ ಇರುವೈಲು ಶ್ರೀ ದುರ್ಗಾಪರಮೇಶ್ವರೀ ಸನ್ನಿಧಿಯಲ್ಲಿ  ನೂತನ ವಾಗಿ ನಿರ್ಮಿಸಲಾಗಿರುವ ಶ್ರೀ ದುರ್ಗಾಪರಮೇಶ್ವರೀ ಸಭಾಭವನ ಮತ್ತು ಅನ್ನಛತ್ರದ ಉದ್ಘಾಟನ ಸಮಾ ರಂಭದಲ್ಲಿ ಅವರು ಮಾತನಾಡಿದರು.

ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಅವರು ಸಭಾಂಗಣವನ್ನು ಉದ್ಘಾಟಿಸಿದರು. “ಇರುವೈಲು ಕ್ಷೇತ್ರವು ಶ್ರೀ ದೇವಿಯ ಕಾರಣಿಕದ ತಾಣ ವಾಗಿದೆ. ಕ್ಷೇತ್ರದ ಭಕ್ತ ದಿ| ಚಂದು ಪೂಜಾರಿ ಅವರು ತಮ್ಮ ಹೆಸರಲ್ಲಿದ್ದ 7 ಎಕ್ರೆ ಭೂಮಿಯನ್ನು  ದೇವಿಗೊಪ್ಪಿಸಿ, ಅದರ ಆರ್ಥಿಕ ಆಧಾರ ದಿಂದ ಅವರ ಕುಟುಂಬಸ್ಥರು ಈ ಸಭಾಭವನ ಮತ್ತು ಅನ್ನಛತ್ರವನ್ನು ನಿರ್ಮಿಸಿ ಒಪ್ಪಿಸಿದ್ದು ಚಂದು ಪೂಜಾರಿ ಅವರ ಹೆಸರು ಅಜರಾಮರವಾಗಿ ಉಳಿಯು ವಂತಾಗಿದೆ’ ಎಂದು ಹೇಳಿದರು.

ಮಾಜಿ ಸಚಿವ ಕೆ. ಅಭಯಚಂದ್ರ ಅವರು ಅನ್ನಛತ್ರವನ್ನು ಉದ್ಘಾಟಿಸಿ ದರು. ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ ಸಭಾ ಕಾರ್ಯಕ್ರಮ ಉದ್ಘಾಟಿಸಿ, “ಭಕ್ತಿ ಮತ್ತು ಒಗ್ಗಟ್ಟಿದ್ದಾಗ ಕ್ಷೇತ್ರ ಬೆಳಗುವುದು ಎಂಬುದಕ್ಕೆ ಈ ದೇವಸ್ಥಾನ ಸಾಕ್ಷಿ;  ಮುಂದಿನ ಎಪ್ರಿಲ್‌ನಲ್ಲಿ ನಡೆಯಲಿರುವ ಬ್ರಹ್ಮಕಲಶಾಭಿ ಷೇಕದ ಯಶಸ್ಸಿಗೂ ಭಕ್ತಾದಿಗಳು ಸಹಕಾರ ನೀಡಬೇಕು’ ಎಂದು ವಿನಂತಿಸಿದರು.

ರಾಜ್ಯಧಾರ್ಮಿಕ ಪರಿಷತ್‌ನ ಸದಸ್ಯ ಪದ್ಮನಾಭ ಕೋಟ್ಯಾನ್‌, ಡಾ| ಐ. ಶ್ರೀನಿವಾಸ ಆಸ್ರಣ್ಣ, ಕಿನ್ನಿಗೋಳಿ, ನ್ಯಾಯವಾದಿ ಶರತ್‌ ಶೆಟ್ಟಿ  ಡಿ., ಜಯಶ್ರೀ ಅಮರನಾಥ ಶೆಟ್ಟಿ, ವಿಜಯ್‌ ಬೆಳುವಾಯಿ ಉಪಸ್ಥಿತರಿದ್ದರು. ಶಾಸಕ ಉಮಾನಾಥ ಕೋಟ್ಯಾನ್‌ ಅಧ್ಯಕ್ಷತೆ ವಹಿಸಿದ್ದರು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ  ಪೂವಪ್ಪ ಸಾಲಿಯಾನ್‌ ಸ್ವಾಗತಿಸಿದರು. ಗೌರವಾಧ್ಯಕ್ಷ  ಭುಜಂಗ ಆರ್‌. ಶೆಟ್ಟಿ  ದೊಡ್ಡಗುತ್ತು ಪ್ರಸ್ತಾವನೆಗೈದರು. ಸದಸ್ಯೆ ಸುಜಾತಾ ಜೆ. ಶೆಟ್ಟಿ  ವಂದಿಸಿದರು.ನಿತೇಶ್‌ ಕುಮಾರ್‌ ಮಾರ್ನಾಡ್‌, ಪ್ರಸಾದ್‌ ಕೆ. ಶೆಟ್ಟಿ ಇರುವೈಲು ನಿರೂಪಿಸಿದರು. 

ಸಮ್ಮಾನ
ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ,  ದಾನಿ, ದಿ| ಚಂದು ಪೂಜಾರಿ ಅವರ ಸಹೋದರ ಕಾಂತಪ್ಪ ಪೂಜಾರಿ, ಸಂಕುಮಜಲು, ನೂಯಿ ಇರುವೈಲು, ಬೆಂಗಳೂರಿನ ಉದ್ಯಮಿ ಡಾ| ಐ. ಶ್ರೀನಿವಾಸ ಆಸ್ರಣ್ಣ ಕಿನ್ನಿಗೋಳಿ, ಗುತ್ತಿಗೆದಾರ ಮಂಗಳೂರು ದಿವಾಕರ ಕನ್‌ಸ್ಟ್ರಕ್ಷನ್‌ನ ದಿವಾಕರ ಪೂಜಾರಿ, ಗುರುಪುರ ಕಾರಮೊಗರು ರೂಫಿಂಗ್‌ನಮನೋಜ್‌ ಶೆಟ್ಟಿ,  ಒಟ್ಟು ಯೋಜನೆ ಯಲ್ಲಿ ಮುಖ್ಯಪಾತ್ರ ವಹಿಸಿರುವ ಸತೀಶ್ಚಂದ್ರ ಸಾಲ್ಯಾನ್‌ ಪಾಣಿಲ ಅವರನ್ನು ಸಮ್ಮಾನಿಸಲಾಯಿತು. ಕಾಮಗಾರಿಯ ಮೇಲ್ವಿಚಾರಕ ಭವಾನಿಶಂಕರ ಅವರನ್ನು ಗೌರವಿಸ ಲಾಯಿತು.

ಟಾಪ್ ನ್ಯೂಸ್

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.