“ಸಾಂಪ್ರದಾಯಿಕ ಕ್ರೀಡೆಗೆ ಪ್ರೋತ್ಸಾಹ ಅಗತ್ಯ’
Team Udayavani, Feb 21, 2019, 1:00 AM IST
ಕಾರ್ಕಳ: ಶಾರೀರಿಕ ವ್ಯಾಯಾಮ ಮತ್ತು ಮನೋಲ್ಲಾಸಕ್ಕೆ ಕ್ರೀಡೆ ಅತ್ಯಂತ ಸಹಕಾರಿ. ಕ್ರೀಡೆಯನ್ನು ಜೀವನದ ಭಾಗವಾಗಿ ಅಳವಡಿಸಿಕೊಂಡಲ್ಲಿ ದೇಹ ಮತ್ತು ಮನಸ್ಸನ್ನು ಸದೃಢವಾಗಿಡಬಹುದು. ಇಂದಿನ ದಿನಗಳಲ್ಲಿ ಸಾಂಪ್ರದಾಯಿಕ ಕ್ರೀಡೆಗಳಿಗೂ ಅಗತ್ಯ ಪ್ರೋತ್ಸಾಹ ದೊರೆಯಬೇಕೆಂದು ಶ್ರೀ ವೆಂಕಟರಮಣ ದೇವಸ್ಥಾನದ ಮೊಕ್ತೇಸರ ಕೆ. ಜಯರಾಮ ಪ್ರಭು ಅಭಿಪ್ರಾಯಪಟ್ಟರು.
ಫೆ. 20ರಂದು ಶ್ರೀ ವೆಂಕಟರಮಣ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಆಯೋಜಿಸಿದ್ದ ಉಡುಪಿ ವಿಭಾಗದ ಸಾಂಪ್ರದಾಯಿಕ ಜನಪದ ಕ್ರೀಡಾಕೂಟದ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಕ್ರಿಕೆಟ್ನ ಜನಪ್ರಿಯತೆಯಿಂದ ಸಾಂಪ್ರದಾಯಿಕ ಕ್ರೀಡೆಗಳು ಕಳಚಿಕೊಳ್ಳುತ್ತಿವೆ. ಸಾಂಪ್ರದಾಯಿಕ ಕ್ರೀಡೆ ಗಳಿಗೂ ಒತ್ತು ನೀಡಿ, ಜನಪ್ರಿಯಗೊಳಿಸಬೇಕಾ ಅಗತ್ಯ ವಿದೆ ಎಂದು ಅವರು ಪ್ರತಿಪಾದಿಸಿದರು.
ಸಂಸ್ಕೃತಿಯ ಬಿಂಬ
ಸಾಂಪ್ರದಾಯಿಕ ಕ್ರೀಡೆಗಳು ನಮ್ಮ ಸಂಸ್ಕೃತಿ, ಪರಂಪರೆಯ ಬಿಂಬವಾಗಿದ್ದು, ನಮ್ಮ ಸಾಂಸ್ಕೃತಿಕ ವಿಚಾರಧಾರೆಗಳನ್ನು ಅನಾವರಣಗೊಳಿಸುತ್ತವೆ. ಜನಪದ ಕ್ರೀಡೆಗಳಿಗೆ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಮಾನ್ಯತೆ ದೊರೆಯುವಂತಾಗಬೇಕೆಂದು ಎಸ್.ವಿ. ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಕೆ.ಪಿ. ಶೆಣೈ ಹೇಳಿದರು.
ವಿಶ್ವವಿದ್ಯಾಲಯದ ಪ್ರೋತ್ಸಾಹ
ಮಂಗಳೂರು ವಿಶ್ವವಿದ್ಯಾನಿಲಯದ ಸಹಾಯಕ ದೈಹಿಕ ಶಿಕ್ಷಣ ನಿರ್ದೇಶಕ ಡಾ| ಪ್ರಸನ್ನ ಕುಮಾರ್ ಮಾತನಾಡಿ, ಕರ್ನಾಟಕದ ವಿಶ್ವವಿದ್ಯಾನಿಲಯಗಳಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಪ್ರಾದೇಶಿಕ ಕ್ರೀಡೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ವಿಶೇಷ ಮುತುವರ್ಜಿ ವಹಿಸಿ ಕ್ರೀಡಾಕೂಟ ಆಯೋಜಿಸುತ್ತಿದೆ. ಇಂತಹ ಕ್ರೀಡಾಕೂಟಗಳು ನಿರಂತರವಾಗಿ ನಡೆಯಲಿ ಎಂದು ಆಶಿಸಿದರು.
ಮಡಿಕೇರಿ ಪ್ರಾಂತೀಯ ಕ್ರೀಡಾ ವಿಭಾಗದ ಮುಖ್ಯಸ್ಥ ದೊಡ್ಡಣ್ಣ ಬರಮೇಲು ಜನಪದ ಕ್ರೀಡೆ ಕುರಿತಾಗಿ ಮಾಹಿತಿ ನೀಡಿದರು. ಎಸ್.ವಿ. ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಮಿತ್ರಪ್ರಭಾ ಹೆಗ್ಡೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪ್ರಾಧ್ಯಾಪಕಿ ಉಷಾ ಅಂಚನ್ ಸ್ವಾಗತಿಸಿ, ದೈಹಿಕ ಶಿಕ್ಷಣ ನಿರ್ದೇಶಕಿ ಪ್ರಭಾವತಿ ವಂದಿಸಿದರು.
ಸಾಂಪ್ರದಾಯಿಕ ಶೈಲಿ
ಕ್ರೀಡಾಂಗಣವನ್ನು ಸಾಂಪ್ರದಾಯಿಕ ಶೈಲಿಯಲ್ಲಿಯೇ ಸಜ್ಜುಗೊಳಿಸಲಾಗಿತ್ತು. ವೇದಿಕೆ ಹಾಗೂ ಸಭಾಂಗಣವನ್ನು ಅತ್ಯಂತ ಆಕರ್ಷಕವಾಗಿ ನಿರ್ಮಾಣ ಮಾಡಲಾಗಿದ್ದು, ಶಾಮಿಯಾನದ ಬದಿಗಳು ಬಣ್ಣ ಬಣ್ಣದ ಗೆರಟೆಗಳ ಕಲಾಕೃತಿಗಳಿಂದ ಕಂಗೊಳಿಸುತ್ತಿದ್ದವು. ಲಗೋರಿ, ಕುಂಟೆಬಿಲ್ಲೆ, 3 ಕಾಲಿನ ಓಟ, ಹಾಳೆ ಓಟ ಸ್ಪರ್ಧೆಗಳು ನಡೆದಿದ್ದು, 8 ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು