ಪಯಸ್ವಿನಿ ನದಿಯಲ್ಲಿ ಹೂಳು: ವರದಿಗೆ ಸೂಚನೆ
Team Udayavani, Feb 21, 2019, 12:45 AM IST
ಸುಳ್ಯ: ಕೊಡಗು ಪ್ರಾಕೃತಿಕ ವಿಕೋಪದ ಪರಿಣಾಮ ಪಯಸ್ವಿನಿ ನದಿಯಲ್ಲಿ ಹೂಳು ತುಂಬಿ ನೀರಿನಾಳ ಪ್ರದೇಶ ಮುಚ್ಚಿರುವ ಬಗ್ಗೆ ಪರಿಶೀಲನೆ ನಡೆಸಿ ಗುರುವಾರದೊಳಗೆ ವರದಿ ನೀಡುವಂತೆ ಸಹಾಯಕ ಆಯುಕ್ತರಿಗೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಸೂಚನೆ ನೀಡಿದ್ದಾರೆ.ಈ ಕುರಿತಂತೆ ಉದಯವಾಣಿ ಪತ್ರಿಕೆಯು ಫೆ. 16ರ ಸಂಚಿಕೆಯಲ್ಲಿ “ಪಯಸ್ವಿನಿ ಆಳ ಕಣ್ಮರೆ: ಹೂಳು ತುಂಬಿ ಬರಿದು’ ವರದಿ ಪ್ರಕಟಿಸಿತ್ತು.
ಸಮಸ್ಯೆಯ ಗಂಭೀರತೆಯ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರು, ಹೂಳು ತೆಗೆಯುವ ಬಗ್ಗೆ ಇಲಾಖಾಧಿಕಾರಿಗಳು ಪರಿಶೀಲನೆ ನಡೆಸಬೇಕು, ಕೃಷಿ ಭೂಮಿಗೆ ನೀರೊದಗಿಸುವ ಅಗತ್ಯ ಇರುವ ಕಾರಣ ಸ್ಥಳಕ್ಕೆ ಭೇಟಿ ನೀಡಿ ವರದಿ ನೀಡಬೇಕು ಎಂದು ಅವರು ಸಹಾಯಕ ಆಯಕ್ತ ಕೃಷ್ಣಮೂರ್ತಿ ಅವರಿಗೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ