ಆನ್‌ಲೈನ್‌ನಲ್ಲಿ  ಕೃಷಿ ಭೂಮಿ ಪರಿವರ್ತನೆ: ದೇಶಪಾಂಡೆ


Team Udayavani, Feb 21, 2019, 1:02 AM IST

deshpande.jpg

ಬೆಂಗಳೂರು: ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಬದಲಾಯಿಸಲು ಭೂ ಪರಿವರ್ತನ ಪ್ರಕ್ರಿಯೆ ಸರಳೀಕರಣಗೊಳಿಸಲಾಗಿದ್ದು ಆನ್‌ಲೈನ್‌ ಮೂಲಕವೂ ಅರ್ಜಿ ಸಲ್ಲಿಸಬಹುದು ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದ್ದಾರೆ.

 ಹೊಸ ಪದ್ಧತಿಯಲ್ಲಿ 60 ದಿನಗಳಲ್ಲಿ ಭೂ ಪರಿವರ್ತನ ಅರ್ಜಿ ವಿಲೇವಾರಿಯಾಗಲಿದ್ದು 120 ದಿನ ಆದರೂ ಇತ್ಯರ್ಥವಾಗದಿದ್ದರೆ ಇತ್ಯರ್ಥವಾಗಿದೆ ಎಂದು ಭಾವಿಸಿಕೊಳ್ಳಬಹುದಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ  ತಿಳಿಸಿದರು.

ಅರ್ಜಿದಾರರು Landrecords.karnataka.gov.in  ಭೇಟಿ ನೀಡಿ ತಮ್ಮ ಯೂಸರ್‌ ಐಡಿ ಸೃಜಿಸುವ ಮೂಲಕ ಮೊದಲಿಗೆ ಅಫಿಡವಿಟ್‌ ಜನರೇಷನ್‌ ಲಿಂಕ್‌ ಮೂಲಕ ಅಗತ್ಯ ಮಾಹಿತಿ ತುಂಬಿ ಸಿಸ್ಟಮ್‌ ಜನರೇಟಡ್‌ ಅಫಿಡವಿಟ್‌ ಪಡೆದು ಅದನ್ನು 200 ರೂ. ಛಾಪಾ ಕಾಗದದಲ್ಲಿ ಮುದ್ರಿಸಿ ನೋಟರಿಯವರಿಂದ ದೃಢೀಕರಿಸಿ  ಮತ್ತೆ ಜಾಲತಾಣದಲ್ಲಿ ಅಫಿಡವಿಟ್‌ ಸ್ಕ್ಯಾನ್‌ ಮಾಡಿ ಅಪ್‌ಲೋಡ್‌ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಚಿವ ದೇಶಪಾಂಡೆ ವಿವರಿಸಿದರು.

ದಿನಾಂಕ ವಿಸ್ತರಣೆ 
ರಾಜ್ಯದ ಗ್ರಾಮಾಂತರ ಮತ್ತು ನಗರ ಪ್ರದೇಶದ ಸರಕಾರಿ ಜಮೀನುಗಳಲ್ಲಿ 2015 ಜನವರಿ ಪೂರ್ವದಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ವಾಸದ ಮನೆ ಸಕ್ರಮಗೊಳಿಸಲು 2019ರ  ಮಾ. 31 ರವರೆಗೂ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದವರು ತಿಳಿಸಿದರು.

ಅರ್ಜಿ ಸಲ್ಲಿಸಲು 2018ರ ಸೆ. 16 ರವರೆಗೆ ನೀಡಿದ್ದ ಗಡುವು ಅಂತ್ಯಗೊಂಡ ಹಿನ್ನೆಲೆಯಲ್ಲಿ ಸಾರ್ವಜನಿಕರ ಮನವಿ ಮೇರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಹೇಳಿದರು. ಸರಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿರುವವರ ಜಮೀನು ಸಕ್ರಮಗೊಳಿಸಲು ಮತ್ತು ಅರ್ಜಿ ಸಲ್ಲಿಸಲು 2009ರ ಮಾ. 16ರವರೆಗೆ ಕಾಲಾವಕಾಶ ನೀಡಲಾಗಿದೆ. ಅದೇ ರೀತಿ ಬಗರ್‌ ಹುಕುಂ ಅಡಿ ನಮೂನೆ 50 ಮತ್ತು 53ರಲ್ಲಿ ಸ್ವೀಕೃತವಾದ ಅರ್ಜಿಗಳು ಇನ್ನೂ ವಿಲೇವಾರಿಗೆ ಬಾಕಿ ಇರುವುದರಿಂದ 2020ರ  ಎ. 26ರವರೆಗೆ ಗಡುವು ವಿಸ್ತರಿಸಲಾಗಿದೆ ಎಂದು ತಿಳಿಸಿದರು.

ಹೊಸ ತಾಲೂಕುಗಳು ಶೀಘ್ರ ಕಾರ್ಯಾರಂಭ 
ರಾಜ್ಯದಲ್ಲಿ ರಚನೆಯಾಗಿರುವ ಹೊಸ ತಾಲೂಕುಗಳು ಶೀಘ್ರ ಕಾರ್ಯಾರಂಭ ಮಾಡಲಿವೆ. ಈಗಾಗಲೇ ಕಂದಾಯ ಇಲಾಖೆ ತನ್ನ ಕಾರ್ಯ ಮಾಡುತ್ತಿದೆ. ಉಳಿದ ಇಲಾಖೆಗಳು ಕಾರ್ಯ ಆರಂಭಿಸ ಬೇಕಿದೆ. ಅದಕ್ಕಾಗಿ ಸಿಬಂದಿ ನೇಮಕ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಕಂದಾಯ ಸಚಿವ ಆರ್‌. ವಿ. ದೇಶಪಾಂಡೆ ತಿಳಿಸಿದರು. ಅರಣ್ಯ ಮತ್ತು ಕಂದಾಯ ಇಲಾಖೆಯ ಜಂಟಿ ಸಮೀಕ್ಷೆ ನಡೆಯುತ್ತಿದ್ದು ಕಂದಾಯ ಇಲಾಖೆಯಿಂದ ಕೆಲವು ಮಾಹಿತಿ ನೀಡಲಾಗಿದೆ. ಕೆಲವೆಡೆ ಅರಣ್ಯ ಮತ್ತು ಕಂದಾಯ ಇಲಾಖೆ ಜಮೀನಿನ ಬಗ್ಗೆ ತಕರಾರು ಇದ್ದು ಅದನ್ನು ಸರಿಪಡಿಸಲಾಗುವುದು ಎಂದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.