ಮಾಲೂರು ಕೆರೆ ಮಣ್ಣಿನ ಮೇಲೆ ಕೇರಳ ಕಣ್ಣು


Team Udayavani, Feb 21, 2019, 9:46 AM IST

kol-1.jpg

ಮಾಲೂರು: ತಾಲೂಕಿನಲ್ಲಿರುವ ಇಟ್ಟಿಗೆ ಕಾರ್ಖಾನೆಗಳಿಗೆ ಮಾತ್ರ ಸೀಮಿತವಾಗಿದ್ದ ತಾಲೂಕಿನ ಕೆರೆಗಳಲ್ಲಿನ ಕೆನೆ ಪದರದ ಜೇಡಿ ಮಣ್ಣಿನ ಮೇಲೆ ನೆರೆಯ ಕೇರಳ ರಾಜ್ಯದವರ ಮೇಲೆ ಬಿದ್ದಿದೆ.

ಇಲ್ಲಿನ ಅನೇಕ ಕೆರೆಗಳಲ್ಲಿ ಮಣ್ಣನ್ನು ರಾತ್ರೋರಾತ್ರಿ ನೆರೆಯ ಕೇರಳ ರಾಜ್ಯಕ್ಕೆ ಸಾಗಾಣಿಕೆ ಮಾಡಲಾಗುತ್ತಿದ್ದು ಈ ಜೇಡಿ ಮಣ್ಣಿನಿಂದ ವಿವಿಧ ಅಲಂಕಾರಿಕ ಕಲಾಕೃತಿಗಳು ಮತ್ತು ಕಲಾತ್ಮಕವಾದ ಹೆಂಚು ತಯಾರಿಕೆ ನಡೆಯುತ್ತದೆ.

 ತಾಲೂಕಿನ ಕೆಲವು ಪ್ರಭಾವಿಗಳು ತಮ್ಮ ಖಾಸಗಿ ಭೂಮಿಯಲ್ಲಿ ಕೆರೆ ಮಣ್ಣನ್ನು ರಾಶಿ ಹಾಕಿಕೊಂಡು ರಾತ್ರಿ ವೇಳೆ ಹೊರ ರಾಜ್ಯಗಳಿಗೆ ಸಾಗಿಸುವ ಕಳ್ಳದಂಧೆ ನಡೆಸುತ್ತಿದ್ದಾರೆ. ಇದರಿಂದಾಗಿ ತಾಲೂಕಿನ ಅನೇಕ ಕೆರೆಗಳಲ್ಲಿ ನಿಗದಿತ ಪ್ರಮಾಣಕ್ಕೂ ಮೀರಿದ ಕಂದಕಗಳ ನಿರ್ಮಾಣವಾಗಿ ಕೆರೆಗಳು ಮೃತ್ಯ ಕೂಪಗಳಾಗಿ ಮಾರ್ಪಟ್ಟಿವೆ.

ಸ್ವರೂಪ ಕಳಕೊಂಡ ಕೆರೆಗಳು: ಕೋಲಾರ ಜಿಲ್ಲೆ ಕೆರೆಗಳ ಜಿಲ್ಲೆ ಎಂದು ಖ್ಯಾತಿ ಗಳಿಸಿದ್ದು ಇಲ್ಲಿನ ಜನ ಜಾನುವಾರುಗಳಿಗೆ ಮಳೆಗಾಲದಲ್ಲಿ ಕೆರೆಗಳಲ್ಲಿ ಸಂಗ್ರಹವಾಗುವ ಮಳೆ ನೀರೇ ಆಶ್ರಯವಾಗಿದೆ. ಪ್ರಸ್ತುತ ಕೆರೆಗಳಲ್ಲಿನ ಅಕ್ರಮ ಮಣ್ಣು ದಂಧೆ ಮತ್ತು ಮರಳು ದಂಧೆಯಿಂದ ತಾಲೂಕಿನ ಅನೇಕ ಕೆರೆಗಳು ತಮ್ಮ ಸ್ವರೂಪವನ್ನೇ ಕಳೆದು ಕೊಂಡಿವೆ.

ಕೆ.ಸಿ.ವ್ಯಾಲಿ ನೀರು ತಾಲೂಕಿನ ಕೆರೆಗಳಿಗೆ: ಇತ್ತೀಚಿನಲ್ಲಿ ರಾಜ್ಯ ಸರ್ಕಾರ ರೂಪಿಸಿರುವ ಕೆ.ಸಿ.ವ್ಯಾಲಿ ಯೋಜನೆಯಿಂದ ತಾಲೂಕಿನ 27 ಕೆರೆಗಳಿಗೆ ನೀರು ತುಂಬಿಸಲಾಗುತ್ತದೆ. ಸದ್ಯ ಈ ಯೋಜನೆಗೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿದೆ. ಮೊದಲ ಹಂತದಲ್ಲಿ ನರಸಾಪುರ ಕೆರೆಯಿಂದ ಏತ ನೀರಾವರಿ ಮೂಲಕ ತಾಲೂಕಿನ ಶಿವಾರಪಟ್ಟಣದ ಕೆರೆಗೆ ನೀರು ಹರಿದು ಬರಲಿದೆ. 

ಮುಂದಿನ ದಿನಗಳಲ್ಲಿ ಮಾಲೂರು ತಾಲೂಕಿನ 27 ಕೆರೆಗಳಿಗೆ ಹಂತ ಹಂತವಾಗಿ ನೀರನ್ನು ತುಂಬಿಸಲಾಗುತ್ತದೆ. ಶಿವಾರಟ್ಟಣದಿಂದ ಬಾವನಹಳ್ಳಿ, ತಂಬಿಹಳ್ಳಿ, ಅಬ್ಬೇನಹಳ್ಳಿ ಹಾರೋಹಳ್ಳಿ ಕೆರೆಗಳ ಮಾಲೂರು, ಮಾಲೂರು ದೊಡ್ಡ ಕೆರೆಗೆ ನೀರು ಹರಿಯಲಿದೆ. ಪ್ರಸ್ತುತ ಹಾರೋಹಳ್ಳಿ ಕೆರೆಯಲ್ಲಿ ಮಣ್ಣು ದಂಧೆ ಕೋರರು ಭಾರೀ ಕಂದಕಗಳನ್ನು ತೋಡಿದ್ದಾರೆ. ಇದರಿಂದಾಗಿ ಕೆ.ಸಿ.ವ್ಯಾಲಿ ನೀರು ತುಂಬಿ ಹೊರ ಬರಬೇಕಾದರೆ ಕನಿಷ್ಠ ವರ್ಷಗಳೇ ಬೇಕಾಗಬಹುದು.

ಅಕ್ರಮ ದಂಧೆ ವಿರುದ್ಧ ನಿರಂತರ ಕ್ರಮ ಮಾಲೂರು ತಾಲೂಕಿನಲ್ಲಿ ಇಟ್ಟಿಗೆ ಕಾರ್ಖಾನೆಗಳ ಸಂಖ್ಯೆ ಹೆಚ್ಚಾಗಿದೆ. ಕೆರೆ ಮಣ್ಣು ತೆಗೆಯುವ ಸರ್ಕಾರದ ನಿಯಮದ ಅಡಿಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಅಕ್ರಮ ಮಣ್ಣು ಸಾಗಾಣಿಕೆ ದಂಧೆ ತಡೆಯುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮಾಲೂರು ತಹಶೀಲ್ದಾರ್‌ ವಿ.ನಾಗರಾಜ್‌ ತಿಳಿಸಿದ್ದಾರೆ. 

ಮಾಲೂರು ತಾಲೂಕಿನಲ್ಲಿ ಇಟ್ಟಿಗೆ ಕಾರ್ಖಾನೆಗಳು ಹೆಚ್ಚಾಗಿದ್ದು ಕೆರೆ ಮಣ್ಣೇ ಕಾರ್ಖಾನೆಗಳಿಗೆ ಜೀವಾಳ. ಕೆರೆಯ ಮಣ್ಣು ತೆಗೆಯುವ ವಿಚಾರದಲ್ಲಿ ಜಿಲ್ಲಾಡಳಿತ ನಿಯಮಗಳನ್ನು ಸಡಿಲಗೊಳಿಸಬೇಕಾಗಿದೆ. ಇನ್ನು ಕೆರೆಗಳಲ್ಲಿ ನಿರ್ಮಾಣವಾಗಿರುವ ಭಾರೀ ಪ್ರಮಾಣದ ಕಂದಕಗಳು ಇಟ್ಟಿಗೆ
ಕಾರ್ಖಾನೆಗಳು ತೆಗೆದ ಮಣ್ಣಿನಿಂದ ಆಗಿಲ್ಲ. ಅದು ಅಕ್ರಮ ಮಣ್ಣು ದಂಧೆಕೋರರ ಕೃತ್ಯವಾಗಿದೆ.
●ಪುಟ್ಟಸ್ವಾಮಿ, ಇಟ್ಟಿಗೆ ಕಾರ್ಖಾನೆ ಮಾಲಿಕ ಮಾರಸಂದ

ಕೆರೆಗಳಲ್ಲಿ ಬುಡಸಹಿತ ಕಳಚಿ ಬೀಳುವ ಮರಗಳು ಮಣ್ಣು ದಂಧೆಕೋರರ ಹಾವಳಿಗೆ ಬಲಿಯಾಲಿರುವ ತಾಲೂಕಿನ ಕೆಲವು ಕೆರೆಗಳಲ್ಲಿ ಅರಣ್ಯ ಇಲಾಖೆ ವತಿಯಿಂದ ಹಾಕಿದ್ದ ಅಕೇಶಿಯಾ, ಜಾಲಿ -ಬಿದಿರು ಮರಗಳು ಬುಡಸಹಿತ ಕಳಚಿ ಬೀಳುವ ಹಂತದಲ್ಲಿವೆ. ಈ ನಡುವೆ ತಾಲೂಕಿನ ಕೂಲಿ ಕಾರ್ಮಿಕರ ಹಿತ ದೃಷ್ಟಿಯಿಂದ ಇಟ್ಟಿಗೆ ಕಾರ್ಖಾನೆಗಳಿಗೆ ಮಾತ್ರ ನಿಗದಿತ ಆಳದವರೆಗೂ ಕೆರೆಯ ಮಣ್ಣು ತೆಗೆಯುವ ಅವಕಾಶ ಕಲ್ಪಿಸಬೇಕಾಗಿದೆ. ಅಕ್ರಮವಾಗಿ ಹೊರ ರಾಜ್ಯಗಳಿಗೆ ಕಳ್ಳದಂಧೆ ಮೂಲಕ ಮಣ್ಣು ಸಾಗಿಸುವ ಪ್ರಭಾವಿಗಳನ್ನು ತಡೆಯಬೇಕಾಗಿದೆ ಎಂದು ಸ್ಥಳೀಯರು ಮನವಿ ಮಾಡಿದ್ದಾರೆ. 
 
ಹೆಂಚು-ಇಟ್ಟಿಗೆ ಕಾರ್ಖಾನೆಗಳ ತವರಿಗೇ ಸಮಸ್ಯೆ ಜಿಲ್ಲೆಯ ಇತರೆ ತಾಲೂಕುಗಳಿಗೆ ಹೋಲಿಸಿದ್ದಲ್ಲಿ ಮಾಲೂರು ತಾಲೂಕಿನ ಕೆರೆಗಳಲ್ಲಿನ ಮಣ್ಣು ಇಟ್ಟಿಗೆ ತಯಾರಿಕೆಗೆ ಯೋಗ್ಯವಾಗಿದ್ದು ಸುಮಾರು 300ಕ್ಕೂ ಅತಿ ಹೆಚ್ಚು ಇಟ್ಟಿಗೆ ಕಾರ್ಖಾನೆಗಳು ಮಾಲೂರು ತಾಲೂಕಿನಲ್ಲಿವೆ. ಈ ಮಧ್ಯೆ ಕೆರೆಯಲ್ಲಿ ಸಂಗ್ರಹವಾಗುವ ಕೆನೆ ಪದರದ ಜೇಡಿ ಮಣ್ಣನ್ನು ನೆಚ್ಚಿಕೊಂಡು ತಾಲೂಕಿನಲ್ಲಿ ಅನೇಕರು ಹೆಂಚು ಮತ್ತು ಇಟ್ಟಿಗೆ ಕಾರ್ಖಾನೆ ಆರಂಭಿಸಿದ್ದಾರೆ. ಕೆರೆಯಲ್ಲಿನ ಮಣ್ಣನನ್ನು ಹೊರ ರಾಜ್ಯದವರೇ ತುಂಬಿಕೊಂಡು ಹೋಗುತ್ತಿರುವುದರಿಂದ ಸ್ಥಳೀಯರಿಗೆ ಸಮಸ್ಯೆಯಾಗಿದೆ.

●ಎಂ.ರವಿಕುಮಾರ್‌

ಟಾಪ್ ನ್ಯೂಸ್

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.