ಮರ್ಡರ್‌ ಮಿಸ್ಟ್ರಿ ಗಂಡು


Team Udayavani, Feb 22, 2019, 12:30 AM IST

27.jpg

ತೊಂಬತ್ತರ ದಶಕದಲ್ಲಿ ಟೈಗರ್‌ ಪ್ರಭಾಕರ್‌ ನಾಯಕ ನಟನಾಗಿ ಅಭಿನಯಿಸಿದ್ದ ಆ್ಯಕ್ಷನ್‌ ಚಿತ್ರ “ಸಿಡಿದೆದ್ದ ಗಂಡು’ ತೆರೆಗೆ ಬಂದಿದ್ದು ನಿಮಗೆ ನೆನಪಿರಬಹುದು. ಈಗ ಅದೇ “ಸಿಡಿದೆದ್ದ ಗಂಡು’ ಹೆಸರಿನ ಮತ್ತೂಂದು ಚಿತ್ರ ತೆರೆಗೆ ಬರುವ ಸನ್ನಾಹದಲ್ಲಿದೆ. ಅಂದಹಾಗೆ, “ಸಿಡಿದೆದ್ದ ಗಂಡು’ ಎನ್ನುವ ಹೆಸರು ಮಾತ್ರ ಮರು ಬಳಕೆ ಮಾಡಿಕೊಳ್ಳಲಾಗಿದೆ ಎನ್ನುವುದನ್ನು ಹೊರತುಪಡಿಸಿದರೆ, ಹಿಂದೆ ಬಂದಿದ್ದ ಟೈಗರ್‌ ಪ್ರಭಾಕರ್‌ ಅವರ ಚಿತ್ರಕ್ಕೂ ಈಗ ಬರುತ್ತಿರುವ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲವಂತೆ. 

ಸದ್ಯ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಪೂರ್ಣಗೊಳಿಸಿರುವ “ಸಿಡಿದೆದ್ದ ಗಂಡು’ ಚಿತ್ರತಂಡ ಇತ್ತೀಚೆಗೆ ತನ್ನ ಆಡಿಯೋವನ್ನು ಹೊರತಂದಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್‌.ಎ ಚಿನ್ನೇಗೌಡ, ನಿರ್ಮಾಪಕ ಭಾ.ಮಾ ಹರೀಶ್‌, ಸೂರಪ್ಪ ಬಾಬು ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಹಾಜರಿದ್ದು, ಚಿತ್ರದ ಹಾಡುಗಳನ್ನು ಹೊರತಂದರು. 

ಆ್ಯಕ್ಷನ್‌, ಲವ್‌ ಮತ್ತು ಮರ್ಡರ್‌ ಮಿಸ್ಟ್ರಿ ಕಥಾಹಂದರವಿರುವ “ಸಿಡಿದೆದ್ದ ಗಂಡು’ ಚಿತ್ರಕ್ಕೆ ಎಸ್‌. ವಿಠಲ್‌ ಕುಮಾರ್‌ ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಈ ಚಿತ್ರದ ಮೂಲಕ ನವ ಪ್ರತಿಭೆ ಶ್ರೀ ವಿಷ್ಣು ನಾಯಕ ನಟನಾಗಿ ಬೆಳ್ಳಿತೆರೆಗೆ ಅಡಿಯಿಡುತ್ತಿದ್ದಾರೆ. ಇವರಿಗೆ ನಾಯಕಿಯಾಗಿ ನವನಟಿ ಶೋಭಿತಾ ಜೋಡಿಯಾಗಿದ್ದಾರೆ. ಶ್ರೀ ಸ್ವಾಮಿಯೇ ಶರಣಂ ಅಯ್ಯಪ್ಪ ಚಿತ್ರಾಲಯ ಬ್ಯಾನರ್‌ನಲ್ಲಿ ಬಿ.ಆರ್‌ ವಸಂತ ಕುಮಾರಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರದ ಹಾಡುಗಳಿಗೆ ಯುಗಾಂತ್‌ ಪ್ರಮೋದ್‌ ಸಂಗೀತ ಸಂಯೋಜಿಸಿದ್ದು, ಹಿರಿಯ ಸಾಹಿತಿ ಪ್ರೊ. ದೊಡ್ಡರಂಗೇಗೌಡ ಹಾಡುಗಳಿಗೆ ಸಾಹಿತ್ಯವನ್ನು ರಚಿಸಿದ್ದಾರೆ. ಚಿತ್ರದ ದೃಶ್ಯಗಳನ್ನು ಛಾಯಾಗ್ರಹಕ ಗುಂಡ್ಲುಪೇಟೆ ಸುರೇಶ್‌ ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ಆರ್‌.ಡಿ ರವಿ ಸಂಕಲನ ಕಾರ್ಯ ನಿರ್ವಹಿಸಿದ್ದಾರೆ. ವೈಲೆಂಟ್‌ ವೇಲು ಚಿತ್ರದ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದಾರೆ. ಮಂಗಳೂರು, ಮಡಿಕೇರಿ, ಬಿಡದಿ ಸುತ್ತಮುತ್ತ “ಸಿಡಿದೆದ್ದ ಗಂಡು’ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಸದ್ಯ ಭರದಿಂದ ಪ್ರಮೋಷನ್‌ ಕೆಲಸಗಳಿಗೆ ಚಾಲನೆ ನೀಡಿರುವ “ಸಿಡಿದೆದ್ದ ಗಂಡು’ ಚಿತ್ರವನ್ನು ಮಾರ್ಚ್‌ ವೇಳೆಗೆ ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ.   

ಟಾಪ್ ನ್ಯೂಸ್

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.