ಶ್ರೀಕೃಷ್ಣನ ನಾಡಲ್ಲಿ ಸ್ತ್ರೀ ಪಾರುಪತ್ಯ


Team Udayavani, Feb 22, 2019, 12:30 AM IST

ud.jpg

ಉಡುಪಿ: ನೂತನ ಎಸ್‌ಪಿಯಾಗಿ ನಿಶಾ ಜೇಮ್ಸ್‌ ನೇಮಕಗೊಂಡಿದ್ದಾರೆ. ಸದ್ಯ ಜಿಲ್ಲಾಧಿಕಾರಿ ಹುದ್ದೆಯಿಂದ ತಾ.ಪಂ. ಅಧ್ಯಕ್ಷರ ವರೆಗೆ ಜಿಲ್ಲೆಯಲ್ಲಿ ಮಹಿಳೆಯರದ್ದೇ ಪಾರುಪತ್ಯ. ಜತೆಗೆ ಉಸ್ತುವಾರಿ ಸಚಿವೆ ಜಯಮಾಲಾ ಅವರ ನೇತೃತ್ವ. 

ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಜಿ.ಪಂ. ಸಿಇಒ ಸಿಂಧೂ ರೂಪೇಶ್‌, ಎಸ್‌ಪಿ ನಿಶಾ ಜೇಮ್ಸ್‌, ಎಡಿಸಿ ವಿದ್ಯಾಕುಮಾರಿ, ಉಸ್ತುವಾರಿ ಸಚಿವೆ ಡಾ| ಜಯಮಾಲಾ, ಸಂಸದೆ ಶೋಭಾ ಕರಂದ್ಲಾಜೆ, ಜಿ.ಪಂ. ಉಪಾಧ್ಯಕ್ಷೆ ಶೀಲಾ ಶೆಟ್ಟಿ ಹೀಗೆ ಉನ್ನತ ಸ್ಥಾನಗಳಲ್ಲಿ ಮಹಿಳೆಯರಿದ್ದಾರೆ. ಜತೆಗೆ ಜಿಪಂನಲ್ಲಿ 11 ಮಂದಿ ಸದಸ್ಯಯರಿದ್ದಾರೆ. ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಗ್ರೇಸಿ ಗೋನ್ಸಾಲ್ವಿಸ್‌, ತೋಟಗಾರಿಕಾ ಇಲಾಖೆ ಉಪನಿರ್ದೇಶಕಿ ಭುವನೇಶ್ವರಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ಅನಿತಾ ಬಿ.ಆರ್‌., ಜಿಲ್ಲಾ ಆರೋಗ್ಯಾಧಿಕಾರಿ ಡಾ|ರೋಹಿಣಿ , ಜಿ.ಪಂ. ಡಿಆರ್‌ಡಿಎ ಯೋಜನಾ ನಿರ್ದೇಶಕಿ ನಯನಾ ಹೀಗೆ ರಾಜಕೀಯ ಮತ್ತು ಸರಕಾರಿ ಇಲಾಖೆ ಸೇರಿದಂತೆ ವಿವಿಧ ಕಡೆಗಳಲ್ಲಿ ಮಹಿಳೆಯರು ಮಿಂಚುತ್ತಿದ್ದಾರೆ.

ಆಡಳಿತ ಸುಧಾರಣೆ ನಿರೀಕ್ಷೆ
ರಾಜಕೀಯದಲ್ಲಿ ಮಹಿಳಾ ಪ್ರಾಬಲ್ಯಕ್ಕೆ ಉಡುಪಿ ಜಿಲ್ಲೆ ನಿದರ್ಶನವಾಗಿದೆ. ಆಡಳಿತ ಸುಧಾರಣೆಯಲ್ಲಿ ಮತ್ತಷ್ಟು ನಿರೀಕ್ಷೆಗಳು ಗರಿಗೆದರುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ. 

ಸಾಕ್ಷರತೆ ಪ್ರಮಾಣವೂ ಹೆಚ್ಚಳ
ಜಿಲ್ಲೆಯಲ್ಲಿ ಮಹಿಳಾ ಸಾಕ್ಷರತೆ ಪ್ರಮಾಣವೂ ಹೆಚ್ಚಿದೆ. 2011ರ ಸರ್ವೆ ಪ್ರಕಾರ ಸುಮಾರು ಒಟ್ಟು ಶೇ. 86.24ರಷ್ಟು ಸಾಕ್ಷರತೆ ಪ್ರಮಾಣವಿದ್ದು, ಮಹಿಳಾ ಸಾಕ್ಷರತೆ ಶೇ.81.58ರಷ್ಟಿದೆ. 2001ರಲ್ಲಿ ಸಾಕ್ಷರತೆ 75.19ರಷ್ಟು ಇತ್ತು. 10 ವರ್ಷದಲ್ಲಿ 4.66ರಷ್ಟು ಸಾಕ್ಷರತೆ ಪ್ರಮಾಣದಲ್ಲಿ ಹೆಚ್ಚಳವಾಗಿದೆ. 2021ರ ಜನಗಣತಿಯಲ್ಲಿ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ.

ಹೊಸ ಎಸ್‌ಪಿ ನಿಶಾ ಜೇಮ್ಸ್‌
ಉಡುಪಿ:
ಚುನಾವಣೆಯ ಹಿನ್ನೆಲೆಯಲ್ಲಿ ಹಲವು ಮಂದಿ ಐಪಿಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದ್ದು, ಉಡುಪಿ ಎಸ್‌ಪಿ ಆಗಿ ನಿಶಾ ಜೇಮ್ಸ್‌ ಅವರನ್ನು ನಿಯುಕ್ತಿ ಗೊಳಿಸಲಾಗಿದೆ. ಹಾಲಿ ಎಸ್‌ಪಿ ಲಕ್ಷ್ಮಣ ಬ. ನಿಂಬರಗಿ ಅವರನ್ನು ಬೆಂಗಳೂರಿನ ನಿಸ್ತಂತು ವಿಭಾಗದ ಎಸ್‌ಪಿಯನ್ನಾಗಿ ನಿಯುಕ್ತಿಗೊಳಿಸಲಾಗಿದೆ. ಇವರೀರ್ವರು ಇನ್ನಷ್ಟೇ ಅಧಿಕಾರ ಸ್ವೀಕರಿಸಬೇಕಾಗಿದೆ.

ಮೂಲತಃ ಕೇರಳದವರಾಗಿರುವ ನಿಶಾ ಜೇಮ್ಸ್‌, 2013ರ ಐಪಿಎಸ್‌ ಬ್ಯಾಚ್‌ನ ಅಧಿಕಾರಿ. ಚಿತ್ರದುರ್ಗ, ಸಾಗರದಲ್ಲಿ ಎಎಸ್‌ಪಿಯಾಗಿ, ಬೆಂಗಳೂರು ಗುಪ್ತದಳ, ರಾಯಚೂರು ಎಸ್‌ಪಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿ ಕೆಎಸ್‌ಆರ್‌ಪಿಯ 4ನೇ ಬೆಟಾಲಿಯನ್‌ನ ಕಮಾಂಡೆಂಟ್‌ ಆಗಿದ್ದಾರೆ.
 
ಮಹತ್ವದ ಪ್ರಕರಣ ನಿಭಾಯಿಸಿದ ನಿಂಬರಗಿ
2018ರ ಜ.1ರಂದು ಉಡುಪಿ ಜಿಲ್ಲಾ ಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಿದ್ದ ಲಕ್ಷ್ಮಣ ಬ. ನಿಂಬರಗಿ ಅವರು ಶೀರೂರು ಶ್ರೀಗಳ ಅಸಹಜ ಸಾವು, ಹಿರಿಯಡಕದಲ್ಲಿ ಹುಸೈನಬ್ಬ ಕೊಲೆ ಪ್ರಕರಣ, ಕೋಟದ ಅವಳಿ ಕೊಲೆ ಪ್ರಕರಣಗಳನ್ನು ನಿಭಾಯಿಸಿದ್ದರು. 

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.