ಶ್ರೀನಿವಾಸಗೌಡಗೆ 5 ಕೋಟಿ ಎಸಿಬಿಗೆ ದೂರು ಸಲ್ಲಿಕೆ
Team Udayavani, Feb 22, 2019, 1:52 AM IST
ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಬಿಜೆಪಿ ಮುಖಂಡರು ಹಣದ ಆಮಿಷವೊಡ್ಡಿ 5 ಕೋಟಿ ರೂ. ಅಡ್ವಾನ್ಸ್ ನೀಡಿದ್ದರು ಎಂಬ ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸಗೌಡ ಹೇಳಿಕೆ ಸಂಬಂಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯ ಕರ್ತ ಟಿ.ಜೆ ಅಬ್ರಹಾಂ ಎಸಿಬಿಗೆ ಗುರುವಾರ ದೂರು ನೀಡಿದ್ದಾರೆ.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಬಿಜೆಪಿ ಶಾಸಕ ಡಾ. ಸಿ.ಎನ್ ಅಶ್ವತ್ಥನಾರಾಯಣ, ಎಸ್.ಆರ್ ವಿಶ್ವನಾಥ್, ಮಾಜಿ ಶಾಸಕ ಸಿ.ಪಿ ಯೋಗೀಶ್ವರ್ 30 ಕೋಟಿ ರೂ. ನೀಡುವುದಾಗಿ ಆಮಿಷವೊಡ್ಡಿದ್ದರು. ಅಡ್ವಾನ್ಸ್ 5 ಕೋಟಿ ರೂ. ನೀಡಿದ್ದರು.
ಈ ವಿಚಾರ ಸಿಎಂಗೆ ತಿಳಿಸಿದ್ದೆ, ಜತೆಗೆ 5 ಕೋಟಿ ರೂ. ವಾಪಸ್ ನೀಡಿದ್ದೆ ಎಂದು ಶಾಸಕ ಶ್ರೀನಿವಾಸಗೌಡ ಮಾಧ್ಯಮಗಳಿಕೆ ಹೇಳಿಕೆ ನೀಡಿದ್ದರು. ಈ ಕುರಿತು ಶಾಸಕರು ಹಾಗೂ ಸಿಎಂ ವಿರುದಟಛಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ಟಿ.ಜೆ ಅಬ್ರಹಾಂ ದೂರಿನಲ್ಲಿ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು