ಭೂ ಅಕ್ರಮ: ಪ್ರಭಾಕರ್ ರೆಡ್ಡಿ ಬಂಧನ
Team Udayavani, Feb 22, 2019, 6:22 AM IST
ಬೆಂಗಳೂರು: ನೂರಾರು ಕೋಟಿ ರೂ. ಮೌಲ್ಯದ ಭೂಮಿ ಕಬಳಿಕೆ ಆರೋಪದ ಮೇಲೆ ಪ್ರಮುಖ ರಿಯಲ್ ಎಸ್ಟೇಟ್ ಉದ್ಯಮಿ ಆರ್.ಪ್ರಭಾಕರ್ ರೆಡ್ಡಿಯನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಗುರುವಾರ ಬಂಧಿಸಿದ್ದಾರೆ. ಈ ಹಿಂದೆ ಜೆಡಿಎಸ್ನಲ್ಲಿ ಗುರ್ತಿಸಿಕೊಂಡಿದ್ದ ಪ್ರಭಾಕರ್ ರೆಡ್ಡಿ, 2014ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು.
ಭೂ ಅಕ್ರಮ ಆರೋಪ ಕುರಿತ ದೂರುಗಳ ಹಿನ್ನೆಲೆಯಲ್ಲಿ ಪ್ರಭಾಕರ್ ರೆಡ್ಡಿಗೆ ಸೇರಿದ ಮೈಲಹಳ್ಳಿ, ರಾಜರಾಜೇಶ್ವರಿ ನಗರ, ಎಚ್ಎಸ್ಆರ್ ಲೇಔಟ್ ನಿವಾಸಗಳು, ಕೋರಮಂಗಲದ ಕಚೇರಿ ಮೇಲೆ ಸಿಸಿಬಿ ಅಧಿಕಾರಿಗಳ ತಂಡ ಏಕಕಾಲದಲ್ಲಿ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ. ಜತೆಗೆ, ಆರೋಪಿ ಪ್ರಭಾಕರ್ ರೆಡ್ಡಿಯನ್ನು ಬಂಧಿಸಿದೆ.
ಆರೋಪಿ ಪ್ರಭಾಕರ್ ರೆಡ್ಡಿಯ ನಾಲ್ಕು ನಿವಾಸ ಹಾಗೂ ಕಚೇರಿ ಮೇಲೆ ನಡೆಸಿದ ಕಾರ್ಯಾಚರಣೆ ವೇಳೆ 200ಕ್ಕೂ ಅಧಿಕ ದಾಖಲೆಗಳು ದೊರೆತಿವೆ. ಬ್ಯಾಂಕ್ ದಾಖಲೆಗಳು ಲಭ್ಯವಾಗಿವೆ. ಈತ ನೂರಾರು ಜನರಿಗೆ ವಂಚಿಸಿರುವ ಸಾಧ್ಯತೆಯಿದೆ. ವಂಚನೆಗೊಳಗಾದವರು ಎರಡು ದಿನಗಳಲ್ಲಿ ಸಿಸಿಬಿಗೆ ದೂರು ನೀಡಬಹುದು ಎಂದು ಸಿಸಿಬಿ ಡಿಸಿಪಿ ಗಿರೀಶ್ ತಿಳಿಸಿದ್ದಾರೆ.
ಆರೋಪಿ ಪ್ರಭಾಕರ್ ರೆಡ್ಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನಗರದ ವಿವಿಧ ಭಾಗಗಳಲ್ಲಿ ಭೂ ಕಬಳಿಕೆ ಮಾಡಿರುವ ಆರೋಪಗಳಿವೆ. ಈ ಕುರಿತು ನಗರದ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು. ಸುಮಾರು 40 ಕ್ಕೂ ಹೆಚ್ಚು ಭೂ ಕಬಳಿಕೆ ಆರೋಪ ಪ್ರಕರಣಗಳಿರುವ ಮಾಹಿತಿಯಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್