ಖಜಾನೆ-2 ತರಬೇತಿ ಕೇಂದ್ರಕ್ಕೆ ಚಾಲನೆ


Team Udayavani, Feb 22, 2019, 10:40 AM IST

22-february-14.jpg

ಕಾರವಾರ: ಸರ್ಕಾರದ ಹಣಕಾಸಿನ ವ್ಯವಹಾರಗಳನ್ನು ಸರಳಗೊಳಿಸುವ ನಿಟ್ಟಿನಲ್ಲಿ ಖಜಾನೆ -2 ತರಬೇತಿ ಕೇಂದ್ರ ಪ್ರಾರಂಭಿಸಲಾಗಿದೆ. ಇದರಿಂದ ಎಲ್ಲಾ ಇಲಾಖೆಗಳ ಸರ್ಕಾರಿ ನೌಕರರು ಬಿಲ್‌ಗ‌ಳನ್ನು ಮತ್ತು ವೇತನವನ್ನು ಕೆ-2 ವ್ಯವಸ್ಥೆಯ ಸೌಕರ್ಯ ಪಡೆಯಬಹುದು. ಕೆ-2 ವ್ಯವಸ್ಥೆಯ ತರಬೇತಿ ನೀಡಲು ಮೂವರು ಎಂಜಿನಿಯರ್‌ಗಳಿದ್ದು ಅವರು ಇಲ್ಲಿಗೆ ಬರುವ ಎಲ್ಲಾ ನೌಕರರಿಗೆ ನೆರವಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್‌ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಮೊದಲ ಮಹಡಿಯಲ್ಲಿ ಪ್ರಾರಂಭವಾದ ನೂತನ ಕಚೇರಿಯನ್ನು ಅವರು ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಖಜಾನೆ ರಾಜ್ಯದಲ್ಲಿಯೇ ಮಾದರಿಯಾಗಿದೆ. ಇದೀಗ ಜಿಲ್ಲಾಧಿಕಾರಿ ಕಚೇರಿಯಲ್ಲೇ ತರಬೇತಿ ಕೇಂದ್ರ ಆರಂಭವಾಗಿರುವ ಕಾರಣ ಖಜಾನೆ-2ರಲ್ಲಿ ವ್ಯವಹರಿಸುವವರಿಗೆ ಅನುಕೂಲವಾಗಲಿದೆ. ರಾಜ್ಯದಲ್ಲಿಯೇ ಪ್ರಥಮವಾಗಿ ಸೌಕರ್ಯ ಮತ್ತು ತರಬೇತಿ ಕೇಂದ್ರ ಕಾರವಾರದಲ್ಲಿ ಆರಂಭವಾದಂತಾಗಿದೆ ಎಂದರು.

ಕಾಗದ ರಹಿತ ಮತ್ತು ಚೆಕ್‌ ರಹಿತ ವಹಿವಾಟು: ಹಣಕಾಸಿನ ಎಲ್ಲ ವ್ಯವಹಾರಗಳನ್ನು, ವಿವಿಧ ಸರ್ಕಾರಿ ಇಲಾಖೆಗಳು ಖಜಾನೆ-2ರಲ್ಲಿಯೇ ಮಾಡುವಂತೆ ಸರ್ಕಾರ ಆದೇಶಿ 2 ವರ್ಷ ಕಳೆದಿವೆ. ಸರ್ಕಾರದಿಂದ ಹೊಸ ತಂತ್ರಾಂಶ ಒದಗಿಸಿ ಎರಡು ವರ್ಷಗಳು ಸಂದಿವೆ. ಆದರೂ ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತ್‌ಗಳು ಕೆ-2 ವ್ಯವಸ್ಥೆ ಅಡಿ ಬಂದಿರಲಿಲ್ಲ. ಹಾಗೂ ಕೆಲ ಇಲಾಖೆಗಳಲ್ಲಿ ಖಜಾನೆ-2ರಲ್ಲಿ ವ್ಯವಹರಿಸುವ ಸಂದರ್ಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳು, ಜ್ಞಾನದ ಕೊರತೆ ಇತ್ಯಾದಿ ಸಮಸ್ಯೆಗಳನ್ನು ಅನುಭವಿಸಬೇಕಾಗಿತ್ತು. ಇದನ್ನು ಅರಿತ ಜಿಲ್ಲಾಧಿಕಾರಿ ಎಸ್‌. ಎಸ್‌. ನಕುಲ್‌ ಅವರು ಜಿಲ್ಲಾಡಳಿತ ಭವನದಲ್ಲಿಯೇ ಒಂದು ವಿಶೇಷ ತರಬೇತಿ ಕೇಂದ್ರ ತೆರೆಯುವ ಸಲಹೆ ನೀಡಿ ಕೊಠಡಿಯನ್ನು ಒದಗಿಸಿದ ಹಿನ್ನೆಲೆಯಲ್ಲಿ ಒಂದು ಸುಸಜ್ಜಿತ ಖಜಾನೆ-2 ಸೌಕರ್ಯ ಮತ್ತು ತರಬೇತಿ ಕೇಂದ್ರ ತೆರೆಯಲು ಅನುಕೂಲವಾಯಿತು ಎಂದು ಜಿಲ್ಲಾ ಖಜಾನೆ
ಉಪನಿರ್ದೇಶಕ ಸುನೀಲ್‌ ವಿಶ್ವನಾಥ್‌ ಮೂಗಿ ಹೇಳಿದರು.

ಖಜಾನೆ-2ರಲ್ಲಿ ಹಣಕಾಸಿನ ವ್ಯವಹಾರಗಳನ್ನು ಮಾಡುವ ಇಲಾಖೆಗಳಲ್ಲಿ ಕಂಪ್ಯೂಟರ್‌ ಸಮಸ್ಯೆ, ಮುದ್ರಣ ಯಂತ್ರದ ಸಮಸ್ಯೆ ಅಥವಾ ಜ್ಞಾನದ ಸಮಸ್ಯೆಯಿಂದ ಒಂದಿಲ್ಲೊಂದು ಸಮಸ್ಯೆಯಿಂದ ವಿಳಂಬಕ್ಕೆ ಕಾರಣವಾಗುತ್ತಿತ್ತು. ದಾಖಲೆಗಳು ಸರಿಯಿದ್ದರೂ ಮಾಡುವ ವಿಧಾನದಲ್ಲಿ ತಪ್ಪಾಗಿ ಖಜಾನೆಯಿಂದ ಆಕ್ಷೇಪಣೆಗೆ ಕಾರಣವಾಗುತ್ತಿತ್ತು. ಆ ಕಾರಣದಿಂದಲೇ ಈ ಸೌಲಭ್ಯ ಮತ್ತು ತರಬೇತಿ ಕೇಂದ್ರ ಸ್ಥಾಪಿಸಲಾಗಿದ್ದು ಇಲ್ಲಿ ಕಂಪ್ಯೂಟರ್‌ಗಳು, ಮುದ್ರಣ ಯಂತ್ರಗಳು ಹಾಗೂ ಮೂರು ಮಂದಿ ಕಂಪ್ಯೂಟರ್‌ ಎಂಜಿನಿಯರ್‌ಗಳನ್ನು ನಿಯೋಜಿಸಲಾಗಿದೆ. ಸಮಸ್ಯೆಯಿರುವ ಇಲಾಖೆ ಅಧಿಕಾರಿಗಳು ಈ ಕೇಂದ್ರದ ಉಪಯೋಗವನ್ನು ಸಂಪೂರ್ಣ ಉಚಿತವಾಗಿ ಪಡೆಯಬಹುದಾಗಿದೆ. ಅಲ್ಲದೆ ಸರ್ಕಾರದ ಇಲಾಖೆಗೆ ಸಾರ್ವಜನಿಕರು ಖಜಾನೆ-2ರಲ್ಲಿ ಡಿಡಿ ಚಲನ್‌ ತೆಗೆಯಲೂ ಈ ಕೇಂದ್ರವನ್ನು  ಪಯೋಗಿಸಿಕೊಳ್ಳಬಹುದಾಗಿದೆ ಎಂದು ಸುನೀಲ್‌ ಮೂಗಿ ಹೇಳಿದರು. ಜಿಪಂ ಸಿಇಒ ಎಂ.ರೋಷನ್‌, ಎಸ್ಪಿ ವಿನಾಯಕ್‌ ಪಾಟೀಲ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.