ಕೋರಂ ಕೊರತೆ; ಮತ್ತೆ ಜಿಪಂ ಸಭೆ ಮುಂದಕ್ಕೆ


Team Udayavani, Feb 22, 2019, 11:53 AM IST

cta-1.jpg

ಚಿತ್ರದುರ್ಗ: ನಗರದ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಜಿಪಂ ಸಾಮಾನ್ಯ ಸಭೆ ಕೋರಂ ಕೊರತೆಯಿಂದ ಮತ್ತೆ ಮುಂದೂಡಲಾಯಿತು. ಇದರಿಂದ ಸತತ 8ನೇ ಬಾರಿಗೆ ಸಭೆ ಮುಂದೂಡಿದಂತಾಯಿತು.

ಸಾಮಾನ್ಯ ಸಭೆ ನಡೆಸಲು 51 ಸದಸ್ಯರಿದ್ದು, ಅದರಲ್ಲಿ ಅರ್ಧಕ್ಕಿಂತ ಹೆಚ್ಚು ಅಂದರೆ 26 ಸದಸ್ಯರ ಕೋರಂ ಬೇಕು. ಆದರೆ, ಇಂದಿನ ಸಭೆಯಲ್ಲಿ 22 ಸದಸ್ಯರು ಸಹಿ ಹಾಕಿದ್ದಾರೆ. ತಡವಾಗಿ ಆಗಮಿಸಿದ ಒಬ್ಬರು ಸದಸ್ಯರನ್ನು ಪರಿಗಣಿಸಲಿಲ್ಲ. ಕೋರಂ ಲಭ್ಯವಾಗದ ಹಿನ್ನೆಲೆಯಲ್ಲಿ ಕಾನೂನಾತ್ಮಕವಾಗಿ
ಸಭೆ ನಡೆಸಲು ಬರುವುದಿಲ್ಲ. 

ಕೋರಂ ಕೊರತೆಯಿಂದ ಸಭೆಯನ್ನು ಅನಿರ್ದಿಷ್ಟ ಅವಧಿಗೆ ಪ್ರಭಾರೆ ಅಧ್ಯಕ್ಷರ ಸೂಚನೆ ಮೇರೆಗೆ ಮುಂದೂಡಲಾಗಿದೆ ಎಂದು ಸಿಇಒ ಪಿ.ಎನ್‌. ರವೀಂದ್ರ ಹೇಳಿದರು.

ಮಾಜಿ ಜಿಪಂ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್‌ ವಿರುದ್ಧ ಮಂಡಿಸಲಾಗಿದ್ದ ಅವಿಶ್ವಾಸದಲ್ಲಿ ಜಯ ಸಾಧಿಸಿದ್ದರೂ ಮುಂದೂಡಿದ ಸಾಮಾನ್ಯ ಸಭೆ ನಡೆಸುವಷ್ಟು ಕೋರಂ ಕಂಡು ಬಾರದಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. 

ಬೆಳಗ್ಗೆ 11 ಗಂಟೆಗೆ ಸಭೆ ಆರಂಭವಾಗಬೇಕಿತ್ತು. ಆದರೆ, 11:30 ಗಂಟೆಯಾದರೂ ಅಗತ್ಯ ಸದಸ್ಯರು ಸಭೆಯತ್ತ ಸುಳಿಯಲಿಲ್ಲ. ಸಭೆಗೆ ಹತ್ತು ನಿಮಿಷ ಹೆಚ್ಚುವರಿಯಾಗಿ ಕಾಯೋಣ, ಸದಸ್ಯರು ಬರುತ್ತಾರೆ. ಬಂದ ನಂತರ ಸಭೆ ಆರಂಭಿಸೋಣ ಎಂದು ಪ್ರಭಾರೆ ಅಧ್ಯಕ್ಷೆ ಸುಶೀಲಮ್ಮ ಪ್ರಸ್ತಾಪ ಮಾಡಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸದಸ್ಯ ಅಜ್ಜಪ್ಪ, ಒಬ್ಬರಿಗೊಂದು, ಇನ್ನೊಬ್ಬರಿಗೊಂದು ಕಾನೂನು ಇಲ್ಲ. 11:30 ಗಂಟೆಗಿಂತ ಹೆಚ್ಚಿಗೆ ಕಾದಿದ್ದೇ ಕಾನೂನು ವಿರೋ ಧಿಯಾಗಿದೆ. ಕೂಡಲೇ ಸಭೆಯನ್ನು ಮುಂದೂಡುವಂತೆ ವಿರೋಧ ಪಕ್ಷದ ಕೆಲ ಸದಸ್ಯರು ಆಗ್ರಹಿಸಿದರು. ಇದಕ್ಕೆ ಕಾಂಗ್ರೆಸ್‌ ಸದಸ್ಯ ಕೃಷ್ಣಮೂರ್ತಿ, ನಗರಸಿಂಹರಾಜು ಮತ್ತಿತರರು ತೀವ್ರ ವಿರೋಧ ವ್ಯಕ್ತಪಡಿಸಿದರು.

ಬಿಜೆಪಿ ಸದಸ್ಯ ಅಜ್ಜಪ್ಪ, ಕಾಂಗ್ರೆಸ್‌ ಸದಸ್ಯರಾದ ಕೃಷ್ಣಮೂರ್ತಿ, ನರಸಿಂಹ ಮೂರ್ತಿ ಅವರ ಮಧ್ಯೆ ವಾಕ್ಸಮರ ನಡೆಯಿತು. ನಮಗೆ ಜನರು ಕಲ್ಲಿನಲ್ಲಿ ಓಡಿಸಿಕೊಂಡು ಬಂದು ಹೊಡೆಯುತ್ತಾರೆ. ಕ್ಷೇತ್ರಗಳಲ್ಲಿ ತೀವ್ರ ತರಹದ  ಮಸ್ಯೆಗಳಿವೆ. ಕುಳಿತು ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಬದಲು ಸಾಮಾನ್ಯ ಸಭೆಗೆ ಪ್ರತಿ ಸಲ ಗೈರಾಗುತ್ತಿದ್ದರೆ ಹೇಗೆಂದು ಪ್ರಶ್ನಿಸಿದರು.

ಸಭೆ ಮುಂಡೂತ್ತಿದ್ದಂತೆ ಅದೇ ಜಾಗದಲ್ಲಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತದೆ ಎಂದು ಸಿಇಒ ರವೀಂದ್ರ, ಅಧ್ಯಕ್ಷರು ಸೂಚಿಸಿದರು. ಇದರಿಂದ ಕುಪಿತರಾದ ಬಿಜೆಪಿ ಸದಸ್ಯರು ಸಭೆ ಮುಂದೂಡಲ್ಪಟ್ಟ ಮೇಲೆ ಹೇಗೆ ಈ ಜಾಗದಲ್ಲಿ ಸಭೆ ನಡೆಸುತ್ತೀರ, ಮಿನಿ ಜಿಪಂ ಹಾಲ್‌ನಲ್ಲಿ ಸಭೆ ಮಾಡಿಕೊಳ್ಳಿ ಎಂದರು. 

ಸದಸ್ಯೆ ರಾಜೇಶ್ವರಿ ಮಾತನಾಡಿ, ಈ ಹಿಂದೆ ನಾನು 11:29 ನಿಮಿಷಕ್ಕೆ ಬಂದ ಸಂದರ್ಭದಲ್ಲೂ ಸಮಯ ಮೀರಿ ಬಂದಿದ್ದೀರಿ ಎಂದು ಹಾಜರಾತಿ ಪುಸ್ತಕಕ್ಕೆ ಸಹಿ ಮಾಡಲು ಅವಕಾಶ ನೀಡಲಿಲ್ಲ. ಆದರೆ, ಇಂದು 11:35 ನಿಮಿಷವಾದರೂ ಏಕೆ ಬರುವವರಿಗಾಗಿ ಕಾಯಲಾಗುತ್ತಿದೆ. ಒಬ್ಬರಿಗೊಂದು, ಮತ್ತೂಬ್ಬರಿಗೊಂದು ಕಾನೂನು ಇಲ್ಲವಾಗಿದ್ದು, ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು. 

ಸಮಯ ಮೀರಿ ಆಗಮಿಸಿರುವ ಯಾವುದೇ ಸದಸ್ಯರಿಗೆ ಹಾಜರಾತಿಗೆ ಸಹಿ ಮಾಡಲು ಅವಕಾಶ ನೀಡಬಾರದು. ಕೋರಂ ಇಲ್ಲ ಎಂದಾದ ಮೇಲೆ ಸಭೆಯನ್ನು ಮುಂದೂಡಬೇಕು ಎಂದು ಅಧ್ಯಕ್ಷರು, ಸಿಇಒ ಅವರಿಗೆ ತಾಕೀತು ಮಾಡಿದರು.

ಸದಸ್ಯ ಕೃಷ್ಣಮೂರ್ತಿ ನಡೆ ಕುರಿತು ಸದಸ್ಯ ಅಜ್ಜಪ್ಪ ಮಗುವನ್ನು ಚಿವುಟಿ ನಂತರ ತೊಟ್ಟಿಲು ತೂಗುವ ನಾಟಕ ಮಾಡುತ್ತೀರಾ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದಾದ ನಂತರ ಮಹಿಳಾ ಸದಸ್ಯರು ಏರು ಧ್ವನಿಯಲ್ಲಿ ಆರೋಪ ಪ್ರತ್ಯಾರೋಪ ಮಾಡಿದರು.

ಸಭೆಯಲ್ಲಿ ಗದ್ದಲ, ಗಲಾಟೆ ಹೆಚ್ಚಾಗಿದ್ದರಿಂದ ಯಾರು ಏನು ಹೇಳುತ್ತಾರೆ, ಏನು ಕೇಳುತ್ತಾರೆ ಎನ್ನುವುದು ತಿಳಿಯದಾಯಿತು. ಗಲಾಟೆಯ ವಿಷಯ ತಿಳಿದು ಪೊಲೀಸರು ಆಗಮಿಸಿದರು. ವಿಧಿ ಯಿಲ್ಲದೆ ಸಭೆಯನ್ನು ಜಿಪಂ ಸಿಇಒ ಪಿ.ಎನ್‌.ರವೀಂದ್ರ ಅಧ್ಯಕ್ಷರ ಅನುಮತಿ ಮೇರೆಗೆ ಅನಿರ್ದಿಷ್ಟಾವಧಿಗೆ ಮುಂದೂಡಿದರು. 

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.