ರಾಜ್ಯಕ್ಕೂ ಮೂರು ವಂದೇ ಭಾರತ ರೈಲು
Team Udayavani, Feb 23, 2019, 12:30 AM IST
ಬೆಂಗಳೂರು: ರೈಲ್ವೇ ಇಲಾಖೆಯಿಂದ ಕರ್ನಾಟಕಕ್ಕೆ ಸಿಹಿ ಸುದ್ದಿ ಸಿಕ್ಕಿದೆ. ಸದ್ಯ ದಿಲ್ಲಿಯಿಂದ ವಾರಾಣಸಿ ನಡುವೆ ಆರಂಭವಾಗಿರುವ “ವಂದೇ ಭಾರತ’ ಎಕ್ಸ್ಪ್ರೆಸ್ ರೈಲು ಸೌಲಭ್ಯವನ್ನು ಕರ್ನಾಟಕದ ಮೂರು ಮಾರ್ಗಗಳಿಗೆ ವಿಸ್ತರಿಸುವ ಯೋಜನೆ ಇದೆ ಎಂದು ರೈಲ್ವೇ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು- ಬೆಂಗಳೂರು, ಬೆಂಗಳೂರು-ಚೆನ್ನೈ, ಬೆಂಗಳೂರು- ಹೈದರಾಬಾದ್ ನಡುವೆ ವಂದೇ ಭಾರತ ರೈಲು ಓಡಿಸ ಲಾಗು ತ್ತದೆ ಎಂದು ಭರವಸೆ ನೀಡಿದ್ದಾರೆ. ಇತ್ತೀಚೆಗೆ ದಿಲ್ಲಿ- ವಾರಾಣಸಿ ನಡುವೆ ವಂದೇ ಭಾರತ ಸೆಮಿ ಹೈಸ್ಪೀಡ್ ರೈಲು ಸಂಚಾರಕ್ಕೆ ಚಾಲನೆ ನೀಡಲಾಗಿದ್ದು, ಇದೇ ರೀತಿ 30 ರೈಲುಗಳ ಸಂಚಾರ ಸದ್ಯದಲ್ಲೇ ಆರಂಭವಾಗಲಿದೆ. ಅದರಲ್ಲಿ ಬೆಂಗಳೂರು, ಮಂಗಳೂರಿನಿಂದ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವುದು ಸೇರಿದೆ ಎಂದು ಹೇಳಿದರು. ಜತೆಗೆ ರಾಷ್ಟ್ರಾದ್ಯಂತ 100ಕ್ಕೂ ಹೆಚ್ಚು ವಂದೇ ಭಾರತ ಸೆಮಿ ಹೈಸ್ಪೀಡ್ ರೈಲುಗಳನ್ನು ಜಾರಿಗೊಳಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಆರು ತಿಂಗಳಲ್ಲಿ ಸಂಪೂರ್ಣ ವೈಫೈ
ಮುಂದಿನ ಆರು ತಿಂಗಳಲ್ಲಿ ಕರ್ನಾಟಕದ ಎಲ್ಲ ರೈಲು ನಿಲ್ದಾಣಗಳಲ್ಲೂ ವೈಫೈ ಸೌಲಭ್ಯ ಸಿಗಲಿದೆ ಎಂದೂ ಪಿಯೂಷ್ ಗೋಯಲ್ ಘೋಷಿಸಿದ್ದಾರೆ. ಜತೆಗೆ ದೇಶಾದ್ಯಂತ 1.2 ಲಕ್ಷ ಕಿ.ಮೀ. ಸ್ವದೇಶಿ ಆಟೋಮ್ಯಾಟಿಕ್ ಸಿಗ್ನಲಿಂಗ್ ವ್ಯವಸ್ಥೆ ಕಲ್ಪಿಸುವ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.
ಕೋಲಾರದಲ್ಲಿ ಮೊದಲು ಕೋಚ್ ವರ್ಕ್ಶಾಪ್ ಪ್ರಾರಂಭಿಸಲು ಉದ್ದೇಶಿಸಿದ್ದೇವೆ. ಅನಂತರ ಬೇಡಿಕೆ ಹೆಚ್ಚಿದಲ್ಲಿ ಅದನ್ನು ಉನ್ನತ ದರ್ಜೆಗೇರಿಸಿ ಕೋಚ್ ಫ್ಯಾಕ್ಟರಿಯಾಗಿ ಪರಿವರ್ತಿಸಲಾಗುತ್ತದೆ ಎಂದು ತಿಳಿಸಿದರು.
ಎಚ್ಡಿಕೆ ನೋಡಿ ಚಟಾಕಿ
ಕೇಂದ್ರ ಹಾಗೂ ರಾಜ್ಯ ಸರ್ಕಾರ ಗಳು ಡಬಲ್ ಎಂಜಿನ್ ರೈಲಿನಂತೆ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದ ಪಿಯೂಷ್ ಗೋಯಲ್, ಕರ್ನಾಟಕದ ಜನ ಬಿಜೆಪಿಗೆ 104 ಸ್ಥಾನಗಳಿಂದ ಹೆಚ್ಚು ಸ್ಥಾನ ನೀಡಿದ್ದರೆ ಡಬಲ್ ಎಂಜಿನ್ ಮತ್ತಷ್ಟು ಚೆನ್ನಾಗಿ ಕಾರ್ಯ ನಿರ್ವಹಿಸು ತ್ತಿತ್ತು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿಯವರತ್ತ ನೋಟ ಬೀರಿ ಚಟಾಕಿ ಹಾರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ