ವಿಮಾನಗಳಲ್ಲೂ ಇನ್ನು ಜೈವಿಕ ಇಂಧನ ಮಿಶ್ರಣ


Team Udayavani, Feb 23, 2019, 12:52 AM IST

68.jpg

ಬೆಂಗಳೂರು: ಸರ್ಕಾರಿ ಬಸ್‌ಗಳಂತೆ ವಿಮಾನಗಳಲ್ಲಿಯೂ ಜೈವಿಕ ಇಂಧನ ಬಳಸಲು ಭಾರತೀಯ ವೈಮಾನಿಕ ಕ್ಷೇತ್ರದಲ್ಲಿ ಸದ್ದಿಲ್ಲದೆ ಹೊಸ ಪ್ರಯೋಗವೊಂದು ನಡೆಯುತ್ತಿದ್ದು, ಇದು ಸಾಕಾರಗೊಂಡರೆ ಹೊಂಗೆ, ಜತ್ರೋಪ ಮತ್ತಿತರ ಜೈವಿಕ ಇಂಧನ ಮೂಲದ ಬೆಳೆಗಳನ್ನು ಬೆಳೆಯುವ ರೈತರ ಅದೃಷ್ಟವೇ ಖುಲಾಯಿಸಲಿದೆ.

ಈಗಾಗಲೇ ಭಾರತೀಯ ವಾಯುಸೇನೆಯ ಯುದ್ಧ ವಿಮಾನದಲ್ಲಿ 2019ರ ಜ.26ರಂದು ಶೇ.10ರಷ್ಟು ಬಯೋ ಎಟಿಎಫ್ (ಏವಿಯೇಷನ್‌ ಟರ್ಬೈನ್‌ ಫ್ಯುಯಲ್‌) ಅನ್ನು ಮಿಶ್ರಣ ಮಾಡಿ ಯಶಸ್ವಿ ಹಾರಾಟ ನಡೆಸಲಾಗಿದೆ. ಅಲ್ಲದೆ, 2018ರ ಆಗಸ್ಟ್‌ನಲ್ಲಿ ಸ್ಪೈಸ್‌ ಜೆಟ್‌ನಲ್ಲಿ ಕೂಡ ಶೇ.25ರಷ್ಟು ಈ ಜೈವಿಕ ಇಂಧನವನ್ನು ಯಶಸ್ವಿಯಾಗಿ ಬಳಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಈ ಪ್ರಯೋಗವನ್ನು ವಿಸ್ತರಿಸಲು ಉದ್ದೇಶಿಸಲಾಗಿದೆ. ಹಾಗೊಂದು ವೇಳೆ ಇದು ಪೂರ್ಣಪ್ರಮಾಣದಲ್ಲಿ ಸಾಕಾರಗೊಂಡರೆ ಇದಕ್ಕೆ ಅಗತ್ಯವಿರುವ ಕಚ್ಚಾವಸ್ತುಗಳಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಬರಲಿದ್ದು, ಇದು ರೈತರ ಬದುಕು ಬದಲಿಸಲಿದೆ.

ಛತ್ತೀಸಗಡದಲ್ಲಿ ಸಂಸ್ಕರಣಾ ಘಟಕ” ಡೆಹರಾಡೂನ್‌ ನ ಸಿಎಸ್‌ಐಆರ್‌-ಭಾರತೀಯ ತೈಲ ಸಂಸ್ಥೆಯು ಈ ಜೈವಿಕ ವೈಮಾನಿಕ ಇಂಧನ ತಯಾರಿಕೆ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸಿದ್ದು, ಪ್ರಸ್ತುತ ಜತ್ರೋಪದಿಂದ ಹೊರತೆಗೆದ ತೈಲವನ್ನು ಸಂಸ್ಕರಣೆ ಮಾಡಿ, ಅದನ್ನು ವಿಮಾನಕ್ಕೆ ಬೇಕಾದ ಇಂಧನವನ್ನಾಗಿ ಪರಿವರ್ತಿಸಿ ಪ್ರಯೋಗ ಮಾಡಲಾಗಿದೆ. ಭಾರತೀಯ ವಾಯುಸೇನೆ ಸಹಯೋಗದಲ್ಲಿ ಮುಂದಿನ ಒಂದೂವರೆ ವರ್ಷದಲ್ಲಿ ಛತ್ತೀಸ್‌ಗಡದಲ್ಲಿ ಜೈವಿಕ ಇಂಧನ ಸಂಸ್ಕರಣಾ ಘಟಕ ಸ್ಥಾಪನೆ ಗುರಿ ಇದೆ ಎಂದು ಸಿಎಸ್‌ಐಆರ್‌-ಐಐಪಿ ವಿಜ್ಞಾನಿ ಸಲೀಂ ಅಖ್ತರ್‌ ಫಾರೂಕಿ “ಉದಯವಾಣಿ’ಗೆ ತಿಳಿಸಿದರು.

ಜತ್ರೋಪ ಮಾತ್ರವಲ್ಲ; ಹೊಂಗೆ, ಬಳಕೆಯಾದ ಅಡಿಗೆ ಎಣ್ಣೆ, ಪಾಮ್‌ ಆಯಿಲ್‌, ಪಾಚಿ ಸೇರಿ ಸುಮಾರು 30ಕ್ಕೂ ಅಧಿಕ ಮರಗಳಿಂದ ಜೈವಿಕ ಇಂಧನ ತಯಾರಿಸಬಹುದು. ಆದರೆ, ವಿಮಾನಗಳಿಗೆ ಸಾಕಷ್ಟು ಪ್ರಮಾಣದ ಇಂಧನ ಬೇಕಾಗುತ್ತದೆ. ಉದಾಹರಣೆಗೆ ಒಂದು ಚಿಕ್ಕ ಗಾತ್ರದ ವಾಣಿಜ್ಯ ಉದ್ದೇಶಿ ವಿಮಾನದಲ್ಲಿ ಶೇ.50ರಷ್ಟು ಜೈವಿಕ ಇಂಧನ ಮಿಶ್ರಣ ಮಾಡಿ 300 ಕಿ.ಮೀ. ಸಂಚರಿಸಲು ಕನಿಷ್ಠ 600 ಲೀ. ಜೈವಿಕ ಇಂಧನದ ಅವಶ್ಯಕತೆ ಇದೆ. ಒಂದು ಲೀ. ಜತ್ರೋಪ ತೈಲ ಉತ್ಪಾದನೆಗೆ 3 ಕೆ.ಜಿ. ಬೀಜಗಳು ಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಆದರೆ, ಸದ್ಯದ ಸ್ಥಿತಿಯಲ್ಲಿ ಈ ಬೇಡಿಕೆಯನ್ನು ಪೂರೈಸುವಷ್ಟು ಜತ್ರೋಪ, ಹೊಂಗೆ ಮತ್ತಿತರ ಮರಗಳು ನಮ್ಮಲ್ಲಿ ಇಲ್ಲ. ಹಾಗಾಗಿ, ಹಂತ-ಹಂತವಾಗಿ ಇದನ್ನು ಅಭಿವೃದಿಟಛಿಪಡಿಸಬೇಕಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

ಒಂದು ಎಕರೆ ಜತ್ರೋಪದಿಂದ 1,600 ಲೀ. ತೈಲ ಉತ್ಪಾದನೆ ಮಾಡಬಹುದು. ಇದನ್ನು ಹೆಚ್ಚಾಗಿ ರಾಜಸ್ಥಾನ, ರಾಜ್ಯದ ಕೆಲವು ಪ್ರದೇಶಗಳಲ್ಲಿ ಬೆಳೆಯಲಾಗುತ್ತದೆ. ಇನ್ನು ಹೊಂಗೆಯನ್ನು ಕರ್ನಾಟಕದಲ್ಲಿ ಹೆಚ್ಚಾಗಿ ಬೆಳೆಯಲಾಗುತ್ತಿದೆ ಎಂದು ಕೃಷಿ ಇಲಾಖೆ ಅಧಿಕಾರಿಯೊಬ್ಬರು ಅಭಿಪ್ರಾಯಪಡುತ್ತಾರೆ.

17 ಕೋಟಿ ಉಳಿತಾಯ
ಜಾಗತಿಕ ಮಟ್ಟದಲ್ಲಿ ವೈಮಾನಿಕ ಕ್ಷೇತ್ರ ಸಾಕಷ್ಟುಅಭಿವೃದಿಟಛಿ ಹೊಂದುತ್ತಿದ್ದು, ಈ ವಿಮಾನಗಳ ಟರ್ಬೈನ್‌ಗಳಿಂದ ಹೊರಸೂಸುವ ಕಾರ್ಬನ್‌ ನಿಂದ ವಾಯುಮಾಲಿನ್ಯ ಕೂಡ ಹೆಚ್ಚುತ್ತಿದೆ. ಇದನ್ನು ತಗ್ಗಿಸುವ ನಿಟ್ಟಿನಲ್ಲಿ ಹಾಗೂ ವಿಮಾನಗಳಿಗೆ ಬಳಸುವ ಇಂಧನಕ್ಕಾಗಿ ಬೇರೆ ದೇಶಗಳ ಮೇಲಿನ ಅವಲಂಬನೆ ತಪ್ಪಿಸುವಲ್ಲಿ ಈ ಜೈವಿಕ ಇಂಧನ ಪ್ರಮುಖ ಪಾತ್ರ ವಹಿಸಲಿದೆ. ಆರ್ಥಿಕವಾಗಿಯೂ ಕೇವಲ ಶೇ. 10ರಷ್ಟು ಈ ಇಂಧನವನ್ನು ಮಿಶ್ರಣ ಮಾಡಿದರೂ ವಾರ್ಷಿಕ ಸರಿಸುಮಾರು 17 ಕೋಟಿ ರೂ. ಉಳಿತಾಯ ಆಗಲಿದೆ ಎಂದು ಸಲೀಂ ಅಖ್ತರ್‌ ತಿಳಿಸಿದರು.

ವಿಜಯ ಕುಮಾರ ಚಂದರಗಿ 

ಟಾಪ್ ನ್ಯೂಸ್

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.