ಗ್ಯಾಸ್‌ ಸಂಪರ್ಕಕ್ಕೆ  ಕಾರ್ಯಕರ್ತೆಯರ ಮೊಬೈಲ್‌


Team Udayavani, Feb 23, 2019, 6:34 AM IST

23-february-6.jpg

ಬೆಳ್ತಂಗಡಿ : ಅಂಗನವಾಡಿ ಕೇಂದ್ರಗಳಿಗೆ ಅಡುಗೆ ಅನಿಲ ಸಂಪರ್ಕ ನೀಡುವ ಸಂದರ್ಭ ಕೇಂದ್ರ ಕಾರ್ಯಕರ್ತೆಯರ ಮೊಬೈಲ್‌ ಸಂಖ್ಯೆ ನೀಡಲಾಗುತ್ತಿದ್ದು, ಇದರಿಂದ ಅವರು ಮನೆಯ ಅನಿಲ ಸಂಪರ್ಕಕ್ಕೆ ಅರ್ಜಿ ಹಾಕಿದರೆ ತಿರಸ್ಕಾರ ಗೊಳ್ಳುತ್ತಿದೆ. ಈ ಸಮಸ್ಯೆ ಬಗೆಹರಿಸುವ ಕುರಿತು ಸರಕಾರಕ್ಕೆ ಬರೆಯಲು ಬೆಳ್ತಂಗಡಿ ತಾ.ಪಂ. ಸಾಮಾನ್ಯ ಸಭೆ ತೀರ್ಮಾನಿಸಿತು.

ಶುಕ್ರವಾರ ತಾ.ಪಂ. ಸಭಾಂಗಣದಲ್ಲಿ ಅಧ್ಯಕ್ಷೆ ದಿವ್ಯಜ್ಯೋತಿ ಅಧ್ಯಕ್ಷತೆ ಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮೇಲಿನ ನಿರ್ಣಯ ಕೈಗೊಳ್ಳಲಾಯಿತು. ಸಭೆಯಲ್ಲಿ ವಿಷಯ ಪ್ರಸ್ತಾವಿಸಿದ ಸದಸ್ಯ ಜೋಯಲ್‌ ಮೆಂಡೊನ್ಸಾ, ಎರಡೆರಡು ಕಡೆ ಅಡುಗೆ ಅನಿಲಕ್ಕೆ ಮೊಬೈಲ್‌ ಸಂಖ್ಯೆ ನೀಡಲು ಅಸಾಧ್ಯವಾಗಿದ್ದು, ಇದರಿಂದ ಸರಕಾರ ಉಚಿತವಾಗಿ ನೀಡುವ ಅನಿಲ ಸಂಪರ್ಕ ಪಡೆಯಲು ಅಂಗನವಾಡಿ ಕಾರ್ಯಕರ್ತರು . ಅನರ್ಹರಾಗುತ್ತಿದ್ದಾರೆ ಎಂದರು. ಬಳಿಕ ಈ ಕುರಿತು ಚರ್ಚೆ ನಡೆದು ಸರಕಾರಕ್ಕೆ ಬರೆಯಲು ತೀರ್ಮಾನಿಸಲಾಯಿತು.

ಅಂಗನವಾಡಿ ಮಕ್ಕಳಿಗೆ ನೀಡುವ ಮೊಟ್ಟೆ ಹಾಗೂ ಗ್ಯಾಸ್‌ ಸಂಪರ್ಕ ಕಾರ್ಯ ಕರ್ತೆಯರೇ ಹಣ ನೀಡಬೇಕಿದೆ, ಜತೆಗೆ ಅವರಿಗೆ ವೇತನವೂ ವಿಳಂಬವಾಗುತ್ತಿದೆ ಎಂದು ತಿಳಿಸಿದಾಗ, ಕಚೇರಿಯಲ್ಲಿ ಲೆಕ್ಕಿಗರು ಸಹಿತ ಸಿಬಂದಿ ಕೊರತೆ ಇರುವುದರಿಂದ ತೊಂದರೆಯಾಗುತ್ತಿದೆ ಎಂದು ಸಿಡಿಪಿಒ ಪ್ರಿಯಾ ಆ್ಯಗ್ನೇಸ್‌ ಸಭೆಯ ಗಮನಕ್ಕೆ ತಂದರು.

ಕ್ಯಾಂಟೀನ್‌
ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಸಂಬಂಧಪಟ್ಟ ಅಧಿಕಾರಿ ಔಷಧ ಹಾಗೂ ಇತರ ಕೆಮಿಕಲ್‌ಗ‌ಳನ್ನು ಒಟ್ಟಿಗೆ ಇಟ್ಟಿದ್ದಾರೆ ಎಂಬ ಪ್ರಕರಣ ಸಾಬೀತಾಗಿದ್ದು, ಅವರ ವಿರುದ್ಧ ಕ್ರಮ ಜರಗಿಸಬೇಕು ಎಂದು ಸದಸ್ಯ ಸುಧಾಕರ್‌ ಆಗ್ರಹಿಸಿದರು. ಜತೆಗೆ ಕ್ಯಾಂಟೀನನ್ನು ಶೀಘ್ರ ತೆರೆಯುವಂತೆ ಒತ್ತಾಯಿಸಿದರು.

ಆಸ್ಪತ್ರೆಯಲ್ಲಿ ಆ್ಯಂಬುಲೆನ್ಸ್‌ ಇಲ್ಲದೆ ಗರ್ಭಿಣಿಯರು ಹಾಗೂ ರೋಗಿಗಳಿಗೆ ತೊಂದರೆಯಾಗುತ್ತಿದೆ ಎಂದು ಸದಸ್ಯೆ ಧನಲಕ್ಷ್ಮೀ ತಿಳಿಸಿದರು. ಆ್ಯಂಬುಲೆನ್ಸ್  ಗೆ ಪ್ರಸ್ತಾವನೆ ಹೋಗಿದೆ ಎಂದು ಇಲಾಖೆ ಅಧಿಕಾರಿ ತಿಳಿಸಿದರು. ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷೆ ನಡೆಸದೆ ಔಷಧ ನೀಡುತ್ತಿದ್ದಾರೆ ಎಂದು ಸದಸ್ಯ ಜಯರಾಮ್‌ ಆರೋಪಿಸಿದರು.

ಒತ್ತುವರಿ ತೆರವು
ವೇಣೂರಿನ ಅಜಿಲ ಕೆರೆ ಸಹಿತ ತಾ|ನ ಎಲ್ಲ ಕೆರೆಗಳ ಒತ್ತುವರಿ ತೆರವಿಗೆ ಸದಸ್ಯ ವಿಜಯ ಗೌಡ ಅವರು ತಹಶೀಲ್ದಾರ್‌ ಗೆ ಮನವಿ ಮಾಡಿದರು. ಜತೆಗೆ 94ಸಿ ಯೋಜನೆಯ ಅರ್ಜಿ ತಿರಸ್ಕಾರದಿಂದ ಅರ್ಹರಿಗೆ ತೊಂದರೆಯಾಗಿರುವ ಕುರಿತು ತಿಳಿಸಿದಾಗ, ಅವರು ಮತ್ತೂಮ್ಮೆ ಅರ್ಜಿ ಸಲ್ಲಿಸಿದರೆ ಅದನ್ನು ಸರಿಪಡಿಸುವುದಾಗಿ ತಹಶೀಲ್ದಾರ್‌ ತಿಳಿಸಿದರು.

ಗುರುವಾಯನಕೆರೆ ಪ್ರೌ.ಶಾಲೆಗೆ ದೈಹಿಕ ಶಿಕ್ಷಣ ಶಿಕ್ಷಕರ ನೇಮಕದ ಕುರಿತು ಸದಸ್ಯ ಗೋಪಿನಾಥ್‌ ನಾಯಕ್‌ ತಿಳಿಸಿದಾಗ, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕ್ರಮ ಕೈಗೊಳ್ಳುವುದಾಗಿ ಬಿಇಒ ತಿಳಿಸಿದರು. ಚಾರ್ಮಾಡಿಯಲ್ಲಿ ಕೆಲವು ಮನೆಗಳಿಗೆ ವಿದ್ಯುತ್‌ ಸಂಪರ್ಕ ನೀಡದ ಕುರಿತು ಸದಸ್ಯ ಕೊರಗಪ್ಪ ಗೌಡ ಪ್ರಸ್ತಾವಿಸಿದರು. ಹೊಸ ಮೀಟರ್‌ ಹಾಗೂ ಬಾಕ್ಸ್‌ ಅಳವಡಿಕೆಯಿಂದ ಕೆಲವು ಮನೆಗಳ ಗೋಡೆಗಳಲ್ಲಿ ಶಾಕ್‌ ಹೊಡೆಯುತ್ತಿದೆ ಎಂದು ಸದಸ್ಯ ಶಶಿಧರ್‌ ಕಲ್ಮಂಜ ತಿಳಿಸಿದರು.

ನನ್ನ ಕಚೇರಿಗೆ ಸಿಸಿ ಕೆಮರಾ
ಸಭೆಯಲ್ಲಿ ಕುವೆಟ್ಟು ಗ್ರಾಮ ಪಂಚಾಯತ್‌ ಅಧ್ಯಕ್ಷ ಅಶೋಕ್‌ ಕೋಟ್ಯಾನ್‌ ಅವರು ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರ ವ್ಯಾಪಾಕವಾಗಿದೆ ಎಂದು ಆರೋಪಿಸಿದಾಗ, ತಹಶೀಲ್ದಾರ್‌ ಅವರು ಉದಾಹರಣೆ ಸಹಿತ ಮಾತನಾಡುವಂತೆ ತಿಳಿಸಿದರು. ಅನಂತರ ಮಾತು ಮುಂದುವರಿಸಿದ ತಹಶೀಲ್ದಾರ್‌, ನಾನು ಬಂದ ಬಳಿಕ ನನ್ನ ಕಚೇರಿಗೂ ಸಿಸಿ ಕೆಮರಾ ಅಳವಡಿಸಿದ್ದು, ಇತರೆಡೆಗೂ ಅನುಷ್ಠಾನಗೊಳಿಸುತ್ತಿದ್ದೇನೆ ಎಂದು ಅವರು ತಿಳಿಸಿದರು.

ನನ್ನ ಕಚೇರಿಗೆ ಬರುವುದಕ್ಕೆ ಎಲ್ಲರಿಗೂ ಮುಕ್ತ ಅವಕಾಶವಿದ್ದು, ನೇರವಾಗಿ ಫಲಾನುಭವಿಗಳೇ ಬಂದರೆ ತತ್‌ಕ್ಷಣ ಕೆಲಸ ಮಾಡಿಸಿಕೊಡುತ್ತೇನೆ ಎಂದರು. ತಾಲೂಕು ಪಂಚಾಯತ್‌ ಉಪಾಧ್ಯಕ್ಷೆ ವೇದಾವತಿ, ಸ್ಥಾಯೀ ಸಮಿತಿ ಅಧ್ಯಕ್ಷ ವಿ.ಟಿ. ಸೆಬಾಸ್ಟಿನ್‌ ಮೊದಲಾದವರು ಉಪಸ್ಥಿತರಿದ್ದರು.

ಫೆ. 28ಕ್ಕೆ ಗಡಿಗುರುತು ಕಲ್ಲು 
ಮಾಲಾಡಿ ಶಾಲೆಯ ಜಾಗದ ಸರ್ವೆ ಕಾರ್ಯ ಮುಗಿದರೂ ಗಡಿ ಗುರುತು ಕಲ್ಲು ಹಾಕುವ ಕಾರ್ಯ ನಡೆಯದ ಕುರಿತು ಜೋಯಲ್‌ ಸಭೆಗೆ ತಿಳಿಸಿದರು. ಈ ಸಂದರ್ಭ ತಹಶೀಲ್ದಾರ್‌ ಗಣಪತಿ ಶಾಸ್ತ್ರಿ ಅವರು ಫೆ. 28ರಂದು ಪೊಲೀಸ್‌ ರಕ್ಷಣೆಯೊಂದಿಗೆ ಸರ್ವೆ ಕಾರ್ಯ ನಡೆಸಲು ಬಿಇಒ ತಾರಾಕೇಸರಿ ಅವರಿಗೆ ಸೂಚಿಸಿದರು. ಸರ್ವೆ ಕಾರ್ಯದಲ್ಲಿ ತಾನೂ ಭಾಗವಹಿಸುವುದಕ್ಕೆ ಪ್ರಯತ್ನ ಪಡುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.