ಕೆರೆಯಲ್ಲಿನ ಜಾಲಿ ಮರ ತೆರವುಗೊಳಿಸಿ


Team Udayavani, Feb 23, 2019, 7:29 AM IST

kerey.jpg

ದೇವನಹಳ್ಳಿ: ಸಾರ್ವಜನಿಕರಿಗೆ ಕೆರೆ ಅಂಗಳಗಳಲ್ಲಿ ಬೆಳೆದು ನಿಂತಿರುವ ಜಾಲಿ ಮರಗಳಿಂದ ತೊಂದರೆಯಾಗುತ್ತಿದ್ದು, ಜಿಲ್ಲೆಯ ಎಲ್ಲಾ ಕೆರೆಗಳಲ್ಲಿರುವ ಜಾಲಿ ಮರಗಳನ್ನು ಕೂಡಲೇ ತೆರವುಗೊಳಿಸಬೇಕೆಂದು ಸಂಸದ ಎಂ.ವೀರಪ್ಪ ಮೊಯ್ಲಿ ಅಧಿಕಾರಿಗಳಿಗೆ ತಾಕೀತು ಮಾಡಿದರು.  ತಾಲೂಕಿನ ಚಪ್ಪರದಕಲ್ಲು ಸರ್ಕಲ್‌ ಬಳಿಯ ಜಿಪಂ ಸಭಾಂಗಣದಲ್ಲಿ 2018-19ನೇ ಸಾಲಿನ ಮೂರನೇ ತ್ತೈಮಾಸಿಕ ದಿಶಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಎಸ್ಸೆಸ್ಸೆಲ್ಸಿ ಕೇಂದ್ರ ಬದಲಿಸಿದ್ದೇಕೆ?: ವಿಶ್ವನಾಥಪುರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರವನ್ನು ಯಾವ ರೀತಿ ಅಧಿಕಾರಿಗಳು ಬದಲಾಯಿಸಿದ್ದಾರೆ. ಅದಕ್ಕೆ ಕಾರಣಗಳೇನು ಎಂಬುದು ಸರಿಯಾದ ಮಾಹಿತಿಯನ್ನು ಅಧಿಕಾರಿಗಳು ಮೊದಲು ನೀಡಬೇಕು. ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ಪ್ರೌಢಶಾಲೆ ಮತ್ತು ಕಾಲೇಜನ್ನು ಮಂಜೂರು ಮಾಡಿಕೊಡಲಾಗಿತ್ತು. ಎಲ್ಲಾ ರೀತಿಯ ಮೂಲಭೂತ ಸೌಲಭ್ಯ ಆ ಕೇಂದ್ರದಲ್ಲಿದೆ. ಉಪನಿರ್ದೇಶಕರ ಕಚೇರಿ ಅಲ್ಲಿಗೆ ಸ್ಥಳಾಂತರಗೊಂಡರೆ ಅಲ್ಲಿ ಪರೀಕ್ಷಾ ಕೇಂದ್ರ ಇರಬಾರದೆಂಬ ನಿಯಮವೇನೂ ಇಲ್ಲ. ಖಾಸಗಿ ಶಾಲೆಗೆ ನೀಡಿರುವುದು ತಪ್ಪಾಗಿದೆ.

ಅಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿದೆ. ವಿದ್ಯಾರ್ಥಿಗಳಿಗೆ ಇದರಿಂದ ಅನಾನುಕೂಲವೇ ಹೆಚ್ಚಾಗಿದೆ. ಕಳೆದ 18 ವರ್ಷಗಳಿಂದ ಪರೀಕ್ಷಾ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, ಇದುವರೆಗೂ ಯಾವುದೇ ಒಂದು ಕಪ್ಪು ಚುಕ್ಕೆಯೂ ಇಲ್ಲ. ಈಗಾಗಲೇ ಈ ವಿಚಾರವಾಗಿ ಮೇಲಾಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ವಿಶ್ವನಾಥಪುರದಲ್ಲಿಯೇ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರವನ್ನು ಮುಂದುವರೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.  

1,200 ಕೋಟಿ ರೂ. ಬಾಕಿ: ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆಗೆ ಕಳೆದ ನಾಲ್ಕೂವರೆ ವರ್ಷದಲ್ಲಿ ಒಂದು ನಯಾಪೈಸೆ ಸಹ ನೀಡಿಲ್ಲ. ಉದ್ಯೋಗ ಖಾತ್ರಿ ಯೋಜನೆಯಲ್ಲಿ 1,200 ಕೋಟಿ ರೂ. ಅನುದಾನವನ್ನು ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿದೆ. ಈ ಬಗ್ಗೆ 2 ತಿಂಗಳ ಹಿಂದಷ್ಟೆ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೆ„ರೇಗೌಡ ಸೇರಿದಂತೆ ಸಂಸದರ ನಿಯೋಗ ಕೇಂದ್ರ ಸಚಿವರನ್ನು ಭೆೇಟಿ ಮಾಡಿ ಮನವಿ ಮಾಡಿದೆ.

ಆದರೂ ಅನುದಾನ ಬಿಡುಗಡೆಯಾಗಿಲ್ಲ. ಪ್ರತಿ ಮೂರು ತಿಂಗಳಿಗೊಮ್ಮೆ ದಿಶಾ ಸಭೆಯನ್ನು ಮಾಡಿ ಕೇಂದ್ರ ಸರ್ಕಾರದಿಂದ ಬರುವ ಅನುದಾನಗಳು ಹಾಗೂ ಅವು ಕಾರ್ಯಗತ ಆಗಿವೆಯೋ ಇಲ್ಲವೋ ಎಂಬುವುದರ ಬಗ್ಗೆ ಚರ್ಚಿಸಿ ತೀರ್ಮಾನಗಳನ್ನು ಕೈಗೊಳ್ಳುತ್ತೇವೆ ಎಂದು ಹೇಳಿದರು. ಯೋಜನೆಗಳ ಜಾರಿಗೆ ಶ್ರಮಿಸಿ: ಬೇಸಿಗೆ ಸಮೀಪಿಸುತ್ತಿದ್ದು, ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಜನ,

ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಗಳಿವೆ. ಅಧಿಕಾರಿಗಳು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರದೆ, ಕುಡಿಯುವ ನೀರಿನ ಸಮಸ್ಯೆ ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಜನರ ಕಲ್ಯಾಣಕ್ಕೆ ನೆರವಾಗುವ ಕೇಂದ್ರ ಸರ್ಕಾರದ ಬಹಳಷ್ಟು ಪ್ರಾಯೋಜಿತ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗಬೇಕಾದರೆ, ಅಧಿಕಾರಿಗಳ ಸಹಕಾರ ಹಾಗೂ ಮುಂದಾಳತ್ವ ಬಹಳ ಅಗತ್ಯ ಎಂದು ತಿಳಿಸಿದರು.  

ಅನುದಾನ ಖಾಲಿ ಮಾಡಿ: ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ ಪ್ರತಿ ತಾಲೂಕಿಗೆ 2 ಕೋಟಿ ರೂ. ಅನುದಾನವನ್ನು ಕೇಂದ್ರ ಸರ್ಕಾರ ಮಂಜೂರು ಮಾಡಿದೆ ಎಂದು ಇಲಾಖೆ ಅಧಿಕಾರಿ ಸಭೆಗೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಂಸದರು, ಕೇಂದ್ರ ಸರ್ಕಾರದ ಯಾವುದೇ ಅನುದಾನ ವೆಚ್ಚವಾಗದೆ ಹಿಂದಿರುಗಬಾರದು. ಮಾರ್ಚ್‌ ಅಂತ್ಯದೊಳಗೆ ಅನುದಾನವನ್ನು ಸಮಪರ್ಕವಾಗಿ ಬಳಕೆ ಮಾಡಿಕೊಳ್ಳಬೇಕೆಂದು ಸೂಚಿಸಿದರು.  

ಜಿಲ್ಲಾಧಿಕಾರಿ ಸಿ.ಎಸ್‌.ಕರೀಗೌಡ ಮಾತನಾಡಿ, ಜಾಲಿ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಕ್ರಮ ವಹಿಸಬೇಕೆಂದು ಆದೇಶಿಸಲಾಗಿದೆ. ತ್ಯಾಜ್ಯ ವಿಲೇವಾರಿ ಘಟಕಕ್ಕೆ 72 ಗ್ರಾಮಗಳಿಗೆ ಜಿಪಂ ಜಾಗ ಕೇಳಿದ್ದು, ಈಗಾಗಲೇ ತಹಶೀಲ್ದಾರ್‌ರಿಗೆ ಜಾಗ ಗುರುತಿಸುವಂತೆ ಆದೇಶ ಮಾಡಲಾಗಿದೆ. ಬೂದಿಗೆರೆ ಗ್ರಾಮದಲ್ಲಿ ತಾಪಂ ಅಧ್ಯಕ್ಷರು ಜಾಗ ಗುರುತಿಸಿಕೊಡುವಂತೆ ಸಭೆಯ ಗಮನಕ್ಕೆ ತಂದಿರುವುದರಿಂದ ಆದ್ಯತೆ ಮೆರೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ತಾಪಂ ಅಧ್ಯಕ್ಷೆ ಭಾರತಿ ಮಾತನಾಡಿ, ಬೂದಿಗೆರೆ ಗ್ರಾಮಕ್ಕೆ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಾಗ ನೀಡುವಂತೆ ಹಲವಾರು ಬಾರಿ ಮನವಿ ಮಾಡಿದರೂ ಗುರುತಿಸಿಕೊಟ್ಟಿಲ್ಲ. ಕೂಡಲೇ ಕ್ರಮ ಕೈಗೊಳ್ಳಬೇಕೆಂದರು. ಜಾಗೃತಿ ಸಮಿತಿ ಸದಸ್ಯ ಕಾರಹಳ್ಳಿ ಜಯರಾಮ್‌ ಮಾತನಾಡಿದರು. ಈ ವೇಳೆ ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ, ಜಿಪಂ ಸಿಇಒ ಆರ್‌.ಲತಾ, ಉಪ ಕಾರ್ಯದರ್ಶಿ ಕರಿಯಪ್ಪ, ಮುಖ್ಯ ಲೆಕ್ಕಾಧಿಕಾರಿ ಶೋಭಾ, ಯೋಜನಾಧಿಕಾರಿ ವಿನುತಾರಾಣಿ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi: ಪರಿಸರ ಸ್ನೇಹಿ ಸಿಎನ್‌ಜಿ ಬಸ್‌ ಸಂಚಾರ-ಸಿಎನ್‌ಜಿ ಲಭ್ಯತೆ ಸಮಸ್ಯೆ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬರಪೀಡಿತ ಪಟ್ಟಿಯಲ್ಲಿ ಸೇರಿದ ಕಾರ್ಕಳಕ್ಕೆ 152 ಕೆರೆಗಳೇ ಶ್ರೀರಕ್ಷೆ

ಬರಪೀಡಿತ ಪಟ್ಟಿಯಲ್ಲಿ ಸೇರಿದ ಕಾರ್ಕಳಕ್ಕೆ 152 ಕೆರೆಗಳೇ ಶ್ರೀರಕ್ಷೆ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.