ಎಲೆಕೂಡ್ಲಿಗಿ ಶಾಲೆಗೆ “ಹಸಿರು ಶಾಲೆ’ ಪ್ರಶಸ್ತಿ ಗೌರವ


Team Udayavani, Feb 23, 2019, 9:56 AM IST

ray-1.jpg

ಮಸ್ಕಿ: ಶಾಲಾ ಉಸ್ತುವಾರಿ ಸಮಿತಿ ಸದಸ್ಯರು, ಶಿಕ್ಷಕರು ಮನಸ್ಸು ಮಾಡಿದರೆ ಉತ್ತಮ ಶಾಲೆಯನ್ನಾಗಿ ರೂಪಿಸಬಹುದು ಎಂಬುವುದಕ್ಕೆ ಸಮೀಪದ ಎಲೆಕೂಡ್ಲಿಗಿ ಗ್ರಾಮದ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಒಂದು ಉದಾಹರಣೆ.

ಮಸ್ಕಿಯಿಂದ 10-15 ಕಿಮೀ ದೂರವಿರುವ ಎಲೆಕೂಡ್ಲಿಗಿ ಗ್ರಾಮದಲ್ಲಿರುವ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರವೇಶಿಸಿದರೆ ಕಾಣಿಸುವ ಬೃಹತ್‌ ಗಿಡ-ಮರಗಳು, ಹಣ್ಣಿನ ಗಿಡಗಳು, ತರಕಾರಿ ಗಿಡಗಳು ಹಾಗೂ ವಿವಿಧ ಬಗೆಯ ಹೂವಿನ ಗಿಡಗಳು, ಶಾಲೆಯ ಶಿಕ್ಷಕರು
ಹಾಗೂ ವಿದ್ಯಾರ್ಥಿಗಳು ರೂಪಿಸಿದ ಶಾಲಾ ಕೈ ತೋಟ ಇಡೀ ಶಾಲೆಯ ಪರಿಸರವನ್ನೇ ಬದಲಾಯಿಸಿದೆ.

ಶಾಲೆಯ ವಿದ್ಯಾರ್ಥಿಗಳಿಗೆ ಶುದ್ಧ ಕುಡಿವ ನೀರು, ಗಾಳಿಯ ವ್ಯವಸ್ಥೆ ಜತೆಗೆ ಶಾಲಾ ಆವರಣದಲ್ಲಿರುವ ಬೆಳೆಸಿರುವ ಗಿಡ-ಮರಗಳನ್ನು ರಕ್ಷಿಸಿ ಅವುಗಳನ್ನು ಪೋಷಣೆ ಮಾಡಿಕೊಂಡು ಬರಲಾಗಿದೆ ಎಂದು ಶಾಲೆ ಉಸ್ತುವಾರಿ ಸಮಿತಿ ಅಧ್ಯಕ್ಷ ರಾಜಶೇಖರ ಪೂಲಭಾವಿ ತಿಳಿಸಿದರು. 

ಶಾಲೆಗೆ ಬರುವ ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವುದಕ್ಕೆ ಆದ್ಯತೆ ನೀಡಲಾಗಿದೆ. ಶಾಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಸಹ ಶಿಕ್ಷಕರ ಸಹಕಾರದಿಂದ “ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ಮಿತ್ರ ಶಾಲಾ ಕಾರ್ಯಕ್ರಮ 2018-19ನೇ ಸಾಲಿನಲ್ಲಿ ಜಿಲ್ಲಾ “ಹಸಿರು ಶಾಲೆ’ ಪ್ರಶಸ್ತಿಯು ಲಭಿಸಿರುವುದು ಸಂತಸ ತಂದಿದೆ ಎಂದು ಶಾಲಾ ಮುಖ್ಯೋಪಾಧ್ಯಾಯ ಬಸಣ್ಣ ತಿಳಿಸಿದರು.

ಶಾಲಾ ಆವರಣದಲ್ಲಿರುವ ಗಿಡಗಳು ತೆಂಗಿನಮರ, ನುಗ್ಗೆಕಾಯಿ, ಬಾದಾಮಿ, ಹೊಂಗೆ ಮರಗಳು, ಬೇವಿನ ಮರ, ಚಡೇದ್‌ ಗಿಡ, ಹಂದರ ಗಿಡ. ಹೂವಿನ ಗಿಡಗಳು: ಗುಲಾಬಿ, ಸೇವಂತಿ, ಚೆಂಡು ಹೂ, ದಾಸವಾಳ, ಅಡಿಕೆ ಹೂ, ಡ್ಯುರೆಂಟೊ. ತರಕಾರಿ: ಟೋಮೊಟೋ, ಬದನೇಕಾಯಿ, ಮೆಣಸಿನಕಾಯಿ, ಕರಿಬೇವು, ಚಳ್ಳ ಅಂಬರೇಕಾಯಿ, ಪುಂಡಿಪಲ್ಲೆ ಸೇರಿದಂತೆ ನೂರಕ್ಕೂ ಹೆಚ್ಚು ಗಿಡಮರಗಳನ್ನು ರಕ್ಷಣೆ, ವಿವಿಧ ಬಗೆಯ ಹೂವಿನ ಗಿಡಗಳು ಶಾಲಾ ಆವರಣದಲ್ಲಿ ಚಿಕ್ಕದಾದ ಕೈ ತೋಟ ಅಲ್ಲಿ ವಿವಿಧ ಕಾಯಿಪಲ್ಲೆಗಳನ್ನು ಬೆಳೆಲಾಗುತ್ತಿದೆ. ಶಾಲೆಯ ವಿದ್ಯಾರ್ಥಿಗಳು ತಮ್ಮ ಬಿಡುವಿನ ವೇಳೆಯಲ್ಲಿ ಇವುಗಳಿಗೆ ನೀರು ಹಾಕಿ ರಕ್ಷಣೆ ಮಾಡುತ್ತಿದ್ದಾರೆ ಎಂದು ಶಾಲೆಯ ಸಹ ಶಿಕ್ಷಕ ದುರುಗಪ್ಪ ಗೂಡದೂರು ಹೇಳಿದರು.

ವಿದ್ಯಾರ್ಥಿಗಳಿಂದ ಗಿಡಗಳ ದೇಣಿಗೆ: ಇದೇ ಶಾಲೆಯ ಹಳೆಯ ವಿದ್ಯಾರ್ಥಿಗಳಾದ ಗೋಪಾಲ್‌ ಜಾಜಿ ಮತ್ತು ಸುರೇಶ ಎಂಬುವವರು ಗಿಡಗಳನ್ನು ದೇಣಿಗೆ ನೀಡಿದ್ದಾರೆ. ಬೇಸಿಗೆಯಲ್ಲಿ ಶಾಲಾ ರಜೆ ಸಮಯದಲ್ಲಿ ಶಾಲಾ ಪರಿಸರದ ಜವಾಬ್ದಾರಿ ತೆಗೆದುಕೊಂಡು ರಕ್ಷಣೆ ಮಾಡುತ್ತಾರೆ ಎಂದು ತಿಳಿಸಿದರು.  

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.