ಕಾಶ್ಮೀರ: ಜಮಾತೆ ಇಸ್ಲಾಮಿಗೆ ದಿಗ್ಬಂಧನ
Team Udayavani, Feb 24, 2019, 12:30 AM IST
ಶ್ರೀನಗರ: ಪುಲ್ವಾಮಾ ದಾಳಿ ಅನಂತರ ಕಾಶ್ಮೀರ ಕಣಿವೆಯಲ್ಲಿ ಭದ್ರತಾ ಕ್ರಮ ತೀವ್ರ ಗೊಂಡಿರುವ ಮಧ್ಯೆ ಶುಕ್ರವಾರ ರಾತೋರಾತ್ರಿ ದಿಢೀರ್ ಕಾರ್ಯಾಚರಣೆಗಿಳಿದ ಭದ್ರತಾ ಪಡೆಗಳು ಜಮಾತ್ -ಎ- ಇಸ್ಲಾಮಿಯ ಸುಮಾರು 150 ಸದಸ್ಯರನ್ನು ವಶಕ್ಕೆ ಪಡೆದಿವೆ.
ಸಂಸ್ಥೆಯ ಮುಖ್ಯಸ್ಥ ಅಬ್ದುಲ್ ಹಮೀದ್ ಫಯಾಜ್ರನ್ನೂ ವಶಕ್ಕೆ ಪಡೆಯಲಾಗಿದೆ.35ಎ ವಿಧಿಯ ಮಾನ್ಯತೆ ಸೋಮವಾರ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಮಹತ್ವದ್ದು. ಇದರ ಬೆನ್ನಿಗೆ ಕಣಿವೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಭದ್ರತೆ ಹೆಚ್ಚಿಸಲಾಗಿದೆ. ಸುಮಾರು 10 ಸಾವಿರ ಅರೆಸೇನಾ ಪಡೆ ಸಿಬಂದಿಯನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ.
ಪ್ರತ್ಯೇಕತಾವಾದಿ ನಾಯಕರನ್ನು ವಶಕ್ಕೆ ಪಡೆದಿರುವುದು ಸಾಮಾನ್ಯ ಪ್ರಕ್ರಿಯೆ ಎಂದು ಸೇನಾಪಡೆ ಹೇಳಿದೆ. ಆದರೆ ಇಷ್ಟು ನಾಯಕ ರನ್ನು ಒಂದೇಟಿಗೆ ವಶಕ್ಕೆ ಪಡೆದಿರು ವುದು ಅಪರೂಪ ಎನ್ನಲಾಗಿದೆ.
ಜೆಕೆಎಲ್ಎಫ್ ಮುಖ್ಯಸ್ಥ ಯಾಸಿನ್ ಮಲಿಕ್ರನ್ನೂ ವಶಕ್ಕೆ ಪಡೆದು ಕೋಥಿಬಾಘ ಪೊಲೀಸ್ ಠಾಣೆ ಯಲ್ಲಿ ಇರಿಸಲಾಗಿದೆ.
ಘಟನೆಯನ್ನು ಪಿಡಿಪಿ ಮುಖ್ಯಸ್ಥೆ ಮಹೆಬೂಬಾ ಮುಫ್ತಿ ಖಂಡಿಸಿದ್ದಾರೆ. ಯಾಸೀನ್ ಮಲಿಕ್ ವಶ ಅಕ್ರಮ, ಬಲವಂತದ ಕ್ರಮ ಎಂದು ಹುರಿಯತ್ ಕಾನ್ಫರೆನ್ಸ್ನ ಮುಖ್ಯಸ್ಥ ಮಿರ್ವೈಜ್ ಉಮರ್ ಫಾರೂಕ್ ಖಂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
GST ಎಪ್ರಿಲ್ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ !
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
MUST WATCH
ಹೊಸ ಸೇರ್ಪಡೆ
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!
GST ಎಪ್ರಿಲ್ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ !
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?