ಯಲಹಂಕ ವಾಯುನೆಲೆಯಲ್ಲಿ ಹೆಚ್ಚುವರಿ ಅಗ್ನಿಶಾಮಕ ಸಿಬ್ಬಂದಿ
Team Udayavani, Feb 24, 2019, 4:28 AM IST
ಬೆಂಗಳೂರು: ನಗರದ ಯಲಹಂಕದ ವಾಯುನೆಲೆಯಲ್ಲಿ ನಡೆಯುತ್ತಿರುವ ಏರ್ ಶೋ ನ ಪಾರ್ಕಿಂಗ್ ಸ್ಥಳದಲ್ಲಿ ಶನಿವಾರ ಬೆಂಕಿ ಅನಾಹುತ ಸಂಭವಿಸಿ 277 ವಾಹನಗಳು ಸುಟ್ಟು ಕರಕಾಲದ ಘಟನೆ ನಡೆದ ಬಳಿಕ ಅಗ್ನಿಶಾಮಕ ಸಿಬ್ಬಂದಿ ಎಚ್ಚೆತ್ತುಕೊಂಡಿದ್ದು, ರವಿವಾರ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಏರ್ ಶೋನ ಕೊನೆಯ ದಿನವಾದ ರವಿವಾರ ಬೆಳಿಗ್ಗೆ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಡಿಜಿಪಿ ಎಂ.ಎನ್.ರೆಡ್ಡಿ, ಶನಿವಾರ ನಡೆದ ಘಟನೆಯ ತನಿಖೆಯನ್ನು ಮುಂದುವರಿಸಿದ್ದೇವೆ, ರವಿವಾರಕ್ಕೆ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಿದ್ದೇವೆ. ನೂರಕ್ಕೂ ಹೆಚ್ಚು ಮಂದಿ ಅಗ್ನಿಶಾಮಕ ಸಿಬ್ಬಂದಿ ಇಂದು ಯಲಹಂಕ ವಾಯುನೆಲೆಯಲ್ಲಿ ಕೆಲಸ ನಿರ್ವಹಿಸಲಿದ್ದಾರೆ ಎಂದರು.
ಏರ್ ಶೋ ಆರಂಭಕ್ಕೆ ಮುನ್ನಾದಿನ ಅಭ್ಯಾಸ ನಡೆಸುತ್ತಿದ್ದ ಸೂರ್ಯಕಿರಣ್ ವಿಮಾನಗಳೆರಡು ಡಿಕ್ಕಿಯಾದ ಕಾರಣ ಪೈಲಟ್ ಒಬ್ಬರು ಮೃತರಾಗಿದ್ದರು. ಶನಿವಾರ ಶೋ ನಡೆಯುತ್ತಿರುವ ಯಲಹಂಕ ವಾಯುನೆಲೆಯ ಗೇಟ್ ನಂ 5ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡು ಸುಮಾರು 277 ವಾಹನಗಳು ಸುಟ್ಟು ಕರಕಾಲಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್