ಮಾನವೀಯತೆಯೊಂದಿಗೆ ಸೇವೆ ಸಲ್ಲಿಸಿ
Team Udayavani, Feb 24, 2019, 6:18 AM IST
ಕಲಬುರಗಿ: ಕಠಿಣ ತರಬೇತಿ ಪಡೆದು ನಾಗರಿಕ ಪೊಲೀಸ್ ಅಧಿಕಾರಿಗಳಾಗಿ ಹೊರಹೊಮ್ಮಿದ ನಿರ್ಗಮಿತ ಪ್ರಶಿಕ್ಷಣಾರ್ಥಿಗಳೆಲ್ಲ ಸತ್ಯ, ಪ್ರಮಾಣಿಕತೆಯಿಂದ ಸ್ವಜಪಕ್ಷಪಾತ ರಹಿತ ಸೇವೆ ಕುರಿತು ಪಡೆಯಲಾದ ಪ್ರತಿಜ್ಞಾವಿಧಿಯಂತೆ ಮಾನವೀತೆಯೊಂದಿಗೆ ಸೇವೆ ಸಲ್ಲಿಸಬೇಕೆಂದು ಗೃಹ ಸಚಿವ ಎಂ.ಬಿ. ಪಾಟೀಲ ಸಲಹೆ ನೀಡಿದರು.
ಶನಿವಾರ ಇಲ್ಲಿನ ನಾಗನಹಳ್ಳಿ ಪೊಲೀಸ್ ತರಬೇತಿ ಮಹಾ ವಿದ್ಯಾಲಯದಲ್ಲಿ 8ನೇ ತಂಡದ 48 ಪಿಎಸ್ಐ (ನಾಗರಿಕ ಸಿವಿಲ್), ನಾಲ್ಕನೇ ತಂಡದ ಪಿಎಸ್ಐ (ನಿಸ್ತಂತು), ಒಂದನೇ ತಂಡದ ಪಿಎಸ್ಐ (ಸಿಐಡಿ/ ಕೆ.ಎಸ್ಐ.ಎಸ್.ಎಫ್/ ಗುಪ್ತವಾರ್ತೆ) ಸೇರಿದಂತೆ ಒಟ್ಟಾರೆ 267 ಪಿಎಸ್ಐ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದ ಮುಖ್ಯ ಅತಿಥಿಗಳಾಗಿ ಹಾಗೂ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಕುಟುಂಬದವರೆಲ್ಲರೂ ಕಷ್ಟಪಟ್ಟು ತಮ್ಮನ್ನು ಈ ಮಟ್ಟಕ್ಕೆ ತಂದಿದ್ದಾರೆ. ಆದ್ದರಿಂದ ಕುಟುಂಬದ ಜತೆಗೆ ಇಲಾಖೆಗೆ ದಕ್ಷತೆಯಿಂದ ಕಾರ್ಯನಿರ್ವಹಿಸಿ ಹೆಸರು ತರಲು ಸದಾ ಬದ್ಧವಾಗಿರಿ. ಯಾವುದೇ ಸಂದರ್ಭದಲ್ಲೂ ಕರ್ತವ್ಯಕ್ಕೆ ಚ್ಯುತಿ ಬಾರದಂತೆ ನಡೆದುಕೊಳ್ಳಿ. ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ರ ಪಾತ್ರವೇ ಬಹುಮುಖ್ಯ. ಸೇವೆ ಸಲ್ಲಿಸುವ ವೇಳೆ ಯಾವುದೇ ಕಷ್ಟ-ನಷ್ಟ ಎದುರಾದಲ್ಲಿ ತಮ್ಮೊಂದಿಗೆ ನಾನಿರುತ್ತೇನೆ ಎಂದು ಅಭಯ ನೀಡಿದರು.
ಪೊಲೀಸ್ ತರಬೇತಿ ಕೇಂದ್ರ ಹಾಗೂ ಶಾಲೆಗಳು ಇಲಾಖೆಗೆ ಹೃದಯವಿದ್ದಂತೆ. ತರಬೇತಿ ಸೂಕ್ತವಾಗಿ ಲಭಿಸಿದಲ್ಲಿ ಸೇವೆಗೆ ಬಲ ಬರುತ್ತದೆ. ಹೀಗಾಗಿ ತರಬೇತಿ ಬಲವರ್ಧನೆಗೆ ಮುಂದಾಗಲಾಗಿದೆ. ಈ ನಿಟ್ಟಿನಲ್ಲಿ ವರದಿ ಬಂದ ನಂತರ ದೃಢ ಹೆಜ್ಜೆ ಇಡಲಾಗುವುದು ಎಂದರು.
ನಾಗನಹಳ್ಳಿ ಪೊಲೀಸ್ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಸವಿತಾ ಹೂಗಾರ ಮಾತನಾಡಿ, 2003ರಲ್ಲಿ ನಾಗನಹಳ್ಳಿ ಪೊಲೀಸ್ ತರಬೇತಿ ಮಹಾವಿದ್ಯಾಲಯ ಪ್ರಾರಂಭವಾಗಿದ್ದು, ಇಲ್ಲಿಯ ವರೆಗೆ 1266 ಪಿಎಸ್ಐ, 4796 ಪೊಲೀಸ್ ಪೇದೆಗಳಿಗೆ ತರಬೇತಿ ನೀಡಲಾಗಿದೆ. ತರಬೇತಿಯಲ್ಲಿ ಎಲ್ಲ ಹಂತದ ಸಮರೋಭ್ಯಾಸ ನಡೆಸಲಾಗಿದೆ. ಅಲ್ಲದೇ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಉಪನ್ಯಾಸ ಕೊಡಿಸಲಾಗಿದೆ ಎಂದು ತಿಳಿಸಿದರು.
ಶಂಕ್ರಪ್ಪ ಕುಟುಂಬಕ್ಕೆ ಸಹಾಯ: ಪ್ರಶಿಕ್ಷಣಾರ್ಥಿಯಾಗಿ ಹೊರ ಹೊಮ್ಮಬೇಕಿದ್ದ ಸಮಯದಲ್ಲಿ ಇತ್ತೀಚೆಗೆ ಅಸಹಜ ಸಾವಿಗೀಡಾದ ಸೇಡಂ ತಾಲೂಕಿನ ಬೆನಕನಹಳ್ಳಿಯ ಬಸವರಾಜ ಶಂಕ್ರಪ್ಪ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಗೃಹ ಸಚಿವರು, ಕುಟುಂಬಕ್ಕೊಂದು ಕೆಲಸ ಹಾಗೂ ಆರ್ಥಿಕ ಸಹಾಯ ಕಲ್ಪಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದರು. ತದನಂತರ ಬಸವರಾಜ ಕುಟುಂಬ ವರ್ಗದವರೊಂದಿಗೆ ಮಾತನಾಡಿ ಸಾಂತ್ವನ ಹೇಳಿದರಲ್ಲದೇ ತಮ್ಮೊಂದಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿದ್ದಾರೆ ಎಂದು ಧೈರ್ಯ ತುಂಬಿದರು.
ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ, ಪೊಲೀಸ್ ಮಹಾನಿರ್ದೇಶಕ ಪದಮ್ಕುಮಾರ ಗರ್ಗ್, ಈಶಾನ್ಯ ವಲಯ ಐಜಿಪಿ ಮನೀಷ ಖರ್ಬಿಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಶಿಕುಮಾರ, ಹೆಚ್ಚುವರಿ ಎಸ್ಪಿ ಪ್ರಸನ್ನ ದೇಸಾಯಿ ಹಾಗೂ ಇತರರು ಇದ್ದರು. ಚಿತ್ತಾಪುರ ಸಿಪಿಐ ಪಿ.ಎಂ. ಸಾಲಿಮಠ, ಲಕ್ಷ್ಮೀ ನಿರೂಪಿಸಿದರು. ಪೊಲೀಸ್ ತರಬೇತಿ ಮಹಾ ವಿದ್ಯಾಲಯದ ಡಿವೈಎಸ್ಪಿ ಎಂ.ಎಂ. ಯಾದವಾಡ ವಂದಿಸಿದರು.
ಕುಸಿದು ಬಿದ್ದ ಪ್ರಶಿಕ್ಷಣಾರ್ಥಿಗಳು
ಬೆಳಗ್ಗೆ 8:30ಕ್ಕೆ ಪ್ರಶಿಕ್ಷಣಾರ್ಥಿಗಳ ಪಥ ಸಂಚಲನಕ್ಕೆ ಸಮಯ ನಿಗದಿಯಾಗಿತ್ತು. ಹೀಗಾಗಿ ಬೆಳಗ್ಗೆ 7:30ಕ್ಕೆ ಪ್ರಶಿಕ್ಷಣಾರ್ಥಿಗಳು ಪಥಸಂಚಲನ ಮೈದಾನಕ್ಕೆ ಬಂದು ಗೌರವ ವಂದನೆ ಸಲ್ಲಿಸಲು ತಯಾರಾಗಿದ್ದರು. ಆದರೆ ಗೃಹ ಸಚಿವ ಎಂ.ಬಿ. ಪಾಟೀಲ ಒಂದು ಗಂಟೆ ತಡವಾಗಿ ಆಗಮಿಸಿ ಗೌರವ ವಂದನೆ ಸ್ವೀಕರಿಸಿದರು. ತದನಂತರ ಭಾಷಣ ಮಾಡುವಾಗ ಸಮಯ 10 ಗಂಟೆಯಾಗಿತ್ತು. ಈ ಹೊತ್ತಿಗೆ ಬಿಸಿಲು ಜಾಸ್ತಿಯಾಗಿದ್ದರಿಂದ ಪ್ರಶಿಕ್ಷಣಾರ್ಥಿಗಳು ಒಬ್ಬೊಬ್ಬರಾಗಿ ಸುಸ್ತಾಗಿ ಕುಸಿಯಲಾರಂಭಿಸಿದರು. ಒಟ್ಟು ಐದು ಪ್ರಶಿಕ್ಷಣಾರ್ಥಿಗಳು ಕುಸಿದು ಬಿದ್ದಿರುವುದನ್ನು ಕಂಡ ಸಚಿವರು, ಕೂಡಲೇ ಪ್ರಾಥಮಿಕ ಚಿಕಿತ್ಸೆ ಕೊಡಿಸುವಂತೆ ಸೂಚಿಸಿದರು. ಪ್ರಶಿಕ್ಷಣಾರ್ಥಿಗಳು ಕುಸಿಯುತ್ತಿರುವ
ಬಂಧು-ಬಳಗದವರೂ ಭಾಗಿ ನಾಗನಹಳ್ಳಿ ಪೊಲೀಸ್ ತರಬೇತಿ ಮಹಾವಿದ್ಯಾಲಯದಲ್ಲಿ ಶನಿವಾರ ನಡೆದ 267 ವಿವಿಧ ಪಿಎಸ್ಐ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಪ್ರಶಿಕ್ಷಣಾರ್ಥಿಗಳ ಬಂಧು-ಬಳಗದವರು, ತಂದೆ-ತಾಯಿ, ಸಹೋದರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ