ಕೊನೇ ಭಾಗದ ರೈತರಿಗೆ ನೀರು ಕೊಡಿ


Team Udayavani, Feb 24, 2019, 7:22 AM IST

dvg-3.jpg

ಮಲೇಬೆನ್ನೂರು: ರೈತರು ಪ್ರತಿ ಬೆಳೆಗೂ ಪ್ರತಿಭಟನೆ ಮಾಡಿ ನೀರು ಪಡೆಯುವುದು ದುರದೃಷಕರವಾಗಿದ್ದು, ಕೊನೆಯ ಭಾಗದ ಜಮೀನುಗಳಿಗೆ ನೀರು ಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಪಂ ಸದಸ್ಯ ತೇಜಸ್ವಿ ಪಟೇಲ್‌ ಒತ್ತಾಯಿಸಿದರು.

ಪಟ್ಟಣದ ನೀರಾವರಿ ನಿಗಮದ ಕಚೇರಿ ಎದುರು ಕೊನೆಭಾಗದ ರೈತರು ತಮ್ಮ ಜಮೀನುಗಳಿಗೆ ನೀರು ನೀಡುವಂತೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೊನೆಯ ಭಾಗದ ಜಮೀನುಗಳಿಗೆ ನೀರು ಹರಿಸಬೇಕು. ಇದು ಸಾಧ್ಯವಾಗದಿದ್ದರೆ ಅಕ್ರಮ ಪಂಪ್‌ಸೆಟ್‌ದಾರರನ್ನೇ ಅಚ್ಚುಕಟ್ಟುದಾರರೆಂದು ಘೋಷಿಸಬೇಕು ಎಂದು ಒತ್ತಾಯಿಸಿದರು.

ನೀರು ಹರಿಯಲಿಲ್ಲ ಎಂದರೆ ಅದೂ ಸಹ ಬರ ಪ್ರದೇಶವೇ ಆಗಿರುತ್ತದೆ. ಆದ್ದರಿಂದ ಅಧಿಕಾರಿಗಳು ಯಾವ ಪ್ರದೇಶಗಳಿಗೆ ನೀರು ಹರಿಸಲು ಸಾಧ್ಯವಿಲ್ಲವೋ ಆ ಜಮೀನು ಮಾಲೀಕರಿಗೆ ವಿಮೆ ಕೊಡಬೇಕು ಎಂದರು.

ಅಕ್ರಮ ಮರುಳು ಇದೆಯೆಂದು ಗೊತ್ತಾದ ತಕ್ಷಣವೇ ಎಲ್ಲ ಅಧಿಕಾರಿಗಳೂ ಜಾಗೃತರಾಗುತ್ತಾರೆ. ಅದೇ ರೀತಿ ಅಕ್ರಮ ಪಂಪ್‌ಸೆಟ್‌ಗಳ ಬಗ್ಗೆ ಅಧಿಕಾರಿಗಳು ಯಾಕೆ ಜಾಗೃತಿ ವಹಿಸುವುದಿಲ್ಲ. ರೈತರು ಬೇರೆ ಬೇರೆ ಕಡೆ ಪ್ರತ್ಯೇಕವಾಗಿ ಹೋರಾಟ ಮಾಡುವುದು ಬೇಡ. ಅಕ್ರಮ ಪಂಪ್‌ಸೆಟ್‌ದಾರರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಮತ್ತು ಜಿಲ್ಲಾಡಳಿತದ ಗಮನ ಸೆಳೆಯಬೇಕಿದೆ. ಆದ್ದರಿಂದ ರೈತರು ಒಂದೆಡೆ ಒಗ್ಗಟ್ಟಾಗಿ ಹೋರಾಟ ಮಾಡಬೇಕು ಎಂದು ಕರೆ ನೀಡಿದರು.

ಪ್ರತಿ ವರ್ಷವೂ ಪಂಪ್‌ಸೆಟ್‌ ಕಾರ್ಯಾಚರಣೆ ನಡೆಯುತ್ತಿದರೂ ಅದೇ ವೇಗದಲ್ಲಿ ಅಕ್ರಮ ಪಂಪ್‌ಸೆಟ್‌ಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಕಾರ್ಯಾಚರಣೆಯಿಂದ ಪಂಪ್‌ಸೆಟ್‌ ತೆಗೆದು ಹಾಕುತ್ತಾ ಮುಂದು ಹೋದಂತೆಲ್ಲ ಹಿಂದಿನಿಂದ ಪುನಃ ಅಳವಡಿಸಿಕೊಳ್ಳುತ್ತಿದ್ದಾರೆ. ಈ ಕಾರ್ಯಾಚರಣೆಯ ಬಗ್ಗೆ ಯಾರಿಗೂ ಭಯವೇ ಇಲ್ಲವಾಗಿದೆ ಎಂದರು. ಕಾಲುವೆಗಳಲ್ಲಿನ ಹೂಳು, ಗಿಡಗಂಟಿ, ಅಕ್ರಮ ಪಂಪ್‌ಸೆಟ್‌ ತೆಗೆಸುವುದು ಎಲ್ಲ ಕೆಲಸಗಳನ್ನೂ ನಾಟಿ ಆರಂಭಿಸಿದ ಮೇಲೆ ಏಕೆ ಮಾಡಬೇಕು. ಮೊದಲೇ ಆರಂಭಿಸಬಹುದಲ್ಲವೇ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಪ್ರತಿಭಾರಿಯೂ ಹೋರಾಟ ಮಾಡಿ ನೀರನ್ನು ಪಡೆಯುವ ವ್ಯವಸ್ಥೆಯನ್ನು ನಾವು ಒಪ್ಪಬಾರದು. ಅದರ ಬದಲಿಗಾಗಿ ನೀರು ತರಲಿಕ್ಕೆ ಏನು ಮಾಡಬೇಕು ಅನ್ನುವ ಕುರಿತು ಯೋಚಿಸಬೇಕು. ರೈತರು ಲಾಭದಾಯಕ ಪರ್ಯಾಯ ಬೆಳೆಯ ಬಗ್ಗೆಯೂ ಚಿಂತಿಸಬೇಕು ಎಂದರು.

ನಾವು ಕಷ್ಟಪಟ್ಟು ದುಡಿದು ರಸಗೊಬ್ಬರ ಮತ್ತು ಬೇಸಾಯ ಪರಿಕರ ಅಂಗಡಿಗಳ ಮಾಲೀಕರನ್ನು ಉದ್ಧಾರ ಮಾಡುತ್ತಿದ್ದೇವೆ. ಅದರ ಬದಲಿಗೆ ನಮಗೆ ಲಾಭ ತರುವಂತಹ ಬೆಳೆಯ ಬಗ್ಗೆ ಯೋಚನೆ ಮಾಡಬೇಕು ಎಂದರು.

ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಎಚ್‌. ಓಂಕಾರಪ್ಪ ಮಾತನಾಡಿ, ಜನಪ್ರತಿನಿಧಿಗಳು ಚುನಾವಣೆಗೂ ಮುನ್ನಾ ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುತ್ತಾರೆ. ಚುನಾವಣೆಯಲ್ಲಿ ಗೆದ್ದ ನಂತರ ರೆಸಾರ್ಟ್‌ ಮಕ್ಕಳಾಗಿಬಿಡುತ್ತಾರೆ ಎಂದು ಹಾಸ್ಯದ ಮೂಲಕ ಶಾಸಕರಿಗೆ ರೈತರನ್ನು ಕಡೆಗಣಿಸದಂತೆ ಪರೋಕ್ಷವಾಗಿ ಎಚ್ಚರಿಸಿದರು. 

ಭಾನುವಾರ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಸೋಮವಾರ ದಿನದಿಂದ ಮುಷ್ಕರವು ಉಗ್ರ ಹೋರಾಟವಾಗಿ ರೂಪುಗೊಳ್ಳುವುದು ಎಂದು ತಿಳಿಸಿದರು.

ಜಿಲ್ಲಾ ಕಾರ್ಯದರ್ಶಿ ಪ್ರಭುಗೌಡ, ಎಂ.ಎಸ್‌. ಕಾಳಪ್ಪ, ಧರ್ಮಗೌಡ, ದೊಗ್ಗಳ್ಳಿ ಮಹೇಶ್ವರಪ್ಪ, ಕೆ.ಜಿ. ವೀರಭದ್ರಪ್ಪ, ಸಿದ್ದನಗೌಡ, ಎಂ. ಬಸಪ್ಪ, ನಾಗರಾಜ, ರಾಜಶೇಖರ, ಬಿ. ತಿಪ್ಪೇಶ್‌, ಕೆ.ಎನ್‌. ಹಳ್ಳಿ, ಭಾನುವಳ್ಳಿ, ವಾಸನ, ಕೊಕ್ಕನೂರು ಮುಂತಾದ ಕೊನೆಭಾಗದ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.