ವಾಸವದತಾ ವಿರುದ್ಧ ದೂರು


Team Udayavani, Feb 24, 2019, 8:31 AM IST

gul-5.jpg

ಸೇಡಂ: ಮನೆಗೊಂದು ನೌಕರಿ ಕೊಡುವುದಾಗಿ ಭರವಸೆ ನೀಡಿದ್ದ ವಾಸವದತ್ತಾ ಕಾರ್ಖಾನೆ ಮಾತಿಗೆ ತಪ್ಪಿದ ಕಾರಣ ಇಂಜೆಪಲ್ಲಿ ಗ್ರಾಮಸ್ಥರು ತಹಶೀಲ್ದಾರ್‌ ಸುಬ್ಬಣ್ಣ ಜಮಖಂಡಿ ಅವರಿಗೆ ದೂರು ಸಲ್ಲಿಸಿದ್ದಾರೆ.

2006-07ರಲ್ಲಿ ವಾಸವದತ್ತಾ ಸಿಮೆಂಟ್‌ ಕಾರ್ಖಾನೆಗೆ ಹೊಂದಿಕೊಂಡಿರುವ ಇಂಜೆಪಲ್ಲಿ ಗ್ರಾಮ ತೆರವುಗೊಳಿಸುವಂತೆ ಕಾರ್ಖಾನೆ ಆಡಳಿತ ಮಂಡಳಿ ಸೂಚಿಸಿತ್ತು. ಅಲ್ಲದೇ ಕುರಕುಂಟಾ ಕ್ರಾಸ್‌ ಬಳಿ ಹೊಸ ಮನೆ ನಿರ್ಮಿಸಿಕೊಡುವ ಮತ್ತು ಮನೆಗೊಂದು ನೌಕರಿ ನೀಡುವ ಭರವಸೆ ನೀಡಿತ್ತು. 

ಆದರೆ 170 ಮನೆಗಳ ಪೈಕಿ ಕೇವಲ 60 ಮನೆಗಳನ್ನು ನಿರ್ಮಿಸಿರುವ ಕಾರ್ಖಾನೆ ಮಂಡಳಿ, ಬಡ ಜನರ ಮೇಲೆ ದಬ್ಟಾಳಿಕೆ ನಡೆಸುತ್ತಿದೆ. ಅತ್ತ ಹೊಸ ಸೂರಿಗೂ ಸೇರಲಾಗದೆ, ಇತ್ತ ಇರುವ ಮನೆಗಳನ್ನು ರಕ್ಷಿಸಿಕೊಳ್ಳಲಾಗದೆ ಪರದಾಡುವಂತಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿನಿತ್ಯ ವಾಸವದತ್ತಾ ಸಿಮೆಂಟ್‌ ಕಾರ್ಖಾನೆ ನಡೆಸುವ ಬ್ಲಾಸ್ಟಿಂಗ್‌ನಿಂದ ಮನೆಗಳು ಬಿರುಕು ಬಿಡುತ್ತಿವೆ. ಮಕ್ಕಳು ಶಾಲೆಗಳಿಗೆ ತೆರಳಲು ಹೆದರುತ್ತಿದ್ದಾರೆ. ಮನೆಯಿಂದ ಹೊರಬರಬೇಕಾದರೆ ಜೀವ ಕೈಯಲ್ಲಿಟ್ಟುಕೊಂಡು ತಿರುಗಾಡುವ ಪರಿಸ್ಥಿತಿ ಇದೆ. ಅಲ್ಲದೇ ಸ್ಥಳೀಯ ಕನ್ನಡಿಗರಿಗೆ ನೌಕರಿ ನೀಡುವ ಬದಲು ಬೇರೆ ರಾಜ್ಯದವರಿಗೆ ನೌಕರಿ ನೀಡಿ, ಸ್ಥಳೀಯರಿಗೆ ಅನ್ಯಾಯ ಮಾಡುತ್ತಿದೆ ಎಂದು ದೂರಿದ್ದಾರೆ.

15 ದಿನಗಳ ಒಳಗಾಗಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ಇಲ್ಲದಿದ್ದಲ್ಲಿ ಕಾರ್ಖಾನೆಗೆ ಬೀಗ ಜಡಿದು ಪ್ರತಿಭಟಿಸಲಾಗುವುದು. ನಿರಂತರ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ವೀರ ಕನ್ನಡಿಗರ ಸೇನೆ ಕಾರ್ಯಕರ್ತರು ಮತ್ತು ಇಂಜೇಪಲ್ಲಿ ಗ್ರಾಮಸ್ಥರು ಎಚ್ಚರಿಸಿದ್ದಾರೆ. 

ವೀರ ಕನ್ನಡಿಗರ ಸೇನೆ ರಾಜ್ಯಾಧ್ಯಕ್ಷ ಅಮೃತರಾವ್‌ ಪಾಟೀಲ ಸಿರನೂರ, ರಾಜ್ಯ ಉಪಾಧ್ಯಕ್ಷ ರವಿ ಒಂಟಿ, ಭೀಮಶಾ ಇಂಜಳ್ಳಿ, ಅರ್ಜುನ ಇಂಜಳ್ಳಿ, ಲಕ್ಷ್ಮಣ ತಳವಾರ, ಸಾಯಪ್ಪ ನಾಡೇಪಲ್ಲಿ, ಕಾಶಪ್ಪ ತಳವಾರ, ಗುಡಸಾಬ ಮುಲ್ಲಾ, ನಾಗರಾಜ ಸಜ್ಜನ್‌, ಶಿವಪ್ಪ ತಳವಾರ, ಅರ್ಜುನ ಇಂಜಳ್ಳಿ, ದ್ಯಾವಮ್ಮ ಇಂಜಳ್ಳಿ, ನರಸಮ್ಮ ಆಡಕಿ, ರಾಜಮ್ಮ ಇಂಜಳ್ಳಿ, ಸಿದ್ರಾಮಪ್ಪ ಪಾಟೀಲ, ಹಣಮಂತ ಇಂಜಳ್ಳಿ, ವಿಠ್ಠಲ ಇಂಜಳ್ಳಿ, ಸುಧೀರ ಇಂಜಳ್ಳಿ, ಅಶೋಕ ಇಂಜಳ್ಳಿ, ಇಮಾಮಸಾಬ, ಸುಕ್ರಮಿಯಾ, ಶಾಮಪ್ಪ, ಪರಶುರಾಮ, ಬಸವಣ್ಣ ದಿಗ್ಗಾವಿ, ನಾಗಪ್ಪ ರಂಜೋಳ, ಚಂದಪ್ಪ, ಶರಣಪ್ಪ, ಅಂಜಲಮ್ಮ, ಕಲ್ಲಪ್ಪ ಮಾಡೆನೂರ, ದೇವಿಂದ್ರಪ್ಪ ಡೋಣಗಾಂವ್‌, ಭರತ ಭೂಷಣ, ರಿಷಿ ವಾಡೇಕರ್‌, ಶಿವಕುಮಾರ ದೇವರಮನಿ ಮತ್ತಿತರರು ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.