ಜಿಪಂ ಅಧ್ಯಕ್ಷರು ಗಟ್ಟಿ ನಿರ್ಧಾರ ತೆಗೆದುಕೊಳ್ಳಲಿ: ಪಾಟೀಲ


Team Udayavani, Feb 24, 2019, 11:37 AM IST

bell-1.jpg

ಹೊಸಪೇಟೆ: ಕಾನೂನಾತ್ಮಕವಾಗಿ ದೊರೆತ ಅವಕಾಶ, ಜವಾಬ್ದಾರಿಯನ್ನು ಜಿಪಂ ಅಧ್ಯಕ್ಷರು ಹಿಂದು-ಮುಂದು ನೋಡದೇ ಚಲಾಯಿಸಬೇಕು ಎಂದು ಮಾಜಿ ಶಾಸಕ ಡಿ.ಆರ್‌.ಪಾಟೀಲ ಕಿವಿ ಮಾತು ಹೇಳಿದರು.

ಕನ್ನಡ ವಿಶ್ವವಿದ್ಯಾಲಯ ಅಭಿವೃದ್ಧಿ ಅಧ್ಯಯನ ವಿಭಾಗ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಅಬ್ದುಲ್‌ ನಜೀರ್‌ಸಾಬ್‌ ರಾಷ್ಟ್ರೀಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಹಯೋಗದಲ್ಲಿ ಜಿಪಂ ಅಧ್ಯಕ್ಷರ ಮೂರು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಶನಿವಾರ ಚಾಲನೆ ನೀಡಿ
ಮಾತನಾಡಿದರು.

ಕಾನೂನಾತ್ಮಕವಾಗಿ ದೊರೆತ ಅವಕಾಶ, ಜವಾಬ್ದಾರಿಯನ್ನು ಚಲಾಯಿಸಲು ಜಿಪಂ ಅಧ್ಯಕ್ಷರು ಹಿಂದು-ಮುಂದು ನೋಡದೇ ದೃಢ ನಿರ್ಧಾರ ತೆಗೆದುಕೊಳ್ಳಬೇಕು.

ಕಾನೂನಿನ ಪ್ರಕಾರ ಜಿಲ್ಲಾ, ತಾಲೂಕು, ಗ್ರಾಮ ಪಂಚಾಯತ್‌ ಹಾಗೂ ಗ್ರಾಮ ಸಭೆಗಳು ತಮ್ಮ ಪಾತ್ರ ನಿರ್ವಹಿಸುವ ಅಧಿಕಾರ ಚಲಾಯಿಸುವ ಸುವ್ಯವಸ್ಥೆ ತರುವ ಪ್ರಯತ್ನ ಮಾಡದಿದ್ದರೆ ವ್ಯವಸ್ಥೆ ಬದಲಾಯಿಸಲು ಸಾಧ್ಯವಾಗುವುದಿಲ್ಲ. ಜಿಪಂ ಅಧ್ಯಕ್ಷರು ಆತ್ಮವಿಶ್ವಾಸ ಹೊಂದುವ ಮೂಲಕ ಗಟ್ಟಿಯಾಗಬೇಕು ಎಂದು ಸಲಹೆ ನೀಡಿದರು.

1962ರಲ್ಲಿ ಜವಾಹರ್‌ಲಾಲ್‌ ನೆಹರು ಅವರಿಂದ ಚಾಲನೆ ಗೊಂಡ ಕರ್ನಾಟಕ ಪಂಚಾಯತ್‌ ಪರಿಷತ್‌ ಬೆಂಗಳೂರು ಗ್ರಾಮಾಂತರ ಜಿಪಂ ಮಾಜಿ ಅಧ್ಯಕ್ಷ ಸಿ. ನಾರಾಯಣಸ್ವಾಮಿ ಮಾತನಾಡಿ, 73-74ನೇ ಸಂವಿಧಾನ ತಿದ್ದುಪಡಿ ಮೂಲಕ ಜಾರಿಗೆ ಬಂದ ಪಂಚಾಯತ್‌ರಾಜ್‌ ಕರ್ನಾಟಕದಲ್ಲಿ ವಿಶಿಷ್ಟವಾಗಿ ಬೆಳವಣಿಗೆಯಾಗಿದೆ. ರಾಷ್ಟ್ರದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ರಾಜ್ಯ ಪಂಚಾಯತ್‌ ರಾಜ್‌ ಕಾಯ್ದೆಯಲ್ಲಿ ಅತ್ಯುತ್ತಮ ಅಂಶಗಳಿವೆ ಎಂದು ಅಭಿಪ್ರಾಯಪಟ್ಟರು.

ಡಾ. ಸ.ಚಿ.ರಮೇಶ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ವಿಶ್ವವಿದ್ಯಾಲಯದ ಪ್ರತಿಯೊಂದು ಕಾರ್ಯಕ್ರಮಗಳು ಜನಸಾಮಾನ್ಯರನ್ನು ತಲುಪಬೇಕು. ಪ್ರಜಾಪ್ರಭುತ್ವದ ಆಳ, ಗಟ್ಟಿತನ ಇರುವುದು ಸ್ಥಳೀಯ ವ್ಯವಸ್ಥೆಯಲ್ಲಿ. ಸ್ಥಳೀಯ ವ್ಯವಸ್ಥೆಯನ್ನು ಗೌರವಿಸಿ ಎಡರು, ತೊಡರುಗಳನ್ನು
ಸರಿಪಡಿಸಿಕೊಂಡರೆ ಒಳ್ಳೆಯ ಆಡಳಿತ ಹೊಂದಲು ಸಾಧ್ಯ ಎಂದರು.

ಕುಲಸಚಿವರಾದ ಡಾ. ಅಶೋಕಕುಮಾರ ರಂಜೇರೆ ಇದ್ದರು. ಅಭಿವೃದ್ಧಿ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಜನಾರ್ದನ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಾಯಕ ಪ್ರಾಧ್ಯಾಪಕ ಡಾ. ಗೀತಮ್ಮ ನಿರೂಪಿಸಿದರು. ಡಾ. ಗೋವರ್ಧನ ವಂದಿಸಿದರು.

ಮೂರು ಹಂತದ ಪಂಚಾಯತ್‌ಗಳ ಪರವಾಗಿ ಕಾರ್ಯನಿರ್ವಹಿಸಲು ತಯಾರಿದ್ದರೂ ಸರ್ಕಾರದಿಂದ ಹಣಕಾಸಿನ ನೆರವು ದೊರೆತಿಲ್ಲ. ಸರಿಯಾದ ಪಂಚಾಯತ್‌ರಾಜ್‌ ವ್ಯವಸ್ಥೆ ಅಸ್ತಿತ್ವಕ್ಕೆ ಬಂದರೆ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ. ಗ್ರಾಮ ಮಟ್ಟದಲ್ಲಿ ಗ್ರಾಮ ಸಭೆಗಳಂತೆ ನಗರ ಪ್ರದೇಶಗಳಲ್ಲಿ ವಾರ್ಡ್‌ ಸಭೆಗಳು ಅಸ್ತಿತ್ವಕ್ಕೆ ಬಂದರೆ ಅನೇಕ ಅನುಕೂಲಗಳಾಗುತ್ತದೆ. ಸಂವಿಧಾನದಲ್ಲಿರುವ ನಿಯಮಗಳಂತೆ ಕೆಲಸಗಳಾಗುತ್ತಿಲ್ಲ. ಗ್ರಾಮ ಸಭೆಗಳನ್ನು ಸಬಲೀಕರಣಗೊಳಿಸಬೇಕಾಗಿದೆ.
 ಡಿ.ಆರ್‌. ಪಾಟೀಲ, ಮಾಜಿ ಶಾಸಕರು

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.