ಪ್ರತಿ ಜಿಪಂ ಕ್ಷೇತ್ರಕ್ಕೆ 25 ಲಕ್ಕ ಅನುದಾನ


Team Udayavani, Feb 25, 2019, 5:35 AM IST

gul-4.jpg

ಚಿತ್ತಾಪುರ: ಜಿಲ್ಲೆಯಲ್ಲಿ 1972ಕ್ಕಿಂತಲೂ ಭೀಕರ ಬರಗಾಲ ಎದುರಾಗಿದ್ದು, ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು ಎಂದು ಈಗಾಗಲೇ ಪ್ರತಿ ಜಿಪಂಗೆ 25 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ತಾಲೂಕಿನ ಅಶೋಕ ನಗರ ಮತ್ತು ಇಂಗನಕಲ್‌ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ನೆರವೇರಿಸಿ ಮಾತನಾಡಿದ ಅವರು, ನೀರಿನ ಸಮಸ್ಯೆ ಎಲ್ಲಿ ಇದೆ ಎನ್ನುವುದನ್ನು ತಿಳಿದು ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕ್ರಿಯಾ ಯೋಜನೆ ಸಿದ್ಧಪಡಿಸಿ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದರು.

ಮೋದಿ ಸರ್ಕಾರ ರೈತರ, ಕಾರ್ಮಿಕರ, ನಿರೋದ್ಯೊಗಿಗಳ, ಬಡವರ ಪರ ಇಲ್ಲ. ಈ ಸರ್ಕಾರ ಅಂಬಾನಿ, ಅದಾನಿ ಪರವಾಗಿದೆ. ರಾಜ್ಯದ ರೈತರು ಭೀಕರ ಬರಗಾಲದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕೂಡಲೇ ರೈತರ ನೆರವಿಗೆ ಬನ್ನಿ ಎಂದರೆ ಬರೋದಿಲ್ಲ. ಆದರೆ ಅಂಬಾನಿ, ಅದಾನಿ ಸಮಸ್ಯೆಯಲ್ಲಿದ್ದಾರೆ ಎಂದರೆ ಕೂಡಲೇ ಸಮಸ್ಯೆ ಬಗೆಹರಿಸಲು ಹೋಗುತ್ತಾರೆ. ಇಂತಹ ಕೆಟ್ಟ ಸರ್ಕಾರ ನಮಗೆ ಬೇಕೇ ಎನ್ನುವುದನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು.

ರಾಜ್ಯದಲ್ಲಿ ಸ್ಥಿರ ಸರ್ಕಾರ ನೀಡಲು ಸಮ್ಮಿಶ್ರ ಸರ್ಕಾರ ಬದ್ಧವಾಗಿದೆ. ಬಿಜೆಪಿಯವರು ಆಪರೇಷನ್‌ ಕಮಲ ಮೂಲಕ ಕುದುರೆ ವ್ಯಾಪಾರಕ್ಕೆ ಮುಂದಾಗಿದ್ದು, ರಾಜ್ಯದಲ್ಲಿ ಸ್ಥಿರ ಸರ್ಕಾರ ನಡೆಸಲು ಸಮ್ಮಿಶ್ರ ಸರ್ಕಾರಕ್ಕೆ ಬಿಜೆಪಿಯವರು ತೊಂದರೆ ನೀಡುತ್ತಿದ್ದಾರೆ.  ಇಂಗನಕಲ್‌-ತೆಂಗಳಿ ರಸ್ತೆ ಕಾಮಗಾರಿ ಕೈಗೊಳ್ಳಲು ಗ್ರಾಮಸ್ಥರ ಬಹಳ ದಿನಗಳ ಕನಸು ಈಗ ನನಸಾಗಿದೆ. ರಾಜ್ಯದಲ್ಲಿ ಪ್ರಬುದ್ಧ ಸಮಾಜ ನಿರ್ಮಾಣಕ್ಕೆ ಜನರ
ಸಹಕಾರ ಅಗತ್ಯ ಎಂದು ಹೇಳಿದರು. ಜಿಪಂ ಮಾಜಿ ಸದಸ್ಯ ಶಂಭುಲಿಂಗ ಗುಂಡಗುರ್ತಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ಸಾಲಿ, ಗ್ರಾಪಂ ಮಾಜಿ ಅಧ್ಯಕ್ಷ ಮಲ್ಲಪ್ಪ ಹೊಸ್ಮನಿ ಇಂಗನಕಲ್‌, ಮುಖಂಡ ಪ್ರಭು ಮಂಗಲಗಿ ಮಾತನಾಡಿದರು.

ಗ್ರಾಪಂ ಅಧ್ಯಕ್ಷ ರೋಹಿತ ಗಂಜಗಿರಿ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯ ಶಿವರುದ್ರ ಭೀಣಿ, ತಾಪಂ ಅಧ್ಯಕ್ಷ ಜಗಣ್ಣದೇವರೆಡ್ಡಿ ಪಾಟೀಲ, ಎಪಿಎಂಸಿ ಸದಸ್ಯ ಮನ್ಸೂರ್‌ ಪಟೇಲ್‌ ತೊಂಚಿ, ಪ್ರಚಾರ ಸಮಿತಿ ಅಧ್ಯಕ್ಷ ಜಯಪ್ರಕಾಶ ಕಮಕನೂರ ಮುಖಂಡರಾದ ಮಾಪಣ್ಣ ಗಂಜಗೇರಿ, ಬಸವರಾಜ ಹೊಸಳ್ಳಿ, ಸುನೀಲ ದೊಡ್ಮನಿ, ಣಮಂತ ಸಂಕನೂರ, ಶರಣು ಡೋಣಗಾಂವ, ನಾಗರಾಜ ಸಜ್ಜನ್‌, ವಿನ್ನುಕುಮಾರ ಜೆ.ಡಿ, ತಿಮ್ಮು ಬೋವಿ, ರುಕುಮಷಾ ದುಕಾನದಾರ, ಈರಣ್ಣ ದಂಡೋತಿ, ಸಿದ್ದಣ್ಣ ಮಗಿ, ಮಲ್ಲಕಪ್ಪ ತೆಂಗಳಿ, ಭೀಮರಾಯ ಕದ್ದರಗಿ, ಅನಿಲ ಇಂಗನ್‌ ಹಾಗೂ ಮತ್ತಿತರರು ಇದ್ದರು. 

ಮೋದಿ ಭಾಷಣ ಕೇಳಿ ಮರುಳಾಗಬೇಡಿ ಶಿಕ್ಷಣಕ್ಕಾಗಿ ಮೀಸಲಿಟ್ಟ ಶೇ.56ರಷ್ಟು ಹಣವನ್ನು ಮೋದಿ ಜಾಹಿರಾತಿಗೆ ಬಳಸಿದ್ದಾರೆ. ಅವರು ಬಾಯಿ ತೆರೆದರೆ ಸಾಕು ಸುಳ್ಳುಗಳ ಸರಮಾಲೆಯನ್ನೇ ಹೋರಹಾಕುತ್ತಾರೆ. ಕಳೆದ ಐದು ವರ್ಷದಿಂದ ಸುಳ್ಳು ಭಾಷಣಗಳಿಂದ ಜನರನ್ನು ಮೋಡಿ ಮಾಡಿ ದಾರಿ ತಪ್ಪಿಸುವ ಕೆಲಸ ಮಾಡಿ ಅಧಿ ಕಾರ ಚಲಾಯಿಸಿದ್ದಾರೆ. ಇದೀಗ ಮತ್ತೆ ಚುನಾವಣೆ ಬರುತ್ತಿದೆ. ಮತ್ತೇ ಸುಳ್ಳಿನ ಪ್ರಚಾರ ಮಾಡಲು ಆಗಮಿಸುತ್ತಾರೆ. ಅವರ ಸುಳ್ಳಿನ ಮಾತಿಗೆ ಮರುಳಾಗದೇ ಜಾಗೃತೆಯಿಂದ ಇರಿ.
 ಪ್ರಿಯಾಂಕ್‌ ಖರ್ಗೆ, ಸಚಿವ

ಟಾಪ್ ನ್ಯೂಸ್

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.