ಉಗ್ರಗಾಮಿಗಳ ಹುಟ್ಟಡಗಿಸಲು ಸನ್ನದ್ಧರಾಗಿ


Team Udayavani, Feb 25, 2019, 7:29 AM IST

ugraga.jpg

ದೇವನಹಳ್ಳಿ: ದೇಶದಲ್ಲಿ ತಾಂಡವವಾಡುತ್ತಿರುವ ಭಯೋತ್ಪಾದನೆ ಮತ್ತು ಉಗ್ರಗಾಮಿತ್ವವನ್ನು ಬುಡ ಸಮೇತ ಕಿತ್ತು ಹಾಕಬೇಕು. ಈ ನಿಟ್ಟಿನಲ್ಲಿ ಪ್ರತಿ ಯುವಕರು ಸೈನಿಕರಾಗಬೇಕೆಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಜಂಟಿ ನಿದೇಶಕ ಡಾ.ರಮೇಶ್‌ ಬಾಬು ಸಲಹೆ ನೀಡಿದರು.

ನಗರದ ವಿಜಯಪುರ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಸರ್ಕಾರಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆದ ರಾಷ್ಟ್ರೀಯ ಭಾವೈಕ್ಯತೆ ಶಿಬಿರದ ಮುಕ್ತಾಯ ಸಮಾರಂಭವನ್ನು ಗಿಡಕ್ಕೆ ನೀರುಣಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.  

ಯುವಕ, ಯುವತಿಯರು ಸೈನ್ಯಕ್ಕೆ ಸೇರಬೇಕು. ಭಯೋತ್ಪಾದನೆ ನಿರ್ಮೂಲನೆ ಮಾಡುವಲ್ಲಿ ಯುವಕರ ಪಾತ್ರ ಹೆಚ್ಚಾಗಿದೆ. ಬೇರೆ ರಾಜ್ಯಗಳೊಂದಿಗೆ ಭಾಷೆ, ನೆಲ, ಜಲದ ಬಗ್ಗೆ ಜಗಳವಾಡಿದರೆ ಸಮಸ್ಯೆ ಬಗೆಹರಿಯುವುದಿಲ್ಲ. ರಾಷ್ಟ್ರೀಯ ಭಾವೈಕ್ಯತೆಯಿಂದ ಹೋದಾಗ ಸಮಸ್ಯೆ ಇತ್ಯರ್ಥವಾಗುತ್ತದೆ. ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ತಿಳಿಸಿದರು.  

ಅಭಿವೃದ್ಧಿಗೆ ಭಾವೈಕ್ಯತೆ ಮುಖ್ಯ: ರಾಷ್ಟ್ರೀಯ ಮಟ್ಟದಲ್ಲಿ ಭಾವೈಕ್ಯತಾ ಶಿಬಿರ‌ವನ್ನು ದೇವನಹಳ್ಳಿಯಲ್ಲಿ ಮಾಡುತ್ತಿರುವುದು ಉತ್ತಮ ಕಾರ್ಯವಾಗಿದೆ. ದೇಶದ ಅಭಿವೃದ್ಧಿಗೆ ಭಾವೈಕ್ಯತೆ ಮುಖ್ಯ. ಸ್ವಾತಂತ್ರಕ್ಕಾಗಿ ಸಾಕಷ್ಟು ಮಹನೀಯರು ಹೋರಾಟ ಮಾಡಿದ್ದಾರೆ. ಹಲವಾರು ಜನರ ತ್ಯಾಗ ಹಾಗೂ ಶಾಂತಿ ಮಂತ್ರದಿಂದ ಸ್ವಾತಂತ್ರ ಪಡೆಯಲು ಸಾಧ್ಯವಾಗಿದೆ. ಪ್ರತಿ ವಿದ್ಯಾರ್ಥಿಯಲ್ಲಿ ಇಂತಹ ಶಿಬಿರಗಳು ಜೀವನದ ದಿಕ್ಕನ್ನು ಬದಲಾಯಿಸುತ್ತವೆ. ರಾಷ್ಟ್ರಧ್ವಜದ ಮಹತ್ವ ಹಾಗೂ ಶಿಸ್ತು, ಸಂಯಮದ ವ್ಯಕ್ತಿತ್ವವನ್ನು ರಾಷ್ಟ್ರೀಯ ಭಾವೈಕ್ಯತೆ ಬೆಳೆಸುತ್ತದೆ. ರಾಷ್ಟ್ರೀಯ ಸೇವಾ ಯೋಜನೆಯನ್ನು ಪ್ರೌಢಶಾಲಾ ಹಂತದಲ್ಲೂ ವಿಸ್ತರಿಸಲಾಗಿದೆ ಎಂದು ಹೇಳಿದರು.  

ಹೆಚ್ಚಿನ ಜ್ಞಾನಾರ್ಜನೆ ಮಾಡಿಕೊಳ್ಳಿ: ರಾಜ್ಯ ಎನ್‌ಎಸ್‌ಎಸ್‌ ಸಂಯೋಜಕ ಡಾ.ಆರ್‌.ಶ್ರೀನಿವಾಸ್‌ ಮಾತನಾಡಿ, ಯುವ ಶಕ್ತಿ ಮನಸ್ಸು ಮಾಡಿದರೆ ಏನನ್ನಾದರೂ ಬದಲಾವಣೆ ತರಲು ಸಾಧ್ಯವಾಗುತ್ತದೆ. ಎನ್‌ಎಸ್‌ಎಸ್‌ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಕೇವಲ ಅಂಕ ಮತ್ತು ಪ್ರಮಾಣ ಪತ್ರಗಳಿಗೆ ಕಾಟಾಚಾರಕ್ಕೆ ಭಾಗವಹಿಸಿದರೆ ಸಾಲದು. ರಾಷ್ಟ್ರೀಯ ಭಾವೈಕ್ಯತೆ ಬಗ್ಗೆ ಎಲ್ಲೆಡೆ ಅರಿವು ಮೂಡಿಸುವ ಕಾರ್ಯವಾಗಬೇಕು. ಹೆಚ್ಚಿನ ಜ್ಞಾನಾರ್ಜನೆ ಮಾಡಿಕೊಳ್ಳಬೇಕು ಎಂದರು.  

ಪರಿಸರ ಉಳಿದರೆ ಮಾತ್ರ ಉಳಿಗಾಲ: ಬಾಲ ಗಂಗಾಧರನಾಥ್‌ ಸ್ವಾಮೀಜಿ ನೇತೃತ್ವದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಒಂದು ಲಕ್ಷ ಸಸಿಗಳನ್ನು ನೆಡಲಾಗಿತ್ತು. ಪರಿಸರದ ಮಹತ್ವ ಪ್ರತಿಯೊಬ್ಬರು ತಿಳಿಯಬೇಕು. ಪರಿಸರ ಉಳಿದರೆ ಮಾತ್ರ ನಾವೂ ಉಳಿಯಲು ಸಾಧ್ಯ. ಫ್ಲಾಸ್ಟಿಕ್‌ನ್ನು ಬಳಸುವ ಮೊದಲು ವಿ ಧ್ಯಾರ್ಥಿಗಳು ಚಿಂತಿಸಬೇಕು. ಇದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿಯಬೇಕು. ಫ್ಲಾಸ್ಟಿಕ್‌ ಭೂಮಿಯ ಒಳ ಭಾಗಕ್ಕೆ ಹೋದರೆ ಅಂತರ್ಜಲ ಕುಸಿತ, ಪ್ರಾಣಿಗಳು ತಿಂದರೆ ಆರೋಗ್ಯ ಕೆಡುತ್ತದೆ. ಫ್ಲಾಸ್ಟಿಕ್‌ ಬಳಕೆಯಿಂದ ಅಂದ, ಚಂದವೂ ಕೆಡುತ್ತದೆ ಎಂದರು.  

ಸೇವಾ ಮನೋಭಾವ ಅಗತ್ಯ: ಇಡೀ ದೇಶದಲ್ಲಿಯೇ ರಾಷ್ಟ್ರೀಯ ಸೇವಾ ಭವನ ಬೆಂಗಳೂರಿನಲ್ಲಿ ಮಾತ್ರ ಇದೆ. ವಿದ್ಯಾರ್ಥಿಗಳಲ್ಲಿರುವ ಉತ್ತಮ ಪ್ರತಿಭೆ ಹೊರಹಾಕಲು ಯೋಜನೆ ಸೂಕ್ತ ವೇದಿಕೆಯಾಗಿದೆ. ಸೇವಾ ಮನೋಭಾವನೆಯನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕೆಂದು ಹೇಳಿದರು.  

ಈ ವೇಳೆ ರಾಜ್ಯ ಎನ್‌ಎಸ್‌ಎಸ್‌ ಯೋಜನಾಧಿಕಾರಿ ಪೂರ್ಣಿಮಾ ಜೋಗಿ, ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಕೆ.ಎಸ್‌.ಶಿವಶಂಕರಪ್ಪ, ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ.ರವಿಚಂದ್ರ, ಎನ್‌ಎಸ್‌ಎಸ್‌ ಸಂಯೋಜಕ ಸಜ್ಜಾದ್‌ ಪಾಷ್‌, ಉಪನ್ಯಾಸಕರಾದ ಪ್ರೊ.ಕೆಂಪೆೇಗೌಡ, ಸತ್ಯನಾರಾಯಣ ಗೌಡ, ಅರ್ಚನಾ, ಕೇಶವ ಮೂರ್ತಿ, ಸಂಘಟನಾ ಅಧಿಕಾರಿ ಗಿರೀಶ್‌, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಬೆಟ್ಟಕೋಟೆ ಹರೀಶ್‌, ಪಿಳ್ಳರಾಜು, ಮುಖಂಡ ಅಜಯ್‌, ಶಿವಕುಮಾರ್‌, ಸತೀಶ್‌ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.