ಸಂವಿಧಾನ ರಕ್ಷಣೆಗೆ ಸಂಘಟಿತ ಹೋರಾಟ ಅಗತ್ಯ


Team Udayavani, Feb 25, 2019, 7:33 AM IST

cta-2.jpg

ಚಿತ್ರದುರ್ಗ: ಮೀಸಲಾತಿ ಹಾಗೂ ದಲಿತ ವಿರೋಧಿಗಳು ಸಂವಿಧಾನವನ್ನು ಸುಡಬೇಕು, ಬದಲಾಯಿಸಬೇಕು ಎನ್ನುವ ಕೂಗು ಎಬ್ಬಿಸುತ್ತಿದ್ದಾರೆ. ಮೀಸಲಾತಿ ಪಡೆಯುತ್ತಿರುವ ಎಸ್ಸಿ-ಎಸ್ಟಿ ಸೇರಿದಂತೆ ಇತರೆ ಎಲ್ಲ ಒಬಿಸಿ ವರ್ಗದವರು ಎಚ್ಚೆತ್ತುಕೊಳ್ಳಬೇಕು ಎಂದು ಸಾಮಾಜಿಕ ಚಿಂತಕ ಅರಕಲವಾಡಿ ನಾಗೇಂದ್ರ ಹೇಳಿದರು.

ನಗರದ ಜಿಲ್ಲಾ ಕ್ರೀಡಾ ಭವನದಲ್ಲಿ ಜಿಲ್ಲಾ ಮಾದಿಗ ನೌಕರರ ಸಾಂಸ್ಕೃತಿಕ ಸಂಘದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ “ಭಾರತ ಸಂವಿಧಾನ ಮತ್ತು ಸಮಕಾಲೀನ ಸ್ಥಿತಿಗತಿಗಳು’ ಎಂಬ ವಿಷಯ ಕುರಿತ ವಿಚಾರಸಂಕಿರಣ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂವಿಧಾನಕ್ಕೆ ಅಪಾಯ ಎದುರಾಗಿದೆ. ಹಾಗಾಗಿ ಆಪತ್ತಿನಲ್ಲಿರುವ ಸಂವಿಧಾನವನ್ನು ಅಪಾಯದಿಂದ ಪಾರು ಮಾಡಬೇಕಾಗಿದೆ. ಇದಕ್ಕಾಗಿ ಮೀಸಲಾತಿ ಪಡೆಯುತ್ತಿರುವ ಎಲ್ಲ ಸಮುದಾಯಗಳು ಒಗ್ಗೂಡಿ ಹೋರಾಟ ಮಾಡಬೇಕು. ಸಂವಿಧಾನಕ್ಕೆ ಧಕ್ಕೆಯಾದರೆ ಅದು ಸಮಗ್ರ ಭಾರತೀಯರಿಗೆ, ಬಹುಸಂಖ್ಯಾತರಿಗೆ ಅಪಾಯವಾದಂತೆ ಎನ್ನುವುದನ್ನು ಮರೆಯಬಾರದು ಎಂದು ಎಚ್ಚರಿಸಿದರು.

ದೇಶದ 130 ಕೋಟಿ ಜನರಿಗೆ ಸಂವಿಧಾನ ರಕ್ಷಾಕವಚವಾಗಿದೆ. ಈ ರಕ್ಷಾಕವಚ ಕಳಚಿದರೆ ದೊಡ್ಡ ಅಪಾಯ ಕಾದಿದೆ. ಸಮಾನತೆಯ ಬದುಕಿಗಾಗಿ ಇಡೀ ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠ ಸಂವಿಧಾನವನ್ನು ಭಾರತ ಹೊಂದಿದೆ. ಡಾ| ಬಿ.ಆರ್‌. ಅಂಬೇಡ್ಕರ್‌ ನೀಡಿದ ಸಂವಿಧಾನದ ಆಶಯಗಳು ಸಂಪೂರ್ಣವಾಗಿ ಅನುಷ್ಠಾನಗೊಂಡಿಲ್ಲ.

ಭಾರತ ದೇಶ ಒಪ್ಪಿಕೊಂಡಿರುವ ಸಂವಿಧಾನ ಕೇವಲ ಎಸ್ಸಿ-ಎಸ್ಟಿ ವರ್ಗಗಳಿಗೆ ಮಾತ್ರವಲ್ಲ, ಎಲ್ಲ ಸಮುದಾಯ ಹಾಗೂ ಧರ್ಮದವರಿಗೆ ಎನ್ನುವುದನ್ನು ಮರೆಯಬಾರದು. ಅಲ್ಲದೆ ಸಂವಿಧಾನದ ಮಹತ್ವವನ್ನು ದೇಶದ ನಾಗರಿಕರಿಗೆ ತಿಳಿಸುವ ಮೂಲಕ ಸಂವಿಧಾನವನ್ನು ಉಳಿಸಿಕೊಳ್ಳಬೇಕಾಗಿದೆ. ಆ ಕಾರಣಕ್ಕೆ ಎಲ್ಲ ಕಡೆಗಳಲ್ಲಿ ಸಂವಿಧಾನ ಕುರಿತು ವಿಚಾರಸಂಕಿರಣ, ಸಂವಾದ ಆಯೋಜಿಸುವ ಮೂಲಕ ಸಂವಿಧಾನದ ತಿರುಳನ್ನು ಅರ್ಥೈಸಿಕೊಳ್ಳಬೇಕು ಎಂದರು.

ನಿವೃತ್ತ ಪ್ರಾಂಶುಪಾಲ ಬಿ.ಆರ್‌. ಶಿವಕುಮಾರ್‌ ಉದ್ಘಾಟಿಸಿ ಮಾತನಾಡಿ, ಅಂಬೇಡ್ಕರ್‌ ಈ ದೇಶಕ್ಕೆ ನೀಡಿರುವ ಸಂವಿಧಾನ ಹಾಗೂ ಅವರಲ್ಲಿನ ವಿಚಾರಧಾರೆಗಳನ್ನು ಅರ್ಥೈಸಿಕೊಳ್ಳುವಲ್ಲಿ ವಿಫಲರಾಗಿದ್ದೇವೆ. ಇದರಿಂದಾಗಿ ಅನಾಹುತಗಳು ಆಗುತ್ತಿವೆ ಎಂದು ಹೇಳಿದರು.

ಜಿಲ್ಲಾ ಮಾದಿಗ ನೌಕರರ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಚಂದ್ರಪ್ಪ, ಮಾಜಿ ಅಧ್ಯಕ್ಷ ಜಗನ್ನಾಥ, ಉಪನ್ಯಾಸಕ ತಿಪ್ಪೇಸ್ವಾಮಿ ಕೆರೆಯಾಗಳಹಳ್ಳಿ, ಸಂಘದ ಪ್ರಧಾನ ಕಾರ್ಯದರ್ಶಿ ಎನ್‌. ರಾಘವೇಂದ್ರ, ಸಂಘಟನಾ ಕಾರ್ಯದರ್ಶಿ ಟಿ. ಶ್ರೀನಿವಾಸ್‌, ಚಳ್ಳಕೆರೆ ತಾಲೂಕು ಘಟಕದ ಅಧ್ಯಕ್ಷ ದಯಾನಂದ, ಅಂಬೇಡ್ಕರ್‌ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಬಿ.ಪಿ. ತಿಪ್ಪೇಸ್ವಾಮಿ, ಡಾ| ಬಿ.ಎಂ. ಗುರುನಾಥ್‌ ಮತ್ತಿತರರು ಇದ್ದರು.

ಸಂವಿಧಾನ ಬದಲಾವಣೆ ಮಾಡುವುದು, ಸಂವಿಧಾನದಲ್ಲಿ ಪ್ರಾತಿನಿಧ್ಯ ನೀಡಿದ ಮೀಸಲಾತಿ ಬದಲಾವಣೆ ಮಾಡುವ ಮಾತುಗಳು ಕೇಳಿಬರುತ್ತಿರುವುದು ವಿಷಾದನೀಯ ಸಂಗತಿ. ದೇಶದ ಬಹುಸಂಖ್ಯಾತರ ಅಸ್ತಿತ್ವವನ್ನು ಅಲುಗಾಡಿಸುವ ಪ್ರಕ್ರಿಯೆಗಳು, ಪ್ರಕರಣಗಳು ನಡೆಯುತ್ತಿರುವುದು ಬಹು
ದೊಡ್ಡ ದುರಂತ. 
ಅರಕಲವಾಡಿ ನಾಗೇಂದ್ರ, ಸಾಮಾಜಿಕ ಚಿಂತಕ.

ಟಾಪ್ ನ್ಯೂಸ್

Prajwal Revanna

Prajwal Revanna ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳ ವಶಕ್ಕೆ

1-qewqweeeqw

Ballari ಒನ್ ಕೇಂದ್ರದಲ್ಲಿ ಕಳವು ಮಾಡಿದ್ದ ಆರೋಪಿ ಬಂಧನ; ಮತ್ತೊಬ್ಬ ಪರಾರಿ

reliance

TIME ನಿಯತಕಾಲಿಕ: ಜಾಗತಿಕ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

1-aaa

Kanniyakumari; 45 ಗಂಟೆಗಳ ಧ್ಯಾನವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeewqewqe

Bharamasagara; ಹಾವು ಕಚ್ಚಿ ರೈತ ಮಹಿಳೆ ಮೃತ್ಯು

ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಹಾವು… ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಹಾವು… ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ನನ್ನ ಹೇರ್ ಕಟಿಂಗ್ ಮಾಡುವವರಿಗೆ ಬಿಡುವಿಲ್ಲ.. ವಿಜಯೇಂದ್ರ ವಿರುದ್ಧ ಗುಡುಗಿದ ಶಿಕ್ಷಣ ಸಚಿವರು

ನನ್ನ ಹೇರ್ ಕಟಿಂಗ್ ಮಾಡುವವರಿಗೆ ಬಿಡುವಿಲ್ಲ.. ವಿಜಯೇಂದ್ರ ವಿರುದ್ಧ ಗುಡುಗಿದ ಶಿಕ್ಷಣ ಸಚಿವರು

2-holalkere

Holalkere: ರೈಲಿನಿಂದ ಕೆಳಗೆ ಬಿದ್ದು ಮಹಿಳೆ ಸಾವು

Chitradurga; ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ವಿಜಯೇಂದ್ರ

Chitradurga; ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ವಿಜಯೇಂದ್ರ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Prajwal Revanna

Prajwal Revanna ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳ ವಶಕ್ಕೆ

1-qewqweeeqw

Ballari ಒನ್ ಕೇಂದ್ರದಲ್ಲಿ ಕಳವು ಮಾಡಿದ್ದ ಆರೋಪಿ ಬಂಧನ; ಮತ್ತೊಬ್ಬ ಪರಾರಿ

1-sub

Subrahmanya ಪರಿಸರದಲ್ಲಿ ಧಾರಾಕಾರ ಮಳೆ: ಕೆಲವೆಡೆ ಹಾನಿ

1-qewqeweqw

Mangaluru ನಮಾಜ್‌ ಪ್ರಕರಣ: ಬಿ ರಿಪೋರ್ಟ್‌ ಸಲ್ಲಿಕೆ; ಶರಣ್‌ ಪಂಪ್‌ವೆಲ್‌ ವಿರುದ್ಧ ಪ್ರಕರಣ

reliance

TIME ನಿಯತಕಾಲಿಕ: ಜಾಗತಿಕ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.