ಭಾರತ – ಪಾಕ್ ಉದ್ವಿಗ್ನತೆ ಶಮನಕ್ಕೆ ಮಾತುಕತೆ: ಫಾರೂಕ್ ಸಲಹೆ
Team Udayavani, Feb 25, 2019, 11:58 AM IST
ಶ್ರೀನಗರ : ‘ಭಾರತ – ಪಾಕ್ ಉದ್ವಿಗ್ನತೆಯನ್ನು ಶಮನಗೊಳಿಸಲು ಮಾತುಕತೆಯೊಂದೇ ಮಾರ್ಗ; ಹಾಗೆಯೇ ಇಸ್ಲಾಮಾಬಾದ್ ತನ್ನ ನೆಲದಲ್ಲಿ ಕಾರ್ಯಾಚರಿಸುತ್ತಿರುವ ಉಗ್ರರನ್ನು ಮಟ್ಟ ಹಾಕಲು ಬಲವಾದ ಪ್ರಯತ್ನ ಮಾಡಬೇಕಾಗಿದೆ’ ಎಂದು ನ್ಯಾಶನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲ ಹೇಳಿದ್ದಾರೆ.
“ಯುದ್ಧದ ಉನ್ಮಾದವನ್ನು ಸೃಷ್ಟಿಸುವ ಯತ್ನಗಳು ನಡೆಯುತ್ತಿವೆ. ಆದುದರಿಂದ ನೀವು ದೇವರಲ್ಲಿ, ಯುದ್ಧದಿಂದ ನಮ್ಮನ್ನು ಪಾರು ಮಾಡು ಎಂದು ಪ್ರಾರ್ಥಿಸಬೇಕಿದೆ; ಈ ವರೆಗೆ ನಾವು ನಾಲ್ಕು ಯುದ್ಧಗಳನ್ನು ಮಾಡಿದ್ದೇವೆ; ಆದರೆ ಅದರಿಂದ ಜೀವ ಹಾನಿ ಬಿಟ್ಟರೆ ಬೇರೇನೂ ಸಾಧಿತವಾಗಿಲ್ಲ” ಎಂದು ಅಬ್ದುಲ್ಲ ಅವರು ಇಲ್ಲಿನ ಪಕ್ಷದ ಪ್ರಧಾನ ಕಾರ್ಯಾಲಯದಲ್ಲಿ ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು ಮತ್ತು ಪ್ರತಿನಿಧಿಗಳನ್ನು ಉದ್ದೇಶಿಸಿ ಹೇಳಿದರು.
”ಪಾಕಿಸ್ಥಾನ ತನ್ನ ನೆಲದಲ್ಲಿ ಸಕ್ರಿಯವಾಗಿರುವ ಉಗ್ರರ ವಿರುದ್ಧ ಬಲವಾದ ಕ್ರಮ ತೆಗೆದುಕೊಳ್ಳದಿದ್ದರೆ ಆ ದೇಶಕ್ಕೆ ಭಯೋತ್ಪಾದಕ ದೇಶವೆಂಬ ಹಣೆ ಪಟ್ಟಿ ಸಿಗುತ್ತದೆ; ಅದರಿಂದ ಇಡಿಯ ದೇಶದ ಜನರು ತೊಂದರೆಗೆ ಗುರಿಯಾಗುತ್ತಾರೆ” ಎಂದು ಅಬ್ದುಲ್ಲ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ
Covishield ಲಸಿಕೆಯಿಂದ ಮತ್ತೊಂದು ಸೈಡ್ಎಫೆಕ್ಟ್!
MUST WATCH
ಹೊಸ ಸೇರ್ಪಡೆ
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ
Sandalwood: ದರ್ಶನ್ ʼಡೆವಿಲ್ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್ ಪೋಸ್ಟರ್ ಔಟ್
Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ