4 ಎಸೆತಗಳಲ್ಲಿ 4 ವಿಕೆಟ್‌ ಕಿತ್ತ ರಶೀದ್‌ ಖಾನ್‌


Team Udayavani, Feb 26, 2019, 12:30 AM IST

rashid-khan-took.jpg

ಡೆಹ್ರಾಡೂನ್‌: ಅಫ್ಘಾನಿಸ್ಥಾನದ ಲೆಗ್‌ಸ್ಪಿನ್ನರ್‌ ರಶೀದ್‌ ಖಾನ್‌ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅಮೋಘ ಬೌಲಿಂಗ್‌ ಪ್ರದರ್ಶನದೊಂದಿಗೆ ಹೊಸ ಇತಿಹಾಸ ಬರೆದಿದ್ದಾರೆ. ಸತತ 4 ಎಸೆತಗಳಲ್ಲಿ 4 ವಿಕೆಟ್‌ ಉರುಳಿಸಿದ ವಿಶ್ವದ ಮೊದಲ ಸಾಧಕನಾಗಿ ಮೂಡಿಬಂದಿದ್ದಾರೆ.

ರವಿವಾರ ರಾತ್ರಿ ಡೆಹ್ರಾಡೂನ್‌ನಲ್ಲಿ ನಡೆದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ರಶೀದ್‌ ಖಾನ್‌ ಈ ಸಾಧನೆಗೈದರು. ಇದರೊಂದಿಗೆ 32 ರನ್ನುಗಳ ಗೆಲುವು ಸಾಧಿಸಿದ ಅಫ್ಘಾನಿಸ್ಥಾನ, ಟಿ20 ಸರಣಿಯನ್ನು ಕ್ಲೀನ್‌ ಸ್ವೀಪ್‌  ಆಗಿ ವಶಪಡಿಸಿಕೊಂಡಿತು.

ಮೊದಲು ಬ್ಯಾಟಿಂಗ್‌ ನಡೆಸಿದ ಅಫ್ಘಾನಿಸ್ಥಾನ 7 ವಿಕೆಟಿಗೆ 210 ರನ್‌ ಪೇರಿಸಿದರೆ, ಐರ್ಲೆಂಡ್‌ 8 ವಿಕೆಟಿಗೆ 178 ರನ್‌ ಗಳಿಸಿ ಶರಣಾಯಿತು.

ರಶೀದ್‌ 27ಕ್ಕೆ 5 ವಿಕೆಟ್‌
ರಶೀದ್‌ ಖಾನ್‌ ಸಾಧನೆ 27ಕ್ಕೆ 5 ವಿಕೆಟ್‌. 16ನೇ ಓವರಿನ ಕೊನೆಯ ಎಸೆತದಲ್ಲಿ ಕೆವಿನ್‌ ಓ’ಬ್ರಿಯಾನ್‌ ವಿಕೆಟ್‌ ಕಿತ್ತ ರಶೀದ್‌ ಖಾನ್‌, ಬಳಿಕ ತಮ್ಮ ಮುಂದಿನ ಓವರಿನ ಮೊದಲ 3 ಎಸೆತಗಳಲ್ಲಿ ಜಾರ್ಜ್‌ ಡಾಕ್ರೆಲ್‌, ಶೇನ್‌ ಜೆಟ್‌ಕೇಟ್‌ ಮತ್ತು ಸಿಮಿ ಸಿಂಗ್‌ ವಿಕೆಟ್‌ ಹಾರಿಸಿ ಮೆರೆದರು.

ಇದು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ದಾಖಲಾದ 7ನೇ ಹ್ಯಾಟ್ರಿಕ್‌ ನಿದರ್ಶನ. ರಶೀದ್‌ ಖಾನ್‌ ಹ್ಯಾಟ್ರಿಕ್‌ ವಿಕೆಟ್‌ ಬೇಟೆಯಾಡಿದ ವಿಶ್ವದ ಮೊದಲ ಸ್ಪಿನ್ನರ್‌.

ಅಫ್ಘಾನಿಸ್ಥಾನ ಪರ ಮೊಹಮ್ಮದ್‌ ನಬಿ 36 ಎಸೆತಗಳಿಂದ 81 ರನ್‌ ಬಾರಿಸಿದರು (6 ಬೌಂಡರಿ, 7 ಸಿಕ್ಸರ್‌). ಐರ್ಲೆಂಡ್‌ ಸರದಿಯಲ್ಲಿ ಆರಂಭಕಾರ ಕೆವಿನ್‌ ಓ’ಬ್ರಿಯಾನ್‌ 74 ರನ್‌ ಹೊಡೆದರು (47 ಎಸೆತ, 5 ಬೌಂಡರಿ, 3 ಸಿಕ್ಸರ್‌).

ಸಂಕ್ಷಿಪ್ತ ಸ್ಕೋರ್‌: ಅಫ್ಘಾನಿಸ್ಥಾನ-7 ವಿಕೆಟಿಗೆ 210 (ನಬಿ 81, ಹಜ್ರತುಲ್ಲ 31, ರ್‍ಯಾಂಕಿನ್‌ 53ಕ್ಕೆ 3). ಐರ್ಲೆಂಡ್‌-8 ವಿಕೆಟಿಗೆ 178 (ಓ’ಬ್ರಿಯಾನ್‌ 74, ಬಾಲ್ಬಿರ್ನಿ 47, ರಶೀದ್‌ 27ಕ್ಕೆ 5, ಜಿಯಾವುರ್‌ ರೆಹಮಾನ್‌ 42ಕ್ಕೆ 2). ಪಂದ್ಯಶ್ರೇಷ್ಠ, ಸರಣಿಶ್ರೇಷ್ಠ: ಮೊಹಮ್ಮದ್‌ ನಬಿ.

ಟಿ20 ಹ್ಯಾಟ್ರಿಕ್‌ ಸಾಧಕರು
ಬೌಲರ್‌    ವಿರುದ್ಧ    ತಾಣ    ವರ್ಷ

ಬ್ರೆಟ್‌ ಲೀ (ಆ)    ಬಾಂಗ್ಲಾದೇಶ    ಕೇಪ್‌ಟೌನ್‌    2007-08
ಜೇಕಬ್‌ ಓರಮ್‌ (ನ್ಯೂ)    ಶ್ರೀಲಂಕಾ    ಕೊಲಂಬೊ    2009
ಟಿಮ್‌ ಸೌಥಿ (ನ್ಯೂ)    ಪಾಕಿಸ್ಥಾನ    ಆಕ್ಲೆಂಡ್‌    2010-11
ತಿಸರ ಪೆರೆರ (ಶ್ರೀ)    ಭಾರತ    ರಾಂಚಿ    2015-16
ಲಸಿತ ಮಾಲಿಂಗ (ಶ್ರೀ)    ಬಾಂಗ್ಲಾದೇಶ    ಕೊಲಂಬೊ    2016-17
ಫಾಹಿಮ್‌ ಅಶ್ರಫ್ (ಪಾ)    ಶ್ರೀಲಂಕಾ    ಅಬುಧಾಬಿ    2017-18
ರಶೀದ್‌ ಖಾನ್‌ (ಅ)    ಐರ್ಲೆಂಡ್‌    ಡೆಹ್ರಾಡೂನ್‌    2018-19

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.