ಕರ್ನಾಟಕಕ್ಕೆ ಸತತ 4ನೇ ಗೆಲುವು


Team Udayavani, Feb 26, 2019, 12:30 AM IST

kar-win.jpg

ಕಟಕ್‌: ಸಯ್ಯದ್‌ ಮುಷ್ತಾಕ್‌ ಅಲಿ ಟಿ20 ಕ್ರಿಕೆಟ್‌ ಸರಣಿಯಲ್ಲಿ ಗೆಲುವಿನ ನಾಗಾಲೋಟ ಮುಂದುವರಿಸಿರುವ ಕರ್ನಾಟಕ, ಸೋಮವಾರದ “ಡಿ’ ವಿಭಾಗದ ಮುಖಾಮುಖೀಯಲ್ಲಿ ಮಿಜೋರಾಂ ವಿರುದ್ಧ 137 ರನ್ನುಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಮನೀಷ್‌ ಪಾಂಡೆ ಬಳಗ ಆಡಿದ ಎಲ್ಲ 4 ಪಂದ್ಯಗಳಲ್ಲೂ ಜಯ ಕಂಡಂತಾಯಿತು.

ಮೊದಲು ಬ್ಯಾಟಿಂಗ್‌ ನಡೆಸಿದ ಕರ್ನಾಟಕ 4 ವಿಕೆಟಿಗೆ 242 ರನ್‌ ಪೇರಿಸಿ ಸವಾಲೊಡ್ಡಿತು. ಜವಾಬಿತ್ತ ಮಿಜೋರಾಂ 6 ವಿಕೆಟಿಗೆ 105 ರನ್‌ ಬಾರಿಸಿ ಶರಣಾಯಿತು. ಇದಕ್ಕೂ ಮೊದಲು ಕರ್ನಾಟಕ ತಂಡ ಅಸ್ಸಾಂ, ಬಂಗಾಲ ಮತ್ತು ಅರುಣಾಚಲ ಪ್ರದೇಶಕ್ಕೆ ಸೋಲುಣಿಸಿತ್ತು.

ಕರ್ನಾಟಕದ ಬ್ಯಾಟಿಂಗ್‌ ಸರದಿಯಲ್ಲಿ ಮಿಂಚಿದವರೆಂದರೆ ಆರಂಭಕಾರ ರೋಹಮ್‌ ಕದಮ್‌ ಮತ್ತು ವನ್‌ಡೌನ್‌ ಆಟಗಾರ ಕರುಣ್‌ ನಾಯರ್‌. 16ನೇ ಓವರ್‌ ತನಕ ಕ್ರೀಸ್‌ ಆಕ್ರಮಿಸಿಕೊಂಡ ಕದಮ್‌ 51 ಎಸೆತಗಳಿಂದ 78 ರನ್‌ ಹೊಡೆದರು. ಇದರಲ್ಲಿ 6 ಬೌಂಡರಿ, 3 ಸಿಕ್ಸರ್‌ ಸೇರಿತ್ತು. ಮಾಯಾಂಕ್‌ ಅಗರ್ವಾಲ್‌ 20 ರನ್‌ ಮಾಡಿದರು. ಇವರಿಬ್ಬರ ಮೊದಲ ವಿಕೆಟ್‌ ಜತೆಯಾಟದಲ್ಲಿ 4.2 ಓವರ್‌ಗಳಿಂದ 52 ರನ್‌ ಒಟ್ಟುಗೂಡಿತು.

ನಾಯರ್‌ ಮಿಂಚಿನ ಆಟ
ಕರುಣ್‌ ನಾಯರ್‌ 71 ರನ್‌ ಬಾರಿಸಿ ಗಮನ ಸೆಳೆದರು. ಸಿಡಿಲಬ್ಬರದ ಬ್ಯಾಟಿಂಗ್‌ ಪ್ರದರ್ಶಿಸಿದ ನಾಯರ್‌ ಕೇವಲ 33 ಎಸೆತಗಳಲ್ಲಿ ಈ ಇನ್ನಿಂಗ್ಸ್‌ ಕಟ್ಟಿದರು. ಸಿಡಿಸಿದ್ದು 5 ಫೋರ್‌, 5 ಸಿಕ್ಸರ್‌. ಮನೀಷ್‌ ಪಾಂಡೆ 13 ಎಸೆತಗಳಲ್ಲಿ 33 ರನ್‌ (3 ಬೌಂಡರಿ, 1 ಸಿಕ್ಸರ್‌) ಮತ್ತು ಜಗದೀಶ್‌ ಸುಚಿತ್‌ 8 ಎಸೆತಗಳಲ್ಲಿ 26 ರನ್‌ (3 ಬೌಂಡರಿ, 2 ಸಿಕ್ಸರ್‌) ಬಾರಿಸಿ ಔಟಾಗದೆ ಉಳಿದರು.

ಮಿಜೋರಾಂ ಉತ್ತಮ ಆರಂಭದ ಮೂಲಕ ಗಮನ ಸೆಳೆಯಿತು. ನಾಯಕ ತರುವಾರ್‌ ಕೊಹ್ಲಿ (36) ಮತ್ತು ಅಖೀಲ್‌ ರಜಪೂತ್‌ (41) 8.4 ಓವರ್‌ಗಳಿಂದ 63 ರನ್‌ ಹೊಡೆದರು. ಇಲ್ಲಿಂದ ಮುಂದೆ ಮಿಜೋರಾಂ ಆಮೆಗತಿಯಲ್ಲಿ ಆಡತೊಡಗಿತು. ಶ್ರೇಯಸ್‌ ಗೋಪಾಲ್‌ ಕೇವಲ 8 ರನ್‌ ನೀಡಿ 4 ವಿಕೆಟ್‌ ಕಿತ್ತರು.ಕರ್ನಾಟಕ ತನ್ನ ಮುಂದಿನ ಪಂದ್ಯವನ್ನು ಬುಧವಾರ ಛತ್ತೀಸ್‌ಗಢ ವಿರುದ್ಧ ಆಡಲಿದೆ.

ಸಂಕ್ಷಿಪ್ತ ಸ್ಕೋರ್‌: ಕರ್ನಾಟಕ-4 ವಿಕೆಟಿಗೆ 242 (ಕದಮ್‌ 78, ನಾಯರ್‌ 71, ಪಾಂಡೆ ಔಟಾಗದೆ 33, ರಾಲ್ಟೆ 48ಕ್ಕೆ 2). ಮಿಜೋರಾಂ-6 ವಿಕೆಟಿಗೆ 105 (ಅಖೀಲ್‌ 41, ಟಿ. ಕೊಹ್ಲಿ 36, ಶ್ರೇಯಸ್‌ ಗೋಪಾಲ್‌ 8ಕ್ಕೆ 4).

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.