ಕಾಳ್ಗಿಚ್ಚು ಆರಿಸಲು ಕಾಪ್ಟರ್ ಬಳಕೆ
Team Udayavani, Feb 26, 2019, 12:30 AM IST
ಗುಂಡ್ಲುಪೇಟೆ/ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಸೇರಿದಂತೆ ರಾಜ್ಯದ ವಿವಿಧ ಅರಣ್ಯಗಳಲ್ಲಿ ಕಾಣಿಸಿಕೊಂಡಿರುವ ಕಾಳ್ಗಿಚ್ಚಿನ ಪ್ರತಾಪ ಮುಂದುವರಿದಿದ್ದು, ಬಂಡೀಪುರದಲ್ಲಿ ಬೆಂಕಿ ನಂದಿಸಲು ಹೆಲಿಕಾಪ್ಟರ್ಗಳನ್ನು ಬಳಕೆ ಮಾಡಿಕೊಳ್ಳಲಾಗಿದೆ. ಇದರ ಜತೆಯಲ್ಲೇಹಿಮವದ್ ಗೋಪಾಲಸ್ವಾಮಿ ಬೆಟ್ಟದಿಂದ ಮದ್ದೂರು ಅರಣ್ಯ ವಲಯಕ್ಕೂ ಬೆಂಕಿ ಆವರಿಸಿದೆ.
ರಾಜ್ಯ ಸರ್ಕಾರದ ಮನವಿಯ ಅನ್ವಯ ವಾಯುಪಡೆಯ ಎಂಐ17-ವಿ5 ಎರಡು ಸಮರ ಹೆಲಿಕಾಪ್ಟರ್ಗಳು ಬಂಡೀಪುರಕ್ಕೆ ಆಗಮಿಸಿ, ಬೆಂಕಿ ಆರಿಸುವಲ್ಲಿ ನಿರತವಾದವು. ಸೋಮವಾರ ಮಧ್ಯಾಹ್ನವೇ 2 ಹೆಲಿಕಾಪ್ಟರ್ ಬಂದರೂ, ಇಳಿಯಲು ಸೂಕ್ತ ಸ್ಥಳಾವಕಾಶ ಇಲ್ಲದೇ ಮೈಸೂರಿಗೆ ವಾಪಸ್ ಹೋಗಿದ್ದವು. ಸಂಜೆ 4ರ ವೇಳೆಗೆ ಮತ್ತೆ ಬಂದು, ಕರಡುಕಲ್ ಬೆಟ್ಟದಲ್ಲಿ ಒಂದು, ಮತ್ತೂಂದು ಚಮ್ಮನಹಳ್ಳದಲ್ಲಿ ಕಾರ್ಯಾಚರಣೆ ನಡೆಸಿದವು. ಒಟ್ಟು 30 ಸಾವಿರ ಲೀ. ನೀರನ್ನು ಬೆಂಕಿ ಆರಿಸಲು ಸಿಂಪಡಿಸಲಾಗಿದೆ.
8 ಸಾವಿರ ಎಕರೆ ಆಹುತಿ
ಬಂಡೀಪುರ ಕಾಡಿನಲ್ಲೇ ಇದುವರೆಗೆ 8 ಸಾವಿರ ಎಕರೆ ಅರಣ್ಯ ಅಗ್ನಿಗೆ ಆಹುತಿಯಾಗಿದೆ. ಈ ಬಗ್ಗೆ ಸ್ವತಃ ಅರಣ್ಯ ಅಧಿಕಾರಿಗಳೇ ಮಾಹಿತಿ ನೀಡಿದ್ದಾರೆ.
ಸಚಿವರಿಂದ ಪರಿಶೀಲನೆ: ಬೆಂಕಿ ಬಿದ್ದ ಅರಣ್ಯ ಪ್ರದೇಶಗಳಲ್ಲಿ ಸೋಮವಾರ ವೀಕ್ಷಣೆ ನಡೆಸಿದ ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಬೆಂಕಿಯಿಂದ ತೀವ್ರವಾಗಿ ಹಾನಿಗೊಳಗಾಗಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು.
ಇನ್ನೂ ಹಲವೆಡೆ ಬೆಂಕಿ
– ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲು
– ಸಾಗರ ತಾಲೂಕಿನ ಆವಿನಹಳ್ಳಿ ಹೋಬಳಿ ಭಾಗದ ಅರಣ್ಯ
– ಬೆಂಗಳೂರು ಬಳಿಯ ನೆಲಮಂಗಲದ ನೀಲಗಿರಿ ತೋಪು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !