ಕಲೆ, ಸಾಹಿತ್ಯ, ಗಾಯನವಿರುವೆಡೆ ಅಪರಾಧ ವಿರಳ


Team Udayavani, Feb 26, 2019, 7:36 AM IST

kale.jpg

ರಾಮನಗರ: ಕಲೆ, ಸಾಹಿತ್ಯ, ಗಾಯನವಿರುವ ಜಾಗದಲ್ಲಿ ಅಪರಾಧಗಳು ಬಹಳ ವಿರಳ ಎಂದು ವಿಮರ್ಶಕ ಡಾ.ಮಧುಸೂದನ ಜೋಷಿ ಹೇಳಿದರು. ನಗರದ ಸ್ಫೂರ್ತಿ ಭವನದಲ್ಲಿ ಸಂಸ್ಕೃತಿ ಸೌರಭ ಟ್ರಸ್ಟ್‌ ಹಮ್ಮಿಕೊಂಡಿದ್ದ “ಮುಖ್ಯ ಪೇದೆ ಕೆ.ಎಂ.ಶೈಲೇಶ್‌ ಸಾಹಿತ್ಯ ಕೃಷಿ – ಒಂದು ಅವಲೋಕನ’ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಅವರು ಮಾತನಾಡಿ,

-ಇಂದು ಕದಡಿ ಹೋಗುತ್ತಿರುವ ಸಮಾಜವನ್ನು ಶಾಂತ ಸ್ಥಿತಿಗೆ ಬರಲು ಕಾವ್ಯ ಬೇಕು. ರೈತ, ಸೈನಿಕ ಮತ್ತು ಕವಿ ದೇಶವನ್ನು ಕಟ್ಟುವಲ್ಲಿ ಮಹತ್ತರ ಪಾತ್ರವಹಿಸುತ್ತಾರೆ. ಇಲ್ಲಿ ಮುಖ್ಯ ಪೇದೆ ಆಗಿರುವ ಕೆ.ಎಂ.ಶೈಲೇಶ್‌ ಗನ್ನು ಹಿಡಿದ ಕೈ ಪೆನ್ನು ಹಿಡಿದಿದೆ. ವಿಜಯ ಸಾಸನೂರ್‌ ಅವರಂತಹ ಅಧಿಕಾರಿಗಳು ಪತ್ತೆದಾರಿ ಕಾದಂಬರಿಗಳನ್ನು ಬರೆದು ಹೆಸರು ಮಾಡಿದರು ಎಂದು ಸ್ಮರಿಸಿದರು.

ಕಾವ್ಯದ ಮೂಲಕ ಯಶ‌ಸ್ಸು: ಬಸವಣ್ಣನಂತಹ ಮಹನೀಯರು ಯಶ‌ಸ್ಸು ಕಂಡಿದ್ದೆ ಕಾವ್ಯದ ಮೂಲಕ. ಅವರು ತಮ್ಮ ವಚನಗಳ ಮೂಲಕ ಸಮಾಜದ ಅಂಕು-ಡೊಂಕುಗಳನ್ನು ತಿದ್ದುವಲ್ಲಿ ಸರಳವಾಗಿ ಪ್ರಯತ್ನಿಸಿದರು. ಅವರ ಪ್ರಯತ್ನ ಜನರನ್ನು ಬಹುಬೇಗ ತಲುಪಿತು.

ಅದೇ ರೀತಿ ಶೈಲೇಶ್‌ ವೃತ್ತಿಯಲ್ಲಿ ಪೊಲೀಸ್‌ ಇಲಾಖೆಯಲ್ಲಿ ಇದ್ದುಕೊಂಡು ಕವನ ಸಂಕಲನಗಳನ್ನು ತರುವ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವುದು ಅಭಿನಂದನೀಯ. ವೃತ್ತಿ ಮತ್ತು ಪ್ರವೃತ್ತಿಯಲ್ಲಿ ಭಿನ್ನತೆ ಬೇಕು ಎಂದು ಅಭಿಪ್ರಾಯಪಟ್ಟರು.

ಕವಿತೆಗಳಲ್ಲಿ ವೈಭವೀಕರಣವಿಲ್ಲ: ಸಾಹಿತಿ ಡಾ.ಸಿಪಿಲೆ ಸತೀಶ್‌ ಮಾತನಾಡಿ, ತನ್ನ ಸುತ್ತಲ ಪರಿಸರ ಪ್ರೋತ್ಸಾಹ ಕೊಡಲಿ ಬಿಡಲಿ ತನ್ನ ಪಾಡಿಗೆ ತಾನು ಬರೆಯುವುದೇ ಸೃಜನಶೀಲತೆ. ಇಲ್ಲಿ ಪೊಲೀಸ್‌ ವೃತ್ತಿಯ ನಡುವೆ ಬಿಡುವು ಮಾಡಿಕೊಂಡು ಶೈಲೆಶ್‌ ಸಾಹಿತ್ಯ, ರಂಗಭೂಮಿ, ಗಾಯನ ಈ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವುದೇ ಅಚ್ಚರಿ ಮೂಡಿಸುತ್ತದೆ.

ಅವರು ಹಬ್ಬ, ಜಾತ್ರೆ, ದೇವರು ಈ ಎಲ್ಲದರಿಂದ ಸಿಗಬಹುದಾದ ಆನಂದವನ್ನು ತಮ್ಮ ಕವಿತೆಗಳಲ್ಲಿ ತಂದಿದ್ದಾರೆ. ಅವರು ಬಹುತೇಕ ಕವಿತೆಗಳಲ್ಲಿ ಮುಗ್ಧ ಮಗುವಿನಂತೆ ಎಲ್ಲಿಯೂ ವೈಭವೀಕರಣವಿಲ್ಲದೇ ಸಹಜವಾಗಿ ಬರೆಯುತ್ತಾ ಸಾಗಿದ್ದಾರೆ. ಅವರು ತಮ್ಮ ವೃತ್ತಿಯನ್ನು ಎಷ್ಟೊಂದು ಪ್ರೀತಿಸುತ್ತಾರೆ ಎನ್ನುವುದನ್ನು ಕೆಲ ಕವಿತೆಗಳಲ್ಲಿ ಕಾಣಬಹುದು.

ತನ್ನ ವೃತ್ತಿಯನ್ನು ಗೌರವಿಸುತ್ತಾ ಬರವಣಿಗೆಯನ್ನು ಅಪ್ಪಿಕೊಂಡಿರುವ ಶೈಲೇಶ್‌ ಕವಿತೆಗಳಲ್ಲಿ ಭಾವನಾತ್ಮಕ ಶ್ರೀಮಂತಿಕೆ ಕಾಣಬಹುದು. ಸಾಹಿತಿಯಾಗಿ ಮಾತ್ರವಲ್ಲದೇ ರಂಗಭೂಮಿ ನಟರಾಗಿ ತಬಲವಾದನ, ಗಾಯನದಲ್ಲೂ ತಮ್ಮನ್ನು ತೊಡಗಿಸಿಕೊಂಡಿರುವ ಇವರಿಂದ ಇನ್ನಷ್ಟು ಕೃತಿಗಳು ಹೊರಬರಲಿ ಎಂದು ಹಾರೈಸಿದರು. 

ಪ್ರತಿಭೆ ಅನಾವರಣಕ್ಕೆ ವೇದಿಕೆ ಅಗತ್ಯ: ರಾಜ್ಯ ಅಲೆಮಾರಿ ಸಮೂದಾಯಗಳ ಒಕ್ಕೂಟದ ಕಾರ್ಯಾಧ್ಯಕ್ಷ ಶೇಷಪ್ಪ ಮಾತನಾಡಿ, ಇಂದು ತಳ ಸಮುದಾಯಗಳಿಗೆ ವೇದಿಕೆ ಸಿಗುವುದೇ ವಿರಳ. ಅಂಥದ್ದರಲ್ಲಿ ದೊಂಬಿದಾಸ ಸಮುದಾಯದ ಶೈಲೇಶ್‌ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವುದು ಶ್ಲಾಘ‌ನೀಯ. ಇಂತಹ ಪ್ರತಿಭೆಗಳಿಗೆ ಹೆಚ್ಚು ವೇದಿಕೆಗಳು ಸಿಗಬೇಕಿದೆ. ಸಮಾಜದಿಂದ ಉತ್ತಮ ಸಾಹಿತಿಗಳನ್ನು ಬೆನ್ನು ತಟ್ಟುವ ಕೆಲಸವಾಗಬೇಕಿದೆ ಎಂದರು.

ಸಂಗೀತ ವಿದ್ವಾನ್‌ ಶಿವಾಜಿರಾವ್‌, ಸಂಸ್ಕೃತಿ ಸೌರಭ ಟ್ರಸ್ಟ್‌ನ ಅಧ್ಯಕ್ಷ ರಾ.ಬಿ.ನಾಗರಾಜ್‌ ಉಪಸ್ಥಿತರಿದ್ದರು. ಜಿಲ್ಲಾ ಕಸಾಪ ಮಾಜಿ ಕಾರ್ಯಾದರ್ಶಿ ಕಾ.ಪ್ರಕಾಶ್‌ ನಿರೂಪಿಸಿದರು. ಶಿಕ್ಷಕ ರಾಜಶೇಖರ ಪಾಟೀಲ್‌ ವಂದಿಸಿದರು. ಕುಮಾರಿ ಸ್ವಾತಿ, ಕುಮಾರಿ ಬಿಂದುಶ್ರೀ ವೃಂದದವರು ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ವಿನಯ್‌ಕುಮಾರ್‌, ಡಾ.ಎಚ್‌.ವಿ.ಮೂರ್ತಿ, ಗೋಪಾಲ್‌ ಸುಗುಮ ಸಂಗೀತ ಗಾಯನ ಹಾಗೂ ವೀರಯೋಧರ ಕುರಿತು ಡಾ. ಹೆಚ್‌.ವಿ. ಮೂರ್ತಿ ರಚನೆಯ ಗೀತೆ ಕಾರ್ಯಕ್ರಮದಲ್ಲಿ ಗಮನ ಸೆಳೆಯಿತು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.