ಪಟ್ಟಣದ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಚಿಂತನೆ


Team Udayavani, Feb 26, 2019, 7:36 AM IST

patannada.jpg

ಚನ್ನರಾಯಪಟ್ಟಣ: ಪಟ್ಟಣದ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಮೈತ್ರಿ ಸರ್ಕಾರದಿಂದ 40 ಕೋಟಿ ರೂ. ಅನುದಾನ ತರಲಾಗುವುದು ಎಂದು ಶಾಸಕ ಸಿ.ಎನ್‌.ಬಾಲಕೃಷ್ಣ ಭರವಸೆ ನೀಡಿದರು. ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

13 ವರ್ಷದ ಹಿಂದೆ 100 ಹಾಸಿಗೆ ಆಸ್ಪತ್ರೆಯನ್ನಾಗಿ ಅಭಿವೃದ್ಧಿ ಪಡಿಸಲಾಗಿತ್ತು. ಈಗ ಪ್ರತಿನಿತ್ಯ 700 ರಿಂದ 900 ಮಂದಿ ಹೊರರೋಗಿಗಳು ಚಿಕಿತ್ಸೆ ಪಡೆಯುತ್ತಿರುವುರಿಂದ ಮೇಲ್ದರ್ಜೆಗೇರಿಸುವುದು ಅನಿವಾರ್ಯವಾಗಿದೆ. ಈಗಾಗಲೇ ಮುಖ್ಯ ಮಂತ್ರಿಯೊಂದಿಗೆ ಚರ್ಚಿಸಲಾಗಿದೆ ಎಂದು ಹೇಳಿದರು.

ಆರೋಗ್ಯ ಕೇಂದ್ರಗಳ ಅಭಿವೃದ್ಧಿ: 50 ಲಕ್ಷ ರೂ. ವೆಚ್ಚದಲ್ಲಿ ತಾತ್ಕಾಲಿಕವಾಗಿ ಅಭಿವೃದ್ಧಿ ಮಾಡಲಾಗಿದೆ. ಅಕ್ಕನಹಳ್ಳಿ ಆಸ್ಪತ್ರೆ 1.50 ಕೋಟಿ ರೂ.ಗಳಲ್ಲಿ ನಿರ್ಮಾಣ ಮಾಡಲಾಗುವುದು, ನವಿಲೆ ಆಸ್ಪತ್ರೆ 1.65 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಪ್ರಾರಂಭಿಸಲಾಗಿದೆ. ಬೊಳಗಟ್ಟೆ, ಶ್ರೀನಿವಾಸಪುರ ಹಾಗೂ ಬಾಗೂರು ಗ್ರಾಮದಲ್ಲಿನ ಆಸ್ಪತ್ರೆ ಕಟ್ಟಡ ಶಿಥಿಲಗೊಂಡಿರುವುದರಿಂದ ನೂತನ ಕಟ್ಟಡ ನಿರ್ಮಾಣಕ್ಕೆ ಮುಂದಾಗುವುದಾಗಿ ಭರವಸೆ ನೀಡಿದರು.

ಹಿರೀಸಾವೆ ಆಸ್ಪತ್ರೆಯ ದಂತವೈದ್ಯ ಸ್ಥಳೀಯರಾಗಿದ್ದು ವಾರಕ್ಕೆ 4 ದಿವಸ ಸೇವೆ ಸಲ್ಲಿಸುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ ಕ್ರಮಕ್ಕೆ ಮುಂದಾಗಬೇಕು ಎಂದರು.

ಆ್ಯಂಬುಲೆನ್ಸ್‌ ಸೇವೆ ನೀಡಿ: ಹಿರೀಸಾವೆಗೆ ಆ್ಯಂಬುಲೆನ್ಸ್‌ ಅವಶ್ಯವಿದೆ. ಈಬಗ್ಗೆ ಜಿಲ್ಲಾ ಮಂತ್ರಿ ರೇವಣ್ಣ ಅವರ ಗಮನಕ್ಕೆ ತರಲಾಗುವುದು. ಚನ್ನರಾಯಪಟ್ಟಣ ಶವಗಾರ ಶಿಥಿಲವಾಗಿದೆ ರಿಪೇರಿ ಮಾಡಿಸಲಾಗುವುದು. ಹಿರೀಸಾವೆ ಹೋಬಳಿ ಕೇಂದ್ರದಲ್ಲಿ ಶವಗಾರ ನಿರ್ಮಾಣ ಮಾಡಲಾಗುವುದು.

ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವುದರಿಂದ ಅಪಘಾತ ಸಂಖ್ಯೆ ಹೆಚ್ಚುತ್ತಿದ್ದು ಶವಾಗಾರದ ಅಗತ್ಯವಿದೆ ಎಂದು ಹೇಳಿದರು. ಆಡಳಿತ ವೈದ್ಯಾಧಿಕಾರಿ ಡಾ. ಮಹೇಶ್‌ ಮಾತನಾಡಿ, ಶಾಸಕರ ಮುತುವರ್ಜಿಯಿಂದ ತಾಲೂಕು ಕೇಂದ್ರದ ಆಸ್ಪತ್ರೆಗೆ 40 ಲಕ್ಷಗಳ ಉತ್ತಮ ಪರಿಕರಗಳು ನೀಡಲಾಗಿದೆ ಎಂದರು.

ಆಸ್ಪತ್ರೆಗೆ ವಾಷಿಂಗ್‌ ಮಿಷನ್‌, ರಿಪ್ರಿಜೇಟರ್‌ ಬೇಕಾಗಿದೆ, ಒಟಿ ಹಾಗೂ ಎಸಿಯುಗೆ ಎಸಿ ಅಗತ್ಯವಿದೆ, ಬೇಸಿಗೆ ಆರಂಭವಾಗಿರುವುದರಿಂದ 10 ಫ್ಯಾನ್‌ ಬೇಕಾಗಿದೆ ಎಂದು ಬೇಡಿಕೆ ಪಟ್ಟಿ ಸಲ್ಲಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕರು ಮಾತನಾಡಿ, ಒಂದು ತಿಗಳೊಳಗೆ ಕ್ರೋಮಾ ಸೆಂಟರ್‌ ರಿಪೇರಿ ಮಾಡಲಾಗುವುದು, ಜನರೇಟರ್‌ ವ್ಯವಸ್ಥೆ ಕಲ್ಪಿಸಲಾಗುವುದು. ರಕ್ಷಾಸಮಿತಿಯಲ್ಲಿನ ಹಣದಲ್ಲಿ 15 ಫ್ಯಾನ್‌ ಖರೀದಿಸುವಂತೆ ಸೂಚಿಸಿದರು.

ತಾ ಪಂ ಅಧ್ಯಕ್ಷೆ ರಂಜಿತಾ, ಆರೋಗ್ಯ ಸ್ಥಾಯಿ ಸಮಿತಿ ಸದಸ್ಯರಾದ ಸಿ.ಎನ್‌.ಶಶಿಧರ್‌, ಎಂ.ಆರ್‌.ಅನಿಲಕುಮಾರ್‌, ವೆಂಕಟೇಶ್‌, ಜಗದೀಶ್‌, ಮರಿಯಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್‌, ತಾಲೂಕು ಆರೋಗ್ಯಾಧಿಕಾರಿ ಡಾ.ಕಿಶೋರ್‌ ಇತರ ವೈದ್ಯರು ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.