ನಾಲ್ಕು ತಿಂಗಳಿಂದ ಮೊಟ್ಟೆ  ಖರೀದಿಗಿಲ್ಲ ಅನುದಾನ


Team Udayavani, Feb 27, 2019, 1:00 AM IST

egg.jpg

ಮಣಿಪಾಲ: ಗೌರವಧನದಲ್ಲೇ ಜೀವನ ಸಾಗಿಸುವ ಅಂಗನವಾಡಿ ಕಾರ್ಯಕರ್ತೆಯರು ಈಗ ತಮ್ಮ ಸಂಭಾವನೆಯಿಂದಲೇ ಅದೂ ಒಂದು ತಿಂಗಳಿಂದ ಬಾಕಿ ಇರುವ ಪರಿಸ್ಥಿತಿಯಲ್ಲಿ ಅಂಗನವಾಡಿ ಮಕ್ಕಳಿಗೆ ವಾರಕ್ಕೆರಡು ಬಾರಿ ಮೊಟ್ಟೆ ಖರೀದಿಸಿ ನೀಡುವ ಅನಿವಾರ್ಯತೆಗೆ ಸಿಲುಕಿದ್ದಾರೆ.

ಅಕ್ಟೋಬರ್‌ನಿಂದ ಮೊಟ್ಟೆ ಖರೀದಿಸಲು ಇಲಾಖೆಯಿಂದ ಹಣ ಬಾರದ ಕಾರಣ  ಸಮಸ್ಯೆ ಉಂಟಾಗಿದೆ. ಇರುವ ಅಲ್ಪ ಆದಾಯದಲ್ಲಿ ಅಂಗನವಾಡಿ ಮತ್ತು ಇಲಾಖೆಗೆ ಸಂಬಂಧಿಸಿದ ಯೋಜನೆಗಳ ಕೆಲಸ ಮಾಡುವ ಕಾರ್ಯಕರ್ತೆಯರಿಗೆ ಅನುದಾನ ಸಕಾಲಕ್ಕೆ ಬಾರದಿರುವುದು ಸಂಕಷ್ಟಕ್ಕೀಡು ಮಾಡಿದೆ.

ಉಡುಪಿ ಜಿಲ್ಲೆಯಲ್ಲಿ ಒಟ್ಟು 1,191 ಅಂಗನವಾಡಿ ಕೇಂದ್ರಗಳಿದ್ದು 24,311 ಮಂದಿ ಮಕ್ಕಳಿಗೆ ವಾರಕ್ಕೆರಡು ಬಾರಿ ಮೊಟ್ಟೆ ನೀಡಲಾಗುತ್ತದೆ. ಒಂದೆರಡು ತಿಂಗಳಾದರೂ ಅನುದಾನ ದೊರೆಯದಿದ್ದರೆ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದ ಕಾರ್ಯಕರ್ತೆಯರಿಗೆ 4 ತಿಂಗಳಿಂದ ಅನುದಾನ ಬಾರದಿರುವುದು ಭಾರೀ ತೊಂದರೆಯಾಗಿ ಪರಿಣಮಿಸಿದೆ. 

ಸರಕಾರದ “ಮೊಟ್ಟೆಗೆ’ 5 ರೂ. ಮಾತ್ರ! 
ಮಾರುಕಟ್ಟೆಯಲ್ಲಿ ಒಂದು ಮೊಟ್ಟೆಗೆ 5.50/6 ರೂ. ಆದರೂ ಇಲಾಖೆ ಕೊಡುವುದು 5 ರೂ. ಮಾತ್ರ. ಹೆಚ್ಚುವರಿ ಮೊತ್ತವನ್ನು ಕಾರ್ಯಕರ್ತೆಯರೇ ಭರಿಸಬೇಕು. ಜತೆಗೆ ಭಾಗ್ಯಲಕ್ಷ್ಮೀ ಸಹಿತ ವಿವಿಧ ಮಕ್ಕಳ ಕಲ್ಯಾಣ ಯೋಜನೆಗಳನ್ನು ಕಾರ್ಯಕರ್ತೆಯರು ಅನುಷ್ಠಾನಿಸಬೇಕಾಗುತ್ತದೆ. ಈ ವೇಳೆ ಕೆಲವೊಮ್ಮೆ ಹೆಚ್ಚುವರಿ ಪ್ರತಿಗಳ ಜೆರಾಕ್ಸ್‌ ಖರ್ಚನ್ನು ಅವರೇ ಭರಿಸಬೇಕಾಗುತ್ತದೆ. 8 ಸಾವಿರ ರೂ. ಗೌರವಧನದಲ್ಲಿ ಇವೆಲ್ಲವನ್ನೂ ಕಾರ್ಯಕರ್ತೆಯರು ನಿರ್ವಹಿಸಬೇಕಿದೆ.

ಗೌರವಧನ ನಿಯಮಿತವಾಗಿಲ್ಲ
ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನವೂ ನಿಯಮಿತವಾಗಿ ಬರುತ್ತಿಲ್ಲ ಎಂಬ ದೂರುಗಳಿವೆ. ಹಿಂದೊಮ್ಮೆ 3 ತಿಂಗಳ ಗೌರವಧನ ಬಾಕಿಯಾಗಿದ್ದರೆ ಪ್ರಸ್ತುತ ಒಂದು ತಿಂಗಳ ವೇತನ ಬಾಕಿ ಇದೆ ಎಂದು ತಿಳಿದು ಬಂದಿದೆ. ಕೊಡುವ ಗೌರವಧನವನ್ನಾದರೂ ಸಕಾಲಿಕವಾಗಿ ನೀಡಿದರೆ ಉತ್ತಮ ಎಂಬುದು ಕಾರ್ಯಕರ್ತೆಯರ ಒತ್ತಾಯವಾಗಿದೆ. 

ಯಾಕೆ ಸಮಸ್ಯೆ?
ಸೆಪ್ಟಂಬರ್‌ ವರೆಗೆ ಅಂಗನವಾಡಿ ಕಾರ್ಯಕರ್ತೆಯರ ವೈಯಕ್ತಿಕ ಖಾತೆಗೆ ಮೊಟ್ಟೆ ಖರೀದಿ
ಅನುದಾನವೂ ಬರುತ್ತಿತ್ತು. ಸರಕಾರದ ಆದೇಶ ಬಂದಿದ್ದರಿಂದ ಬಾಲವಿಕಾಸ ಸಮಿತಿ ಅಧ್ಯಕ್ಷರು ಮತ್ತು ಅಂಗನವಾಡಿ ಕಾರ್ಯಕರ್ತೆಯ ಹೆಸರಿಗೆ ಜಂಟಿ ಖಾತೆ ತೆರೆಯಬೇಕಿದ್ದು ಇದಕ್ಕೆ ಅನುದಾನ ಒದಗಿಸಬೇಕಾಗುತ್ತದೆ. ಜತೆಗೆ ಉಡುಪಿ ಮತ್ತು ಗದಗ ಜಿಲ್ಲೆಗಳಲ್ಲಿ ಖಜಾನೆ 2 ವ್ಯವಸ್ಥೆ ಪ್ರಾಯೋಗಿಕವಾಗಿ ಜಾರಿ ಮಾಡಿದ್ದರಿಂದ ಇದರ ಮೂಲಕವೇ ಅನುದಾನವನ್ನು ಜಂಟಿ ಖಾತೆಗೆ ಹಾಕಬೇಕಾಗುತ್ತದೆ. ಎಲ್ಲರೂ ಜಂಟಿ ಖಾತೆ ತೆರೆಯದೇ ಇದ್ದುದರಿಂದ ಈ ಸಮಸ್ಯೆ ಉಂಟಾಗಿದೆ. ಆದರೆ ಖಾತೆಯನ್ನು ಸಕಾಲದಲ್ಲಿ ತೆರೆದವರಿಗೂ ಅನುದಾನ ಬಾರದಿರುವುದು ವಿಪರ್ಯಾಸ.

ಖಜಾನೆ 2 ಮೂಲಕ ಅನುದಾನ ಬಿಡುಗಡೆ ಮಾಡಬೇಕಿದೆ. ಹಲವರು ಜಂಟಿ ಖಾತೆ ತೆರೆಯದಿರುವುದರಿಂದ ಸಮಸ್ಯೆಯಾಗಿತ್ತು. ಬಾಕಿ ಮೊತ್ತವನ್ನು ಒಂದೇ ಕಂತಿನಲ್ಲಿ ಖಾತೆಗೆ ಜಮೆ ಮಾಡಲಾಗುವುದು. ವಾರದಲ್ಲಿ ಸಮಸ್ಯೆ ಬಗೆಹರಿಯಲಿದೆ. ಯೋಜನೆಗಳಿಗೆ ಅರ್ಜಿ ಸಲ್ಲಿಸುವಾಗ ಒಂದೇ ಪ್ರತಿ ಸಲ್ಲಿಸಿದರೆ ಸಾಕು. ಹೆಚ್ಚುವರಿ ಪ್ರತಿ ಅಗತ್ಯವಿಲ್ಲ. 
-ಗ್ರೇಸಿ ಗೊನ್ಸಾಲ್ವಿಸ್‌, ಉಪನಿರ್ದೇಶಕಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.