ಸೇನೆಯ ಪ್ರತ್ಯುತ್ತರಕ್ಕೆ ವ್ಯಾಪಕ ಶ್ಲಾಘನೆ


Team Udayavani, Feb 27, 2019, 12:18 AM IST

100.jpg

ಬೆಂಗಳೂರು: ಜಮ್ಮು -ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಆತ್ಮಾಹುತಿ ದಾಳಿಗೆ ಪ್ರತಿಯಾಗಿ ಭಾರತೀಯ ಸೈನಿಕರು ಪಾಕ್‌ ಆಕ್ರಮಿತ ಕಾಶ್ಮೀರದ ಉಗ್ರರ ಅಡಗುತಾಣಗಳ ಮೇಲೆ ವೈಮಾನಿಕ ದಾಳಿ ನಡೆಸಿದ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಮಂಗಳವಾರ ರಾಜ್ಯದೆಲ್ಲೆಡೆ ಸಿಹಿ ವಿತರಿಸಿ-ಪಟಾಕಿ ಸಿಡಿಸಿ ಸಂಭ್ರಮಾಚರಿಸಿದರು.

ಮೈಸೂರು ಪ್ರಜ್ಞಾವಂತ ನಾಗರಿಕ ವೇದಿಕೆ ವತಿಯಿಂದ ಅಗ್ರಹಾರ ವೃತ್ತದಲ್ಲಿ ಸಾರ್ವಜನಿಕರಿಗೆ ಸಿಹಿ ವಿತರಿಸಿ, ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಲಾಯಿತು. ಕೋಲಾರ ನಗರದ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದ ಬಳಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಪಟಾಕಿ ಸಿಡಿಸಿ ತಮಟೆ ಬಾರಿಸಿ ಜನರಿಗೆ ಸಿಹಿ ಹಂಚಿದ ಕಾರ್ಯಕರ್ತರು, ಉಗ್ರವಾದದ ವಿರುದ್ಧ   ಭಾರತ ದಿಟ್ಟ ಉತ್ತರ ನೀಡಿದೆ ಎಂದು ಸಂಭ್ರಮಿಸಿದರು. ರಾಮನಗರದಲ್ಲಿ ಬಿಜೆಪಿ ಕಾರ್ಯಕರ್ತರು, ಚಾಮರಾಜನಗರದಲ್ಲಿ ಆಜಾದ್‌ ಹಿಂದೂ ಸೇನೆ ವತಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಿಸಲಾಯಿತು. ಹಾಸನದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಭಾರತ ಧ್ವಜವನ್ನು ಪ್ರದರ್ಶಿಸಿ ದೇಶಭಕ್ತಿ ಮರೆದರು.

ಮಂಡ್ಯ, ಚಿಕ್ಕಬಳ್ಳಾಪುರ, ತುಮಕೂರಿನಲ್ಲೂ ಕನ್ನಡ ಪರ ಹಾಗೂ ಹಿಂದೂಪರ ಸಂಘಟನೆಗಳ ವತಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.

ಮಂಗಳೂರು, ಉಡುಪಿ, ಧಾರವಾಡ, ಹುಬ್ಬಳ್ಳಿ, ಚಿತ್ರದುರ್ಗ, ಕಲಬುರಗಿ, ಶಿವಮೊಗ್ಗ, ಚಿಕ್ಕಮಗಳೂರು, ವಿಜಯಪುರ ಸೇರಿ ರಾಜ್ಯದ ಹಲವೆಡೆ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಾಚರಿಸಿದರು.

ಸೇನೆಗೆ ಸೆಲ್ಯೂಟ್‌ ಮಾಡಿದ ಕಲಾವತಿ
ಭಾರತೀನಗರ: ಪುಲ್ವಾಮಾ ದಾಳಿಗೆ ಏರ್‌ ಸರ್ಜಿಕಲ್‌ ಸ್ಟ್ರೈಕ್‌ ಮೂಲಕ ಭಾರತ ಪ್ರತಿಕಾರ ತೀರಿಸಿಕೊಂಡ ವಿಷಯ ತಿಳಿಯುತ್ತಿದ್ದಂತೆಯೇ ಹುತಾತ್ಮ ಯೋಧ ಎಚ್‌.ಗುರು ಅವರ ಪತ್ನಿ ಕಲಾವತಿ ತಿಥಿ ಕಾರ್ಯದ ಸಮಾಧಿ ಸ್ಥಳದಲ್ಲಿ ಎದ್ದುನಿಂತು ಭಾರತೀಯ ಸೇನೆಗೆ ಸೆಲ್ಯೂಟ್‌ ಮಾಡಿದರು. ನಂತರ ಮಾತನಾಡಿದ ಅವರು, ನನ್ನ ಪತಿಯ ಪುಣ್ಯತಿಥಿ ದಿನದಂದೇ ಭಾರತೀಯ ಸೇನೆ ಉಗ್ರರ ಮೇಲೆ ಪ್ರತೀಕಾರ ತೀರಿಸಿಕೊಂಡಿರುವುದು ನನಗೆ ಖುಷಿಯಾಗಿದೆ. ನಮ್ಮ ಸೈನಿಕರ ಬಗ್ಗೆ ಹೆಮ್ಮೆಯೆನಿಸುತ್ತಿದೆ. ನಮ್ಮ ದೇಶದ ಸೈನಿಕರಿಗೆ ಆಯಸ್ಸು, ಆರೋಗ್ಯ ಕೊಟ್ಟು ದೇವರು ಕಾಪಾಡಲಿ ಎಂದರು. ಆದರೆ ಇಂತಹ ಪ್ರತೀಕಾರದ ದಾಳಿಗಳು ಪಾಕ್‌ ಮೇಲೆ ನಿಲ್ಲಬಾರದು. ಮತ್ತಷ್ಟು ನಡೆಯುತ್ತಿರಬೇಕು. ಶಾಂತಿ ಮಾತುಕತೆ ಬೇಡ ಯುದಟಛಿ ಬೇಕು. ಪಾಕಿ ಸ್ತಾನ ನಿರ್ನಾಮವಾಗಬೇಕೆಂದು ಹೇಳಿದರು.ಗುರು  ತಂದೆ ಹೊನ್ನಯ್ಯ ಮಾತನಾಡಿ, ದಾಳಿ ನಡೆಸಿದ್ದು ತುಂಬಾ ಸಂತೋಷದ ವಿಚಾರ. ನನ್ನ ಮಗನ ಮೇಲೆ ದಾಳಿ ಮಾಡಿದವರನ್ನು ಯಾವುದೇ ಕಾರಣಕ್ಕೂ ಬಿಡಬೇಡಿ ಎಂದರು.

ಎಚ್‌ಡಿಕೆ ಸ್ವಾಗತ: ಭಾರತೀಯ ಸೇನೆ ಬಾಲಾಕೋಟ್‌ನಲ್ಲಿ ವೈಮಾನಿಕ ದಾಳಿ ನಡೆಸಿ ಜೈಶ್‌ ಉಗ್ರರ ಅಡಗುದಾಣ ನಾಶಪಡಿಸಿರುವುದನ್ನು ಸಿಎಂ ಎಚ್‌.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು, ದಾಳಿ ಬಗ್ಗೆ ಚರ್ಚೆ ಅನಗತ್ಯ. ಸರ್ಜಿಕಲ್‌ ಆಪರೇಷನ್‌ ಅಗತ್ಯವಿತ್ತು. ಉಗ್ರ ಗಾಮಿಗಳ ದಾಳಿಗೆ ಪ್ರತಿಕಾರ ಆಗಬೇಕಿತ್ತು. ಅದನ್ನು ದೇಶದ ಜನ ಬಯಸಿದ್ದರು ಎಂದು ಪ್ರತಿಕ್ರಿಯಿಸಿದರು. ವಾಯು ದಾಳಿಯನ್ನುದೇಶದ ಜನರು ಸ್ವಾಗತಿಸುತ್ತಿದ್ದಾರೆ. ದೇಶದ ಭದ್ರತೆಯ ದೃಷ್ಟಿಯಿಂದ ಇಂತಹ ಕ್ರಮಗಳನ್ನು ಬೆಂಬಲಿಸಬೇಕು. ಆದರೆ ಇದು ರಾಜಕೀಯಕ್ಕೆ ಬಳಕೆಯಾಗಬಾರದು ಎಂದರು.

ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಬೆಂಗಳೂರು:
ಬಿಜೆಪಿ ರಾಜ್ಯ ಕಚೇರಿ ಎದುರು ನಡೆದ ಸಂಭ್ರಮಾಚರಣೆಯಲ್ಲಿ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌, ಬೆಂಗಳೂರು ನಗರ ಬಿಜೆಪಿ ಅಧ್ಯಕ್ಷ ಪಿ.ಎನ್‌.ಸದಾಶಿವ, ರಾಜ್ಯ ಬಿಜೆಪಿ ಸಹ ವಕ್ತಾರರಾದ ಅನ್ವರ್‌ ಮಾಣಿಪ್ಪಾಡಿ, ಎಸ್‌.ಪ್ರಕಾಶ್‌ ಇತರರು ಪಾಲ್ಗೊಂಡಿದ್ದರು. ಕಾರ್ಯಕರ್ತರು ಪಟಾಕಿ ಸಿಡಿಸಿ, ಜೈಕಾರ, ಘೋಷಣೆ ಕೂಗಿ ಭಾರತೀಯ ಸೇನೆ ಹಾಗೂ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು. ವಿವಿ ಗೋಪುರದಲ್ಲಿರುವ ಕಚೇರಿಯಲ್ಲಿ ಕಾರ್ಯಕರ್ತರೊಂದಿಗೆ ಸಿಹಿ ಹಂಚಿ ಸಂಭ್ರಮಿಸಿದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಪ್ರಧಾನಿ ಮೋದಿಯವರು ನುಡಿದಂತೆ ನಡೆದಿದ್ದಾರೆ. ಇದನ್ನು ರಾಜಕೀಯಗೊಳಿಸುವುದು ಸೂಕ್ತವಲ್ಲ ಎಂದರು.

ಟ್ವೀಟರ್‌ನಲ್ಲಿ ಅಭಿನಂದನೆ ಸುರಿಮಳೆ: ಭಾರತೀಯ ವಾಯುಪಡೆಯ ಪ್ರತಿದಾಳಿ ವಿಚಾರ ತಿಳಿಯುತ್ತಿದ್ದಂತೆ ಕೇಂದ್ರ ಸರ್ಕಾರ ಹಾಗೂ ಭಾರತೀಯ ವಾಯುಪಡೆಗೆ ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌, ಟ್ವಿಟರ್‌ನಲ್ಲಿ ಅಭಿನಂದನೆಯ ಮಹಾಪೂರವೇ ಹರಿದುಬಂದಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.