ಉಗ್ರ ಹಣ: ದಕ್ಷಿಣ ಕಾಶ್ಮೀರದ 11 ಕಡೆಗಳಲ್ಲಿ ಎನ್ಐಎ ಶೋಧ ಕಾರ್ಯಾಚರಣೆ
Team Udayavani, Feb 27, 2019, 10:35 AM IST
ಹೊಸದಿಲ್ಲಿ : ಕಳೆದ ಫೆ.14ರಂದು ನಡೆದಿದ್ದ ಪುಲ್ವಾಮಾ ಉಗ್ರ ದಾಳಿಯನ್ನು ಅನುಸರಿಸಿ ರಾಷ್ಟ್ರೀಯ ತನಿಖಾ ತಂಡ (ಎನ್ಐಎ) ಆರಂಭಿಸಿದ್ದ ಉಗ್ರ ಹಣ ಪೂರೈಕೆ ಮಾರ್ಗಗಳ ಶೋಧ ಕಾರ್ಯವನ್ನು ಮುಂದುವರಿಸಿದ್ದು ಇಂದು ಬುಧವಾರ ಅದು ದಕ್ಷಿಣ ಕಾಶ್ಮೀರದ ಸುಮಾರು 11 ಸ್ಥಳಗಳಲ್ಲಿ ಶೋಧ ಕಾರ್ಯ ಕೈಗೊಂಡಿತು.
ಈಚಿನ ಪುಲ್ವಾಮಾ ಉಗ್ರ ದಾಳಿ ಮುಖ್ಯ ಆರೋಪಿಗಳೆಂದು ಗುರುತಿಸಲ್ಪಟ್ಟಿರುವ ಮತ್ತು ಜೈಶ್ ಎ ಮೊಹಮ್ಮದ್ ಸಕ್ರಿಯ ಉಗ್ರರಾಗಿರುವ ಮುದಸ್ಸಿರ್ ಅಹ್ಮದ್ ಖಾನ್ ಮತ್ತು ಸಜ್ಜದ್ ಭಟ್ ಅವರ ಮನೆಗಳ ಮೇಲೆ ಎನ್ಐಎ ದಾಳಿ ನಡೆಸಿತು.
ದಕ್ಷಿಣ ಕಾಶ್ಮೀರದ ತ್ರಾಲ್, ಆವಂತಿಪೋರಾ ಮತ್ತು ಪುಲ್ವಾಮಾ ಪ್ರದೇಶಗಳಲ್ಲಿ ಜೆಇಎಂ ಪರ ಕೆಲಸ ಮಾಡುತ್ತಿದ್ದ ಹಲವು ಶಂಕಿತರ ಮನೆಗಳ ಮೇಲೂ ಎನ್ಐಎ ಇಂದು ದಾಳಿ ನಡೆಸಿತು. ಈ ಸಂದರ್ಭದಲ್ಲಿ ಸಂಕೇತ ಬರಹಗಳನ್ನು ಒಳಗೊಂಡ ಡೈರಿಗಳನ್ನು ಮತ್ತು ಹಲವು ಅಪರಾಧಿಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಯಿತು ಎಂದು ಎನ್ಐಎ ಹೇಳಿದೆ.
ದಕ್ಷಿಣ ಕಾಶ್ಮೀರದ ಮೂವರು ಮುಖ್ಯ ಪ್ರತ್ಯೇಕತಾವಾದಿ ನಾಯಕರಾದ ಮೊಹಮ್ಮದ್ ಶಬಾನ್ ದಾರ್, ಶವ್ಕತ್ ಮೌಲವಿ ಮತ್ತು ಯಾಸ್ಮಿನ್ ರಜಾ ಅವರ ಮನೆಗಳ ಮೇಲೂ ದಾಳಿ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ